• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ನಮೋ ಬ್ರಿಗೇಡ್ ಗೆ ಮತ್ತೆ ಚಕ್ರವರ್ತಿ ಸೂಲಿಬೆಲೆ ಸಾರಥ್ಯದಲ್ಲಿ ಚಾಲನೆ?

Tulunadu News Posted On September 4, 2018
0


0
Shares
  • Share On Facebook
  • Tweet It

ಮಂಗಳೂರು: ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ನಮೋ ಬ್ರಿಗೆಡ್ ಗೆ ಮತ್ತೇ ಚಾಲನೆ ದೊರೆಯಲಿದೆ. ಹೌದು, ಈ ಸುದ್ದಿ ಎಲ್ಲೆಡೆ ಈಗ ಕೇಳಿ ಬರುತ್ತಿದೆ. ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ಮೋದಿ ಅಭಿಮಾನಿಗಳನ್ನೆಲ್ಲ ಅದರಲ್ಲೂ ಯುವ ಸಮೂಹ ಒಟ್ಟಿಗೆ ಸೇರಿಸಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ನಮೋ ಬ್ರಿಗೇಡ್ ಸಂಘಟನೆ ಮತ್ತೊಮ್ಮೆ ಪ್ರಾರಂಭವಾಗುವ ಲಕ್ಷಣ ಕಾಣುತ್ತಿದೆ.

ಕಳೆದ ಬಾರಿ ಮಂಗಳೂರಿನಿಂದ ಪ್ರಾರಂಭವಾದ ಈ ಸಂಘಟನೆ ರಾಜ್ಯಾದ್ಯಂತ ದೊಡ್ಡಮಟ್ಟದಲ್ಲಿ ಹೆಸರು ಮಾಡಲು ಚಕ್ರವರ್ತಿ ಸೂಲಿಬೆಲೆ ಪ್ರಮುಖ ಪಾತ್ರವಹಿಸಿದ್ದರು. ಅದಾಗಲೇ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಕರ್ನಾಟಕ ಬಿಜೆಪಿಗೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಮೋ ಬ್ರಿಗೇಡ್ ಮತ್ತೊಮ್ಮೆ ಜೀವ ತುಂಬಿದ್ದು ಅಲ್ಲಗಳೆಯುವಂತಿಲ್ಲ. ರಾಜ್ಯ ಬಿಜೆಪಿ ನಾಯಕರ ನಡವಳಿಕೆಯಿಂದ ಬೇಸತ್ತ ಹಲವಾರು ಯುವಕರು ಮೋದಿ ಹೆಸರಿನಲ್ಲಿ ಒಟ್ಟು ಸೇರಿ ಮೋದಿಯವರನ್ನು ಪ್ರಧಾನಿಯಾಗಿಸುವ ಏಕೈಕ ಗುರಿಯೊಂದಿಗೆ ಸಂಘಟಿತರಾಗಿದ್ದರು. ರಾಜ್ಯದಲ್ಲಿ ಲೋಕಸಭೆಯ 19 ಸೀಟುಗಳು ಪಡೆದಿರುವುದರ ಹಿಂದೆ ನಮೋ ಬ್ರಿಗೇಡ್ ಪಾತ್ರ ಪ್ರಮುಖವಾಗಿತ್ತು ಅಂತ ಬಿಜೆಪಿ ನಾಯಕರೇ ಅಂದು ಹೇಳಿಕೊಂಡಿದ್ದರು.

ಈಗ ‘ಮತ್ತೊಮ್ಮೆ ಮೋದಿ ‘ ಎಂಬ ಘೋಷವಾಕ್ಯದೊಂದಿಗೆ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನಮೋ ಬ್ರಿಗೇಡ್ ಪ್ರಾರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಯುವ ಪೀಳಿಗೆಯಲ್ಲಿ ಹೆಚ್ಚಿದ ನಮೋ ಅಭಿಮಾನ ಪರಿಗಣಿಸಿ ಮತ್ತು ಯುವ ಶಕ್ತಿಯಲ್ಲಿ ಅಡಕವಾಗಿರುವ ಅಭಿಮಾನ ವ್ಯರ್ಥವಾಗದ ರೀತಿಯಲ್ಲಿ ಸೂಕ್ತವಾಗಿ ಬಳಸಿ ಒಂದೇ ಸೂರಿನಡಿಯಲ್ಲಿ ಸೇರಿಸುವುದು ಆ ಮೂಲಕ ಕರ್ನಾಟಕದಲ್ಲಿ ಮತ್ತೊಮ್ಮೆ ಮೋದಿಯವರ ಪರ ಅತ್ಯಧಿಕ ಸೀಟು ಗೆಲ್ಲಿಸುವುದು ಇದರ ಮುಖ್ಯ ಉದ್ದೇಶ ಅಂತ ಹೇಳಲಾಗುತ್ತಿದೆ.

ಈ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಅಧಿಕೃತ ಘೋಷಣೆ ಮಾಡದೇ ಇದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ನಮೋ ಬ್ರಿಗೇಡ್ ಮತ್ತೊಮ್ಮೆ ಪ್ರಾರಂಭವಾಗಲೇಬೇಕು ಎಂಬ ಕೂಗು ಕೇಳಿಬರುತ್ತಿದೆ. ಚಕ್ರವರ್ತಿ ಈ ಬಗ್ಗೆ ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search