• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ದೇಶ ದ್ರೋಹಿಗಳ ಮಹಾತಾಯಿ ಗೌರಿ ಲಂಕೇಶ್: ಚೈತ್ರಾ ಕುಂದಾಪುರ ವಿವಾದಾತ್ಮಕ ಹೇಳಿಕೆ

Tulunadu News Posted On September 6, 2018
0


0
Shares
  • Share On Facebook
  • Tweet It

ಮಂಗಳೂರು: ಕರಾವಳಿಯ ಹಿಂದೂ ಫೈರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಚೈತ್ರ ಕುಂದಾಪುರ ಗೌರಿ ಲಂಕೇಶ್ ಕುರಿತು ಹೇಳಿಕೆಯೊಂದನ್ನು ನೀಡಿದ್ದು, ಭಾರೀ ಚರ್ಚೆಗೆ ಗುರಿಯಾಗಿದೆ. ಮಂಗಳೂರಲ್ಲಿ ಬುಧವಾರ ಆಯೋಜಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಚೈತ್ರಾ ಕುಂದಾಪುರ ಗೌರಿ ಲಂಕೇಶ್ ದೇಶದ್ರೋಹಿಗಳ ಮಹಾತಾಯಿ ಎಂದು ಹೇಳಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಿಂದೂ ಸನಾತನ ಸಂಸ್ಥೆಯನ್ನು ನಿಷೇಧಿಸಲು ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಹಿಂದೂ ಜನಜಾಗೃತಿ ಸಮಿತಿ ಮಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.

ಈ ಸಂದರ್ಭದಲ್ಲಿ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಚೈತ್ರಾ ಕುಂದಾಪುರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕುರಿತು ಮಾತನಾಡಿದ ಅವರು, ಸತ್ತ ಮೇಲೆ ಯಾವ ರೀತಿ ವ್ಯಕ್ತಿಯನ್ನು ಹೀರೋ ಮಾಡುತ್ತಾರೆ ಎನ್ನುವುದಕ್ಕೆ ಗೌರಿ ಲಂಕೇಶ್ ಸಾವೇ ಉತ್ತಮ ಉದಾಹರಣೆ. ಗೌರಿ ಲಂಕೇಶ್ ಸತ್ತಾಗ ಕರ್ನಾಟಕದ ಒಬ್ಬ ಪತ್ರಕರ್ತ ಬರೆದಿದ್ದಾನೆ.

ಗೌರಿ ಲಂಕೇಶ್ ಗುಂಡೇಟಿನಿಂದ ಸಾಯುವ ಬದಲು ಗುಂಡು ಹಾಕಿ ಸತ್ತಿದ್ದರೆ ಸಿಂಗಲ್ ಕಾಲಂ ನ್ಯೂಸ್ ಆಗುತ್ತಿತ್ತು. ಆದರೆ ಗುಂಡೇಟಿನಿಂದ ಸತ್ತಿದ್ದೇ ಪ್ರಮುಖ ಸುದ್ದಿಯಾಗಿದೆ ಎಂದು ಬರೆದಿದ್ದ ಎಂದು ವ್ಯಂಗ್ಯವಾಡಿದರು. ದೆಹಲಿಯ ಜೆ ಎನ್ ಯುದಲ್ಲಿ ಭಾರತವನ್ನು ವಿಭಜಿಸುವ, ಪಾಕಿಸ್ತಾನಕ್ಕೆ ಜೈಕಾರ ಹಾಕಿ ಕಾಶ್ಮೀರವನ್ನು ಗುಂಡಿನ ಬಲದಲ್ಲಿ ವಶಪಡಿಸಿಕೊಳ್ಳುವ ಘೋಷಣೆ ಕೂಗಿದ್ದ ಕನ್ಹಯ್ಯಾ ಕುಮಾರ್ ಹಾಗೂ ಉಮ್ಮರ್ ಖಾಲಿದ್ ನಂತಹ ದೇಶ ದ್ರೋಹಿಗಳ ಮಹಾತಾಯಿ ಗೌರಿ ಲಂಕೇಶ್.

ಪ್ರಗತಿಪರರು ಹೆಣ ಬಿದ್ದರೂ ಕೂಡ ಸ್ವಾರ್ಥಪ್ರೇರಿತವಾದ ದುರುದ್ದೇಶದಿಂದ ರಸ್ತೆಗಿಳಿದು ಪ್ರತಿಭಟಿಸುತ್ತಾರೆ. ಅಷ್ಟೇ ಅಲ್ಲ ತನಿಖಾ ವ್ಯವಸ್ಥೆಯ ಮೇಲೆ ಒತ್ತಡ ನಿರ್ಮಾಣ ಮಾಡಿ ತನಿಖೆಯ ದಿಕ್ಕನ್ನು ಬದಲಾಯಿಸುತ್ತಿದ್ದಾರೆ. ಆದರೆ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಇದೇ ಪ್ರಗತಿಪರರು ಧ್ವನಿ ಎತ್ತುವುದಿಲ್ಲ ಎಂದು ಆರೋಪಿಸಿದರು. ದಿಲ್ಲಿಯ ಜೆಎನ್ ಯು ಸಂಸ್ಥೆ ಭಯೋತ್ಪಾದಕರನ್ನು ಹುಟ್ಟು ಹಾಕುತ್ತಿದೆ. ಅಲ್ಲಿ ವ್ಯಾಸಂಗ ಮಾಡಿ ಹೊರ ಬರುವ ವಿದ್ಯಾರ್ಥಿಗಳು ಭಯೋತ್ಪಾದಕರು. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವವರನ್ನು ಈ ವಿದ್ಯಾಸಂಸ್ಥೆ ತಯಾರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು. ಚೈತ್ರಾ ಕುಂದಾಪುರ ಅವರ ಈ ಹೇಳಿಕೆ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗೌರಿ ಲಂಕೇಶ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವುದಕ್ಕೆ ಚೈತ್ರಾ ವಿರುದ್ಧ ಗೌರಿ ಲಂಕೇಶ್ ಅಭಿಮಾನಿಗಳು ಕೆಂಡಕಾರಿದ್ದು, ಚೈತ್ರ ಕುಂದಾಪುರ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search