• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಊಟವಿಲ್ಲದೆ ಪರದಾಡಿದ ಜನರಿಗೆ ಆಹಾರ ವಿತರಿಸಿದ ಶಾಸಕ ವೇದವ್ಯಾಸ ಕಾಮತ್

Tulunadu News Posted On September 13, 2018
0


0
Shares
  • Share On Facebook
  • Tweet It

ಮಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಮಂಗಳೂರಿನಲ್ಲಿ ಪರಿಣಾಮ ಬೀರಿದೆ. ಮುಂಜಾನೆಯಿಂದಲೇ ಖಾಸಗಿ ಹಾಗೂ ಸರಕಾರಿ ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಜನರು ಪರದಾಡುವಂತಾಗಿತ್ತು. ನಗರದಲ್ಲಿ ಹೆಚ್ಚಿನ ಹೋಟೆಲ್ ಬಂದ್ ಆಗಿರುವ ಕಾರಣ ಪರವೂರುಗಳಿಂದ ಮಂಗಳೂರಿಗೆ ಬಂದ ಪ್ರಯಾಣಿಕರಿಗೆ ಸಮಸ್ಯೆಯುಂಟಾಯಿತು. ಬಸ್ ಸಂಚಾರ ಸ್ಥಗಿತಗೊಂಡ ಕಾರಣ ನಗರದಾದ್ಯಂತ ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಯಿತು.

ನಗರದ ಲಾಲ್ ಬಾಗ್ ಪ್ರದೇಶದಲ್ಲಿ ಅಂಗಡಿ ಮುಂಗಟ್ಟು, ಹೋಟೆಲ್ ಇಲ್ಲದ ಕಾರಣ ಜನರು ಆಹಾರ ಪದಾರ್ಥಗಳಿಗಾಗಿ ಸಮಸ್ಯೆ ಎದುರಿಸಿದರು. ಈ ಹಿನ್ನೆಲೆಯಲ್ಲಿ ಸಮಸ್ಯೆ ಎದುರಿಸುತ್ತಿದ್ದ ಜನರಿಗಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ್ ಕಾಮತ್ ಆಹಾರ ಮತ್ತು ಪಾನೀಯಗಳ ವ್ಯವಸ್ಥೆ ಮಾಡಿದರು.

ಶಾಸಕರ ಈ ಕಾರ್ಯದ ಬಗ್ಗೆ ಈಗ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಹೌದು, ಆಹಾರ ಸಮಸ್ಯೆ ಎದುರಿಸಿದ ಜನರಿಗಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಸುಮಾರು ಒಂದೂವರೆ ಸಾವಿರ ಜನರಿಗಾಗುವಷ್ಟು ಪುಲಾವ್ ಮತ್ತು ನೀರಿನ ಬಾಟಲುಗಳನ್ನು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ಹಂಪನಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳ ಸಹಿತ ವಿವಿಧೆಡೆ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ ವೇದವ್ಯಾಸ ಕಾಮತ್, ಹಲವು ಕಡೆ ಹೋಟೆಲ್ ಗಳನ್ನು ಬಲವಂತವಾಗಿ ಕಾಂಗ್ರೆಸ್ಸಿಗರು ಬಂದ್ ಮಾಡಿದ್ದಾರೆ. ಕಲ್ಲು ತೂರಿದ್ದಾರೆ. ಇದರಿಂದ ಜನರಿಗೆ ಮಧ್ಯಾಹ್ನದ ಊಟಕ್ಕೂ ತೊಂದರೆಯಾಗಿದೆ. ತೊಂದರೆಗೆ ಒಳಗಾದ ಜನರಿಗೆ ಆಹಾರ ಮತ್ತು ಶುದ್ಧ ನೀರನ್ನು ಒದಗಿಸಿರುವುದಾಗಿ ಅವರು ತಿಳಿಸಿದರು.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search