• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಲೋಕಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ರಮಾನಾಥ್ ರೈಗೆ ಶುರುವಾಯ್ತು ಹೊಸ ಮಂಡೆಬಿಸಿ

Tulunadu News Posted On September 13, 2018


  • Share On Facebook
  • Tweet It

ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿ ವಿರುದ್ದ ಹೀನಾಯವಾಗಿ ಸೋತಿದ್ದ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ್ ರೈಗೆ ತಮ್ಮ ಸೋಲನ್ನು ಜೀರ್ಣಿಸಿಕೊಳ್ಳಲು ಬಹಳ ದಿನಗಳೇ ಬೇಕಾಯಿತು. ದೇವಸ್ಥಾನ, ದೈವಸ್ಥಾನಕ್ಕೆ ಹೋಗಿ, ನಾನೇನು ತಪ್ಪು ಮಾಡಿಲ್ಲ, ಎಲ್ಲಾ ಬಿಜೆಪಿಯವರ ಅಪಪ್ರಚಾರ ಎಂದು ದೇವರ ಮೊರೆಹೋಗಿದ್ದರು.

ಅಲ್ಪಸಂಖ್ಯಾತರ ಮತದಿಂದಲೇ ಜಯಗಳಿಸಿದ್ದು ಎಂದು ಹಿಂದೊಮ್ಮೆ ಹೇಳಿದ್ದ ರಮಾನಾಥ ರೈಗೆ, ಬಂಟ್ವಾಳದ ಜನತೆ ಅಸೆಂಬ್ಲಿ ಚುನಾವಣೆಯಲ್ಲಿ ಸರಿಯಾದ ಪಾಠವನ್ನೇ ಕಲಿಸಿದರು ಎನ್ನುವುದು ಅಲ್ಲಿನ ಜನತಯೇ ಮಾತನಾಡಿಕೊಳ್ಳುವ ವಿಚಾರ ಎನ್ನುವುದು ಈಗ ಎಲ್ಲರಿಗೂ ಗೊತ್ತಿರುವ ವಿಚಾರ.

ಈಗ, ಮುಂಬರುವ ಲೋಕಸಭಾ ಚುನಾವಣೆಗೆ ರಮಾನಾಥ್ ರೈ, ದಕ್ಷಿಣಕನ್ನಡ ಜಿಲ್ಲೆಯ ಪ್ರಬಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಹೆಚ್ಚುಕಮ್ಮಿ ಅವರ ಹೆಸರೇ ಫೈನಲ್ ಆಗಿರುವ ಹೊತ್ತಿನಲ್ಲಿ, ಜಿಲ್ಲೆಯ ಇನ್ನೊಬ್ಬ ಹಿರಿಯ ಮುಖಂಡರು, ನಾನೂ ಟಿಕೆಟ್ ಆಕಾಂಕ್ಷಿಯೆಂದಿರುವುದು ರೈ ಸಾಹೇಬ್ರಿಗೆ ಹೊಸ ಮಂಡೆಬಿಸಿ ತಂದು ಹಾಕಿದೆ.

ಕೇಸರಿ ಮತ್ತು ಮೋದಿ ಹವಾ ಜಾಸ್ತಿ ಇರುವ ಕ್ಷೇತ್ರಗಳಲ್ಲಿ ನಿಸ್ಸಂದೇಹವಾಗಿ ದಕ್ಷಿಣಕನ್ನಡ ಕೂಡಾ ಒಂದು. ಇಲ್ಲಿ ಸಂಸದರಿಂದ ಕ್ಷೇತ್ರದ ಅಭಿವೃದ್ದಿ ಎಷ್ಟಾಯಿತು ಎನ್ನುವುದಕ್ಕಿಂತ, ಜಾತಿ ಮತ್ತು ಕೋಮು ಲೆಕ್ಕಾಚಾರವೇ ಹೆಚ್ಚು ವರ್ಕೌಟ್ ಆಗುವುದು. ಕಳೆದ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ ತಮ್ಮ ಕ್ಷೇತ್ರವನ್ನು ಉಳಿಸಿಕೊಂಡಿದ್ದು ಮೋದಿಯವರ ಹವಾದಿಂದಲೇ ಎನ್ನುವುದು ಒತ್ತಿ ಹೇಳುವ ಅವಶ್ಯಕತೆಯಿಲ್ಲ.

ಬಿಜೆಪಿಗೆ ಸರಿಸಾಟಿಯಾಗಿ ಪೈಪೋಟಿ ನೀಡಬಲ್ಲ ಅಭ್ಯರ್ಥಿ ಈ ಕ್ಷೇತ್ರದಿಂದ ಯಾರು ಎಂದು ಕಾಂಗ್ರೆಸ್ ತೀವ್ರ ಹುಡುಕಾಟದಲ್ಲಿದ್ದಾಗ, ಪಕ್ಷಕ್ಕೆ ಸಿಕ್ಕ ಹೆಸರು ರಮಾನಾಥ್ ರೈ. ಖುದ್ದು, ರೈಗಳೇ ಇದಕ್ಕೆ ಒಪ್ಪಿಗೆ ಸೂಚಿಸಿದ್ದರಿಂದ, ಕಾಂಗ್ರೆಸ್ಸಿಗಿದ್ದ ದೊಡ್ಡ ತಲೆನೋವು ಕಮ್ಮಿಯಾದಂಗಾಗಿತ್ತು. ಆದರೆ, ಟಿಕೆಟ್ ಕೊಟ್ಟರೆ ನಾನೂ ಕಣಕ್ಕಿಳಿಯಲು ಸಿದ್ದ ಎಂದು ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಹಿರಿಯ ಮುಖಂಡರೊಬ್ಬರು ಹೇಳಿರುವುದು, ಪಕ್ಷದ ಲೆಕ್ಕಾಚಾರವನ್ನು ಇನ್ನೊಂದು ಪುಟಕ್ಕೆ ತಿರುಗಿಸಿದೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search