• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ನಮೋ ಬ್ರಿಗೇಡ್ ಗೆ ಮತ್ತೆ ಚಕ್ರವರ್ತಿ ಸೂಲಿಬೆಲೆ ಸಾರಥ್ಯದಲ್ಲಿ ಚಾಲನೆ?

Tulunadu News Posted On September 4, 2018
0


0
Shares
  • Share On Facebook
  • Tweet It

ಮಂಗಳೂರು: ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ನಮೋ ಬ್ರಿಗೆಡ್ ಗೆ ಮತ್ತೇ ಚಾಲನೆ ದೊರೆಯಲಿದೆ. ಹೌದು, ಈ ಸುದ್ದಿ ಎಲ್ಲೆಡೆ ಈಗ ಕೇಳಿ ಬರುತ್ತಿದೆ. ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ಮೋದಿ ಅಭಿಮಾನಿಗಳನ್ನೆಲ್ಲ ಅದರಲ್ಲೂ ಯುವ ಸಮೂಹ ಒಟ್ಟಿಗೆ ಸೇರಿಸಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ನಮೋ ಬ್ರಿಗೇಡ್ ಸಂಘಟನೆ ಮತ್ತೊಮ್ಮೆ ಪ್ರಾರಂಭವಾಗುವ ಲಕ್ಷಣ ಕಾಣುತ್ತಿದೆ.

ಕಳೆದ ಬಾರಿ ಮಂಗಳೂರಿನಿಂದ ಪ್ರಾರಂಭವಾದ ಈ ಸಂಘಟನೆ ರಾಜ್ಯಾದ್ಯಂತ ದೊಡ್ಡಮಟ್ಟದಲ್ಲಿ ಹೆಸರು ಮಾಡಲು ಚಕ್ರವರ್ತಿ ಸೂಲಿಬೆಲೆ ಪ್ರಮುಖ ಪಾತ್ರವಹಿಸಿದ್ದರು. ಅದಾಗಲೇ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಕರ್ನಾಟಕ ಬಿಜೆಪಿಗೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಮೋ ಬ್ರಿಗೇಡ್ ಮತ್ತೊಮ್ಮೆ ಜೀವ ತುಂಬಿದ್ದು ಅಲ್ಲಗಳೆಯುವಂತಿಲ್ಲ. ರಾಜ್ಯ ಬಿಜೆಪಿ ನಾಯಕರ ನಡವಳಿಕೆಯಿಂದ ಬೇಸತ್ತ ಹಲವಾರು ಯುವಕರು ಮೋದಿ ಹೆಸರಿನಲ್ಲಿ ಒಟ್ಟು ಸೇರಿ ಮೋದಿಯವರನ್ನು ಪ್ರಧಾನಿಯಾಗಿಸುವ ಏಕೈಕ ಗುರಿಯೊಂದಿಗೆ ಸಂಘಟಿತರಾಗಿದ್ದರು. ರಾಜ್ಯದಲ್ಲಿ ಲೋಕಸಭೆಯ 19 ಸೀಟುಗಳು ಪಡೆದಿರುವುದರ ಹಿಂದೆ ನಮೋ ಬ್ರಿಗೇಡ್ ಪಾತ್ರ ಪ್ರಮುಖವಾಗಿತ್ತು ಅಂತ ಬಿಜೆಪಿ ನಾಯಕರೇ ಅಂದು ಹೇಳಿಕೊಂಡಿದ್ದರು.

ಈಗ ‘ಮತ್ತೊಮ್ಮೆ ಮೋದಿ ‘ ಎಂಬ ಘೋಷವಾಕ್ಯದೊಂದಿಗೆ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನಮೋ ಬ್ರಿಗೇಡ್ ಪ್ರಾರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಯುವ ಪೀಳಿಗೆಯಲ್ಲಿ ಹೆಚ್ಚಿದ ನಮೋ ಅಭಿಮಾನ ಪರಿಗಣಿಸಿ ಮತ್ತು ಯುವ ಶಕ್ತಿಯಲ್ಲಿ ಅಡಕವಾಗಿರುವ ಅಭಿಮಾನ ವ್ಯರ್ಥವಾಗದ ರೀತಿಯಲ್ಲಿ ಸೂಕ್ತವಾಗಿ ಬಳಸಿ ಒಂದೇ ಸೂರಿನಡಿಯಲ್ಲಿ ಸೇರಿಸುವುದು ಆ ಮೂಲಕ ಕರ್ನಾಟಕದಲ್ಲಿ ಮತ್ತೊಮ್ಮೆ ಮೋದಿಯವರ ಪರ ಅತ್ಯಧಿಕ ಸೀಟು ಗೆಲ್ಲಿಸುವುದು ಇದರ ಮುಖ್ಯ ಉದ್ದೇಶ ಅಂತ ಹೇಳಲಾಗುತ್ತಿದೆ.

ಈ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಅಧಿಕೃತ ಘೋಷಣೆ ಮಾಡದೇ ಇದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ನಮೋ ಬ್ರಿಗೇಡ್ ಮತ್ತೊಮ್ಮೆ ಪ್ರಾರಂಭವಾಗಲೇಬೇಕು ಎಂಬ ಕೂಗು ಕೇಳಿಬರುತ್ತಿದೆ. ಚಕ್ರವರ್ತಿ ಈ ಬಗ್ಗೆ ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 3
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search