• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಐಎಡಿಬಿ ವಂಚನೆ : ಸಚಿವ ಯು.ಟಿ.ಖಾದರ್‌ಗೆ ಮುತ್ತಿಗೆ

Tulunadu News Posted On September 4, 2018
0


0
Shares
  • Share On Facebook
  • Tweet It

ಸುರತ್ಕಲ್ : ಎಂಆರ್‌ಪಿಎಲ್ ಯೋಜನಾ ವಿಸ್ತರಣೆಯಲ್ಲಿ ಕೆಐಎಡಿಬಿ ಅಕ್ರಮ ನಡೆಸಿದೆ ಎಂದು ಸಚಿವ ಯು.ಟಿ.ಖಾದರ್‌ ಕಾರಿಗೆ ಮುತ್ತಿಗೆ ಹಾಕಲಾಗಿದೆ. ವ್ಯವಸಾಯ ಮಾಡುವಷ್ಟು ಭೂಮಿ ಫಲವತ್ತಾಗಿದ್ದರೂ ಅದನ್ನು ಒಣ ಭೂಮಿ ಎಂದು ಎಂಆರ್‌ಪಿಎಲ್ ಸಲ್ಲಿಸಿದ ಸುಳ್ಳು ಅರ್ಜಿಯನ್ನು ಒಪ್ಪಿಕೊಂಡು ರೈತರನ್ನು ವಂಚಿಸಲಾಗಿದೆ ಎಂಬುದು ಆರೋಪ. ಎಂಆರ್‌ಪಿಎಲ್ ಯೋಜನಾ ವಿಸ್ತರಣೆಗೆ ಸಂಬಂಧಿಸಿದಂತೆ ಕುತ್ತೆತ್ತೂರು, ಪೆರ್ಮುದೆ ಮತ್ತು ಇತರ ಗ್ರಾಮಗಳ ಕೃಷಿ ಭೂಮಿಯನ್ನು ಸ್ವಾಧೀನಕ್ಕೆ ಪಡೆದುಕೊಳ್ಳುವ ಪ್ರಕ್ರಿಯೆಯಲ್ಲಿ ಕೆಐಎಡಿಬಿ ಅಧಿಕಾರಿಗಳು ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಕೆಐಎಡಿಬಿಯ ಈ ಅಕ್ರಮವನ್ನು ಪ್ರತಿಭಟಿಸಿ ವಿಶೇಷ ಭೂಸ್ವಾಧೀನಾಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ತರು ಆಗ್ರಹಿಸಿದ್ದಾರೆ. ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್‌ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರು ಸ್ವಾಧೀನತೆಯ ಪ್ರಕ್ರಿಯೆಯಲ್ಲಿ ಮೇಲ್ನೋಟಕ್ಕೆ ಅಕ್ರಮ ಕಂಡು ಬಂದಿದ್ದು, ತನಿಖೆ ನಡೆಸುತ್ತೇವೆ ಎಂದು ಆಶ್ವಾಸನೆಯನ್ನು ನೀಡಿದ್ದಾರೆ. ಅಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪೂರಕ ದಾಖಲೆಗಳನ್ನು ಸಲ್ಲಿಸಿದ್ದರು ಯಾವುದೇ ತನಿಖೆ ನಡೆಸಿಲ್ಲ ಎಂದು ಗ್ರಾಮಸ್ಥರು ದೂರಿದರು.

ತನಿಖೆ ನಡೆಸಲು ಜಿಲ್ಲಾಡಳಿತವು ನಿರಾಸಕ್ತಿಯನ್ನು ತೋರಿಸುತ್ತಿದೆ. ಭ್ರಷ್ಟ ಕೆಐಎಡಿಬಿ ಅಧಿಕಾರಿಗಳ ಪರವಾಗಿ ನಿಲುವು ತಳಿದಂತೆ ಕಂಡು ಬರುತ್ತಿದೆ. ಈ ರೀತಿಯ ಕಾನೂನು ಬದ್ಧ ಹೋರಾಟಕ್ಕೆ ಮಾನ್ಯತೆ ಸಿಗದೇ ಇದ್ದರೆ ನಾವು ಯಾವ ರೀತಿ ಪ್ರತಿಭಟನೆಯನ್ನು ಮಾಡಬೇಕು? ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.

ಪೆರ್ಮುದೆ, ಕುತ್ತೆತ್ತೂರು ಮತ್ತಿತರ ಗ್ರಾಮಗಳ ಭೂಮಿಯು ಮೂರು ಬೆಳೆ ಬೆಳೆಯುವಷ್ಟು ಫಲವತ್ತಾಗಿದ್ದರೂ ಅದನ್ನು ಒಣ ಭೂಮಿ ಎಂದು ಎಂಆರ್‌ಪಿಎಲ್ ಸಲ್ಲಿಸಿದ ಸುಳ್ಳು ಅರ್ಜಿಯನ್ನು ಒಪ್ಪಿಕೊಂಡು ರೈತರನ್ನು ವಂಚಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದು ಕೃಷಿಯೋಗ್ಯ ಭೂಮಿ ಎಂಬುದಕ್ಕೆ ಇಲ್ಲಿ ನಡೆಯುತ್ತಿದ್ದ ಕೃಷಿಯೇ ಸಾಕ್ಷಿಯಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆಯಬೇಕೆಂಬ ನಿಯಮವನ್ನು ಉಲ್ಲಂಘಿಸಲಾಗಿದೆ. ರೈತರಿಗೆ ವಂಚಿಸಿ ಅವರ ಕೊರಳಿಗೆ ಉರುಳು ಹಾಕಲು ಸಿದ್ದರಾದವರ ಪರವಾಗಿ ವರ್ತಿಸುವ ಜನಪ್ರತಿನಿಧಿಗಳು ರಾಜೀನಾಮೆ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search