• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಲೋಕಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ರಮಾನಾಥ್ ರೈಗೆ ಶುರುವಾಯ್ತು ಹೊಸ ಮಂಡೆಬಿಸಿ

Tulunadu News Posted On September 13, 2018
0


0
Shares
  • Share On Facebook
  • Tweet It

ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿ ವಿರುದ್ದ ಹೀನಾಯವಾಗಿ ಸೋತಿದ್ದ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ್ ರೈಗೆ ತಮ್ಮ ಸೋಲನ್ನು ಜೀರ್ಣಿಸಿಕೊಳ್ಳಲು ಬಹಳ ದಿನಗಳೇ ಬೇಕಾಯಿತು. ದೇವಸ್ಥಾನ, ದೈವಸ್ಥಾನಕ್ಕೆ ಹೋಗಿ, ನಾನೇನು ತಪ್ಪು ಮಾಡಿಲ್ಲ, ಎಲ್ಲಾ ಬಿಜೆಪಿಯವರ ಅಪಪ್ರಚಾರ ಎಂದು ದೇವರ ಮೊರೆಹೋಗಿದ್ದರು.

ಅಲ್ಪಸಂಖ್ಯಾತರ ಮತದಿಂದಲೇ ಜಯಗಳಿಸಿದ್ದು ಎಂದು ಹಿಂದೊಮ್ಮೆ ಹೇಳಿದ್ದ ರಮಾನಾಥ ರೈಗೆ, ಬಂಟ್ವಾಳದ ಜನತೆ ಅಸೆಂಬ್ಲಿ ಚುನಾವಣೆಯಲ್ಲಿ ಸರಿಯಾದ ಪಾಠವನ್ನೇ ಕಲಿಸಿದರು ಎನ್ನುವುದು ಅಲ್ಲಿನ ಜನತಯೇ ಮಾತನಾಡಿಕೊಳ್ಳುವ ವಿಚಾರ ಎನ್ನುವುದು ಈಗ ಎಲ್ಲರಿಗೂ ಗೊತ್ತಿರುವ ವಿಚಾರ.

ಈಗ, ಮುಂಬರುವ ಲೋಕಸಭಾ ಚುನಾವಣೆಗೆ ರಮಾನಾಥ್ ರೈ, ದಕ್ಷಿಣಕನ್ನಡ ಜಿಲ್ಲೆಯ ಪ್ರಬಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಹೆಚ್ಚುಕಮ್ಮಿ ಅವರ ಹೆಸರೇ ಫೈನಲ್ ಆಗಿರುವ ಹೊತ್ತಿನಲ್ಲಿ, ಜಿಲ್ಲೆಯ ಇನ್ನೊಬ್ಬ ಹಿರಿಯ ಮುಖಂಡರು, ನಾನೂ ಟಿಕೆಟ್ ಆಕಾಂಕ್ಷಿಯೆಂದಿರುವುದು ರೈ ಸಾಹೇಬ್ರಿಗೆ ಹೊಸ ಮಂಡೆಬಿಸಿ ತಂದು ಹಾಕಿದೆ.

ಕೇಸರಿ ಮತ್ತು ಮೋದಿ ಹವಾ ಜಾಸ್ತಿ ಇರುವ ಕ್ಷೇತ್ರಗಳಲ್ಲಿ ನಿಸ್ಸಂದೇಹವಾಗಿ ದಕ್ಷಿಣಕನ್ನಡ ಕೂಡಾ ಒಂದು. ಇಲ್ಲಿ ಸಂಸದರಿಂದ ಕ್ಷೇತ್ರದ ಅಭಿವೃದ್ದಿ ಎಷ್ಟಾಯಿತು ಎನ್ನುವುದಕ್ಕಿಂತ, ಜಾತಿ ಮತ್ತು ಕೋಮು ಲೆಕ್ಕಾಚಾರವೇ ಹೆಚ್ಚು ವರ್ಕೌಟ್ ಆಗುವುದು. ಕಳೆದ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ ತಮ್ಮ ಕ್ಷೇತ್ರವನ್ನು ಉಳಿಸಿಕೊಂಡಿದ್ದು ಮೋದಿಯವರ ಹವಾದಿಂದಲೇ ಎನ್ನುವುದು ಒತ್ತಿ ಹೇಳುವ ಅವಶ್ಯಕತೆಯಿಲ್ಲ.

ಬಿಜೆಪಿಗೆ ಸರಿಸಾಟಿಯಾಗಿ ಪೈಪೋಟಿ ನೀಡಬಲ್ಲ ಅಭ್ಯರ್ಥಿ ಈ ಕ್ಷೇತ್ರದಿಂದ ಯಾರು ಎಂದು ಕಾಂಗ್ರೆಸ್ ತೀವ್ರ ಹುಡುಕಾಟದಲ್ಲಿದ್ದಾಗ, ಪಕ್ಷಕ್ಕೆ ಸಿಕ್ಕ ಹೆಸರು ರಮಾನಾಥ್ ರೈ. ಖುದ್ದು, ರೈಗಳೇ ಇದಕ್ಕೆ ಒಪ್ಪಿಗೆ ಸೂಚಿಸಿದ್ದರಿಂದ, ಕಾಂಗ್ರೆಸ್ಸಿಗಿದ್ದ ದೊಡ್ಡ ತಲೆನೋವು ಕಮ್ಮಿಯಾದಂಗಾಗಿತ್ತು. ಆದರೆ, ಟಿಕೆಟ್ ಕೊಟ್ಟರೆ ನಾನೂ ಕಣಕ್ಕಿಳಿಯಲು ಸಿದ್ದ ಎಂದು ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಹಿರಿಯ ಮುಖಂಡರೊಬ್ಬರು ಹೇಳಿರುವುದು, ಪಕ್ಷದ ಲೆಕ್ಕಾಚಾರವನ್ನು ಇನ್ನೊಂದು ಪುಟಕ್ಕೆ ತಿರುಗಿಸಿದೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search