• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಲೋಕಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ರಮಾನಾಥ್ ರೈಗೆ ಶುರುವಾಯ್ತು ಹೊಸ ಮಂಡೆಬಿಸಿ

Tulunadu News Posted On September 13, 2018
0


0
Shares
  • Share On Facebook
  • Tweet It

ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿ ವಿರುದ್ದ ಹೀನಾಯವಾಗಿ ಸೋತಿದ್ದ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ್ ರೈಗೆ ತಮ್ಮ ಸೋಲನ್ನು ಜೀರ್ಣಿಸಿಕೊಳ್ಳಲು ಬಹಳ ದಿನಗಳೇ ಬೇಕಾಯಿತು. ದೇವಸ್ಥಾನ, ದೈವಸ್ಥಾನಕ್ಕೆ ಹೋಗಿ, ನಾನೇನು ತಪ್ಪು ಮಾಡಿಲ್ಲ, ಎಲ್ಲಾ ಬಿಜೆಪಿಯವರ ಅಪಪ್ರಚಾರ ಎಂದು ದೇವರ ಮೊರೆಹೋಗಿದ್ದರು.

ಅಲ್ಪಸಂಖ್ಯಾತರ ಮತದಿಂದಲೇ ಜಯಗಳಿಸಿದ್ದು ಎಂದು ಹಿಂದೊಮ್ಮೆ ಹೇಳಿದ್ದ ರಮಾನಾಥ ರೈಗೆ, ಬಂಟ್ವಾಳದ ಜನತೆ ಅಸೆಂಬ್ಲಿ ಚುನಾವಣೆಯಲ್ಲಿ ಸರಿಯಾದ ಪಾಠವನ್ನೇ ಕಲಿಸಿದರು ಎನ್ನುವುದು ಅಲ್ಲಿನ ಜನತಯೇ ಮಾತನಾಡಿಕೊಳ್ಳುವ ವಿಚಾರ ಎನ್ನುವುದು ಈಗ ಎಲ್ಲರಿಗೂ ಗೊತ್ತಿರುವ ವಿಚಾರ.

ಈಗ, ಮುಂಬರುವ ಲೋಕಸಭಾ ಚುನಾವಣೆಗೆ ರಮಾನಾಥ್ ರೈ, ದಕ್ಷಿಣಕನ್ನಡ ಜಿಲ್ಲೆಯ ಪ್ರಬಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಹೆಚ್ಚುಕಮ್ಮಿ ಅವರ ಹೆಸರೇ ಫೈನಲ್ ಆಗಿರುವ ಹೊತ್ತಿನಲ್ಲಿ, ಜಿಲ್ಲೆಯ ಇನ್ನೊಬ್ಬ ಹಿರಿಯ ಮುಖಂಡರು, ನಾನೂ ಟಿಕೆಟ್ ಆಕಾಂಕ್ಷಿಯೆಂದಿರುವುದು ರೈ ಸಾಹೇಬ್ರಿಗೆ ಹೊಸ ಮಂಡೆಬಿಸಿ ತಂದು ಹಾಕಿದೆ.

ಕೇಸರಿ ಮತ್ತು ಮೋದಿ ಹವಾ ಜಾಸ್ತಿ ಇರುವ ಕ್ಷೇತ್ರಗಳಲ್ಲಿ ನಿಸ್ಸಂದೇಹವಾಗಿ ದಕ್ಷಿಣಕನ್ನಡ ಕೂಡಾ ಒಂದು. ಇಲ್ಲಿ ಸಂಸದರಿಂದ ಕ್ಷೇತ್ರದ ಅಭಿವೃದ್ದಿ ಎಷ್ಟಾಯಿತು ಎನ್ನುವುದಕ್ಕಿಂತ, ಜಾತಿ ಮತ್ತು ಕೋಮು ಲೆಕ್ಕಾಚಾರವೇ ಹೆಚ್ಚು ವರ್ಕೌಟ್ ಆಗುವುದು. ಕಳೆದ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ ತಮ್ಮ ಕ್ಷೇತ್ರವನ್ನು ಉಳಿಸಿಕೊಂಡಿದ್ದು ಮೋದಿಯವರ ಹವಾದಿಂದಲೇ ಎನ್ನುವುದು ಒತ್ತಿ ಹೇಳುವ ಅವಶ್ಯಕತೆಯಿಲ್ಲ.

ಬಿಜೆಪಿಗೆ ಸರಿಸಾಟಿಯಾಗಿ ಪೈಪೋಟಿ ನೀಡಬಲ್ಲ ಅಭ್ಯರ್ಥಿ ಈ ಕ್ಷೇತ್ರದಿಂದ ಯಾರು ಎಂದು ಕಾಂಗ್ರೆಸ್ ತೀವ್ರ ಹುಡುಕಾಟದಲ್ಲಿದ್ದಾಗ, ಪಕ್ಷಕ್ಕೆ ಸಿಕ್ಕ ಹೆಸರು ರಮಾನಾಥ್ ರೈ. ಖುದ್ದು, ರೈಗಳೇ ಇದಕ್ಕೆ ಒಪ್ಪಿಗೆ ಸೂಚಿಸಿದ್ದರಿಂದ, ಕಾಂಗ್ರೆಸ್ಸಿಗಿದ್ದ ದೊಡ್ಡ ತಲೆನೋವು ಕಮ್ಮಿಯಾದಂಗಾಗಿತ್ತು. ಆದರೆ, ಟಿಕೆಟ್ ಕೊಟ್ಟರೆ ನಾನೂ ಕಣಕ್ಕಿಳಿಯಲು ಸಿದ್ದ ಎಂದು ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಹಿರಿಯ ಮುಖಂಡರೊಬ್ಬರು ಹೇಳಿರುವುದು, ಪಕ್ಷದ ಲೆಕ್ಕಾಚಾರವನ್ನು ಇನ್ನೊಂದು ಪುಟಕ್ಕೆ ತಿರುಗಿಸಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search