• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಚಿಂತಕರ ಮೇಲೆ ಸುಮೋಟೋ ಕೇಸ್ ದಾಖಲಿಸಿ: ಮುತಾಲಿಕ್

Tulunadu News Posted On September 6, 2018
0


0
Shares
  • Share On Facebook
  • Tweet It

ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಗೌರಿ ಲಂಕೇಶ್ ಹತ್ಯೆಯಾಗಿ ವರ್ಷ ಕಳೆದ ಹಿನ್ನೆಲೆಯಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ “ನಾನು‌ ನಗರದ ನಕ್ಸಲೇಟ್ ಎಂದು ಸಾಹಿತಿ ಗಿರೀಶ್ ಕಾರ್ನಾಡ್ ಬೋರ್ಡ್‌ ಹಾಕಿಕೊಂಡಿದ್ದು ಕಾನೂನು ಬಾಹಿರ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು.ಇಂದು ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಪ್ರಗತಿಪರರು ಬ್ಯಾನ್ ಆರ್ಗನೈಜೇಶನ್ ಪರವಾಗಿ ನಿಂತಿರುವುದು ದೊಡ್ಡ ಅಪರಾಧ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹಕ್ಕಾಗಿ ವಿಶೇಷ ಪಡೆಯಿದೆ.

ಯಾರು ಕಾನೂನು ಬಾಹಿರವಾಗಿ ನಡೆದುಕೊಳ್ಳುತ್ತಾರೋ ಅವರನ್ನು ಹತ್ತಿಕ್ಕಲು ಸರ್ಕಾರವೇ ರಚಿಸಿದ ತಂಡವಿದೆ. ಆದರೂ ನಾನೂ ನಕ್ಸಲ್ ಎಂದು ಬೋರ್ಡ್ ಹಾಕಿಕೊಂಡು ಕಾರ್ಯಕ್ರಮ ನಡೆಸಿದವರು ಅಪರಾಧಿಗಳು. ಸಾಹಿತಿ ಗಿರೀಶ್ ಕಾರ್ನಾಡ್, ಪ್ರಕಾಶ್ ರೈ, ರೆಹಮತ್ ತರೀಕೆರೆ ಮೊದಲಾದವರು ಕಾರ್ಯಕ್ರಮ ನಡೆಸಿದ್ದು, ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಿದ ಸಾಹಿತಿ, ಚಿಂತಕರುಗಳ ಮೇಲೆ ಸರ್ಕಾರ ಸುಮೋಟೋ ಕೇಸ್ ದಾಖಲಿಸಲಿ ಎಂದು ಆಗ್ರಹಿಸಿದರು. ನಗರ ನಕ್ಸಲ್ ಎನ್ನುವುದರ ಅರ್ಥ ಇವರು ಕಾಡಿನಲ್ಲಿರುವವರಿಗೆ ಸಹಕಾರ ನೀಡುತ್ತಿದ್ದಾರಾ? ಎಂಬ ಸಂಶಯ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ಹೈದರಾಬಾದ್ ಸ್ಫೋಟ ಪ್ರಕರಣ ಆರೋಪಿಗಳಿಗೆ ಹೈದರಾಬಾದ್ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.

ಆ ಆರೋಪಿಗಳು ಚಿಕ್ಕಮಗಳೂರಲ್ಲಿ ತರಬೇತಿ ಪಡೆದು ಸಹಕಾರ ಪಡೆದಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಕಾಫಿನಾಡು ಬಾಂಗ್ಲಾ ವಲಸಿಗರು ಸೇರಿದಂತೆ ಭಯೋತ್ಪಾದಕರ ಸೆಂಟರ್ ಆಗುವ ಭಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search