• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಮುಖಂಡನ ಮೇಲೆ ಠಾಣೆಯಲ್ಲಿ ಹಲ್ಲೆಯತ್ನ, ಪೊಲೀಸರಿಂದ ಶಾಸಕರಿಗೆ ಅವಮಾನ: ಶಾಸಕರಿಂದ ಚಾರ್ಜ್!

Tulunadu News Posted On September 13, 2018
0


0
Shares
  • Share On Facebook
  • Tweet It

ಮಂಗಳೂರು; ಇಂಟಕ್ ಮುಖಂಡನಿಗೆ ಕರೆ ಮಾಡಿದ ಹಿಂದೂ ಸಂಘಟನೆ ಮುಖಂಡನನನ್ನು ಠಾಣೆಗೆ ಕರೆಯಿಸಿ ಕದ್ರಿ ಪೊಲೀಸರು ಎಡವಟ್ಟು ಮಾಡಿದ್ದಾರೆ. ಮುಖಂಡನನ್ನು ಕರೆಸಿ ಹಲ್ಲೆ ಯತ್ನ ನಡೆಸಿದ ಕುರಿತು ಶಾಸಕ ವೇದವ್ಯಾಸ ಕಾಮತ್ ಅವರು ಪೊಲೀಸ್  ಪೇದೆಯನ್ನು ಖಾರವಾದ ಮಾತಿನಲ್ಲಿ ಬಿಸಿ ಮುಟ್ಟಿಸಿದ್ದಾರೆ. ಕಾಂಗ್ರೆಸಿಗರು ಕರೆ ನೀಡಿದ ಭಾರತ ಬಂದ್ ಸಂದರ್ಭದಲ್ಲಿ ಹಿಂದೂ ಸಂಘಟನೆಯ ಮುಖಂಡ ಕೆ.ಆರ್.ಶೆಟ್ಟಿ  ಅಡ್ಯಾರ್ ಅವರು, ಇಂಟಕ್ ಅಧ್ಯಕ್ಷ ಪುನೀತ್ ಶೆಟ್ಟಿಗೆ ಕರೆ ಮಾಡಿದ್ದರು. ಸಚಿವ ಯು.ಟಿ.ಖಾದರ್ ಅವರು ಹಿಂದೆ ಬಂದ್ ಮಾಡಿದವರಿಗೆ ಚಪ್ಪಲಿ ಏಟು ಹೊಡೆಯುವಂತೆ ಹೇಳಿದ್ದಾರೆ.
ಈಗ ನೀವು ಬಲಾತ್ಕಾರವಾಗಿ ಬಂದ್ ಮಾಡುವ ವೇಳೆ ಒಬ್ಬನ ತಲೆ ಒಡೆದಿದ್ದೀರಿ. ಈಗ ನಾವು ಕೆಎಸ್ಸಾರ್ಟಿಸಿಯಲ್ಲಿದ್ದೇವೆ. ನೀವು ಬನ್ನಿ ನಿಮಗೆ ಚಪ್ಪಲಿಯಲ್ಲಿ ಹೊಡೆಯುತ್ತೇವ ಎಂದು ಹೇಳಿದ್ದರು.  ಕದ್ರಿ ಠಾಣೆಗೆ ಬಾ ಎಂದು ಪುನೀತ್ ಉತ್ತರಿಸಿ ಬಳಿಕ ನಾನೇ ಬರುವುದಾಗಿ ತಿಳಿಸಿದ್ದರು. ಬಳಿಕ ಈ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಮಂಗಳವಾರ ಎಫ್‍ಐಆರ್ ದಾಖಲಿಸಲಾಗಿತ್ತು. ಇದಕ್ಕಾಗಿ ಕೆ.ಆರ್.ಶೆಟ್ಟಿ ಅವರನ್ನು ಪೊಲೀಸರು ಕರೆ ಮಾಡಿ ಠಾಣೆಗೆ ಬರುವಂತೆ ಸೂಚಿಸಿದರು. ಎಸ್‍ಐ ಮಾರುತಿ ಅವರು ವಿಚಾರಣೆ ನಡೆಸಿ ಠಾಣೆಯಲ್ಲಿಯೇ ಜಾಮೀನು ನೀಡಬಹುದಾದ ಪ್ರಕರಣವಾದ್ದರಿಂದ ಇನ್‍ಸ್ಪೆಕ್ಟರ್ ಸೂಚನೆಯಂತೆ ತಕ್ಷಣ ಬಿಡುಗಡೆಗೆ ಸಿದ್ಧತೆ ನಡೆಸಿದ್ದರು.
ಅಷ್ಟರಲ್ಲಿ ಅವರಿಗೆ ತುರ್ತು ಕರ್ತವ್ಯದ ಕರೆ ಬಂದ ಕಾರಣ ಸರ್ಕಿಟ್ ಹೌಸ್‍ಗೆ ತೆರಳಿದವರು ವಾಪಸ್ ಬರುವಾಗ ವಿಳಂಬವಾಗಿತ್ತು. ಕೆ.ಆರ್.ಶೆಟ್ಟಿ ಮಧ್ಯಾಹ್ನ 12 ಗಂಟೆಗೆ ಹೋಗಿದ್ದು, ಸಂಜೆ 3 ಗಂಟೆಯಾದರೂ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಹಿಂದೂ ಜಾಗರಣೆ ವೇದಿಕೆಯ ಶರತ್ ಪದವಿನಂಗಡಿ ಮತ್ತಿತರರು ಠಾಣೆಗೆ ಆಗಮಿಸಿದರು. ಈ ಸಂದರ್ಭ ಆರ್.ಕೆ. ಶೆಟ್ಟಿ ಮಾತನಾಡುತ್ತಿದ್ದ ವೇಳೆ ಒಬ್ಬ ಪೊಲೀಸ್ ಎಳೆದಾಡಿ ಹಲ್ಲೆಗೆ ಮುಂದಾದರು. ಈ ಸಂದರ್ಭ ಹಿಂದೂ ಮುಖಂಡ ಶರತ್ ಪದವಿನಂಗಡಿ ಶಾಸಕ ವೇದವ್ಯಾಸ ಕಾಮತ್ ಗೆ ಕರೆ ಮಾಡಿ ವಿಷಯ ತಿಳಿಸಿದರು.
ಬಿಸಿ ಮುಟ್ಟಿಸಿದ ಶಾಸಕ; ಈ ಸಂದರ್ಭ ತನ್ನ ಕರೆಯನ್ನು ಪೊಲೀಸ್ ಪೇದೆಗೆ ನೀಡುವಂತೆ ಶಾಸಕರು ಸೂಚಿಸಿದರು. ಆಗ ಪೊಲೀಸ್ ಉಢಾಪೆಯಿಂದ “ ಶಾಸಕ ನಿನಗೆ ಆಗಿರಬಹುದು, ನನಗಲ”್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶಾಸಕರು ಕದ್ರಿ ಪೊಲೀಸ್ ಠಾಣೆ ದೂರವಾಣಿಗೆ ಕರೆ ಮಾಡಿದರೂ ಸ್ಪಂದಿಸಲಿಲ್ಲ.  ತಕ್ಷಣ ಪೊಲೀಸ್ ಠಾಣೆಗೆ ಆಗಮಿಸಿದ ವೇದವ್ಯಾಸ ಕಾಮತ್ ಅರ್ಧ ಗಂಟೆ ಕಾಲ ಪೊಲೀಸರಿಗೆ ಚಾರ್ಜ್ ಮಾಡಿದ್ದಾರೆ. ಸಬ್ ಇನ್‍ಸ್ಪೆಕ್ಟರ್ ಸಮಾಧಾನಕ್ಕೆ ಮುಂದಾದರು. ಇನ್ನೂ ಈ ರೀತಿ ಆಗದಂತೆ ಎಚ್ಚರ ವಹಿಸುವುದಾಗಿ ಹೇಳಿದರು. ಅತಿರೇಕವಾಗಿ ವರ್ತಿಸಿದ ಪೊಲೀಸ್‍ಗೆ ಇನ್‍ಸ್ಪೆಕ್ಟರ್ ಸಹಿತ ಮೇಲಧಿಕಾರಿಗಳೂ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆಕ್ರೋಶ; ಬಂದ್ ಮಾಡುವ ಸಂಘಪರಿವಾರದವರಿಗೆ ಚಪ್ಪಲಿಯಲ್ಲಿ ಹೊಡೆಯಬೇಕು ಎಂದು ಸಚಿವ ಯು.ಟಿ. ಖಾದರ್ ಹೇಳಿದರೆ ಸನ್ಮಾನ, ಅದೇ ಸಂಘಪರಿವಾರದ ಯವಕ ಕಾಂಗ್ರೆಸಿಗರಿಗೆ ಹೇಳಿದರೆ ಅವಮಾನ  ಹೇಗಾಗುತ್ತದೆ ಎಂದು ಎಂದು ಹಿಂಜಾವೇ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search