• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯಕ್ಕೆ ಆಗಮಿಸಿದ ಕೇಂದ್ರ ತಂಡ: ಎರಡು ದಿನ ಮಳೆ ಹಾನಿ ಪರಿಶೀಲನೆ

Tulunadu News Posted On September 13, 2018
0


0
Shares
  • Share On Facebook
  • Tweet It

ಮಂಗಳೂರು: ಕರಾವಳಿಯಲ್ಲಿ ಮಳೆಹಾನಿ ಅಧ್ಯಯನಕ್ಕೆ ಕೇಂದ್ರದಿಂದ ತಂಡ ಬಂದಿದ್ದು, ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ, ಉಡುಪಿಗೆ ತೆರಳಿದ್ದಾರೆ. ಅಧ್ಯಯನ ತಂಡವು ಇಂದು ಸಂಜೆ 6:30ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಿದ್ದು. ಅಧಿಕಾರಿಗಳೊಂದಿಗೆ ಮಾಹಿತಿ ಪಡೆಯಲಿದ್ದಾರೆ.

ಎರಡು ದಿನ ಮಳೆ ಹಾನಿ ಪರಿಶೀಲನೆ ನಡೆಸುವ ಕೇಂದ್ರ ತಂಡ ನಾಳೆ (ಸೆಪ್ಟೆಂಬರ್ 13) ರಂದು ಬಂಟ್ವಾಳದ ಮುಲ್ಲರಪಟ್ನ , ವಿಟ್ಲ ಪಡ್ನೂರು, ಕಾಣಿಯೂರು, ಸುಬ್ರಹ್ಮಣ್ಯ, ಗುಂಡ್ಯದಿಂದ ಹಾಸನಕ್ಕೆ ತೆರಳಲಿದ್ದಾರೆ. ಇತ್ತೀಚೆಗಷ್ಟೆ ಕುಮಾರಸ್ವಾಮಿ ಹಾಗೂ ದೇವೇಗೌಡ ಅವರ ನಿಯೋಗವು ದೆಹಲಿಗೆ ತೆರಳಿ ಮೋದಿ ಅವರಿಗೆ ಮಳೆ ಹಾನಿ ವರದಿ ನೀಡಿ ನೆರವಿಗೆ ಮನವಿ ಮಾಡಿದ್ದರು. ಹಾಗಾಗಿ ಕೇಂದ್ರವು ಅಧ್ಯಯನ ತಂಡವನ್ನು ಕಳುಹಿಸಿದೆ.

ಅಧ್ಯಯನ ತಂಡವು ಎರಡು ದಿನಗಳ ಕಾಲ ಕೊಡಗು, ದಕ್ಷಿಣ ಕನ್ನಡ, ಹಾಸನ, ಉತ್ತರ ಕನ್ನಡ ಇನ್ನೂ ಕೆಲವು ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ವರದಿ ಆಧರಿಸಿ ಕೇಂದ್ರವು ಪರಿಹಾರ ಬಿಡುಗಡೆ ಮಾಡಲಿದೆ.  ಕೇಂದ್ರದ ತಂಡದಲ್ಲಿ ಆರ್ಥಿಕ ಸಚಿವಾಲಯದ ಉಪ ಕಾರ್ಯದರ್ಶಿ ಭರತೇಂದು ಕುಮಾರ್ ಸಿಂಗ್, ಗ್ರಾಮೀಣಾಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಮಾಣಿಕ್ ಚಂದ್ರ ಪಂಡಿತ್, ಹೈವೇ ಪ್ರಾಧಿಕಾರದ ಸದಾನಂದ ಬಾಬು ಹಾಗೂ ಇನ್ನೂ ಕೆಲವು ತಜ್ಞರಿದ್ದಾರೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search