• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂ ಮುಖಂಡನ ಮೇಲೆ ಠಾಣೆಯಲ್ಲಿ ಹಲ್ಲೆಯತ್ನ, ಪೊಲೀಸರಿಂದ ಶಾಸಕರಿಗೆ ಅವಮಾನ: ಶಾಸಕರಿಂದ ಚಾರ್ಜ್!

Tulunadu News Posted On September 13, 2018


  • Share On Facebook
  • Tweet It

ಮಂಗಳೂರು; ಇಂಟಕ್ ಮುಖಂಡನಿಗೆ ಕರೆ ಮಾಡಿದ ಹಿಂದೂ ಸಂಘಟನೆ ಮುಖಂಡನನನ್ನು ಠಾಣೆಗೆ ಕರೆಯಿಸಿ ಕದ್ರಿ ಪೊಲೀಸರು ಎಡವಟ್ಟು ಮಾಡಿದ್ದಾರೆ. ಮುಖಂಡನನ್ನು ಕರೆಸಿ ಹಲ್ಲೆ ಯತ್ನ ನಡೆಸಿದ ಕುರಿತು ಶಾಸಕ ವೇದವ್ಯಾಸ ಕಾಮತ್ ಅವರು ಪೊಲೀಸ್  ಪೇದೆಯನ್ನು ಖಾರವಾದ ಮಾತಿನಲ್ಲಿ ಬಿಸಿ ಮುಟ್ಟಿಸಿದ್ದಾರೆ. ಕಾಂಗ್ರೆಸಿಗರು ಕರೆ ನೀಡಿದ ಭಾರತ ಬಂದ್ ಸಂದರ್ಭದಲ್ಲಿ ಹಿಂದೂ ಸಂಘಟನೆಯ ಮುಖಂಡ ಕೆ.ಆರ್.ಶೆಟ್ಟಿ  ಅಡ್ಯಾರ್ ಅವರು, ಇಂಟಕ್ ಅಧ್ಯಕ್ಷ ಪುನೀತ್ ಶೆಟ್ಟಿಗೆ ಕರೆ ಮಾಡಿದ್ದರು. ಸಚಿವ ಯು.ಟಿ.ಖಾದರ್ ಅವರು ಹಿಂದೆ ಬಂದ್ ಮಾಡಿದವರಿಗೆ ಚಪ್ಪಲಿ ಏಟು ಹೊಡೆಯುವಂತೆ ಹೇಳಿದ್ದಾರೆ.
ಈಗ ನೀವು ಬಲಾತ್ಕಾರವಾಗಿ ಬಂದ್ ಮಾಡುವ ವೇಳೆ ಒಬ್ಬನ ತಲೆ ಒಡೆದಿದ್ದೀರಿ. ಈಗ ನಾವು ಕೆಎಸ್ಸಾರ್ಟಿಸಿಯಲ್ಲಿದ್ದೇವೆ. ನೀವು ಬನ್ನಿ ನಿಮಗೆ ಚಪ್ಪಲಿಯಲ್ಲಿ ಹೊಡೆಯುತ್ತೇವ ಎಂದು ಹೇಳಿದ್ದರು.  ಕದ್ರಿ ಠಾಣೆಗೆ ಬಾ ಎಂದು ಪುನೀತ್ ಉತ್ತರಿಸಿ ಬಳಿಕ ನಾನೇ ಬರುವುದಾಗಿ ತಿಳಿಸಿದ್ದರು. ಬಳಿಕ ಈ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಮಂಗಳವಾರ ಎಫ್‍ಐಆರ್ ದಾಖಲಿಸಲಾಗಿತ್ತು. ಇದಕ್ಕಾಗಿ ಕೆ.ಆರ್.ಶೆಟ್ಟಿ ಅವರನ್ನು ಪೊಲೀಸರು ಕರೆ ಮಾಡಿ ಠಾಣೆಗೆ ಬರುವಂತೆ ಸೂಚಿಸಿದರು. ಎಸ್‍ಐ ಮಾರುತಿ ಅವರು ವಿಚಾರಣೆ ನಡೆಸಿ ಠಾಣೆಯಲ್ಲಿಯೇ ಜಾಮೀನು ನೀಡಬಹುದಾದ ಪ್ರಕರಣವಾದ್ದರಿಂದ ಇನ್‍ಸ್ಪೆಕ್ಟರ್ ಸೂಚನೆಯಂತೆ ತಕ್ಷಣ ಬಿಡುಗಡೆಗೆ ಸಿದ್ಧತೆ ನಡೆಸಿದ್ದರು.
ಅಷ್ಟರಲ್ಲಿ ಅವರಿಗೆ ತುರ್ತು ಕರ್ತವ್ಯದ ಕರೆ ಬಂದ ಕಾರಣ ಸರ್ಕಿಟ್ ಹೌಸ್‍ಗೆ ತೆರಳಿದವರು ವಾಪಸ್ ಬರುವಾಗ ವಿಳಂಬವಾಗಿತ್ತು. ಕೆ.ಆರ್.ಶೆಟ್ಟಿ ಮಧ್ಯಾಹ್ನ 12 ಗಂಟೆಗೆ ಹೋಗಿದ್ದು, ಸಂಜೆ 3 ಗಂಟೆಯಾದರೂ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಹಿಂದೂ ಜಾಗರಣೆ ವೇದಿಕೆಯ ಶರತ್ ಪದವಿನಂಗಡಿ ಮತ್ತಿತರರು ಠಾಣೆಗೆ ಆಗಮಿಸಿದರು. ಈ ಸಂದರ್ಭ ಆರ್.ಕೆ. ಶೆಟ್ಟಿ ಮಾತನಾಡುತ್ತಿದ್ದ ವೇಳೆ ಒಬ್ಬ ಪೊಲೀಸ್ ಎಳೆದಾಡಿ ಹಲ್ಲೆಗೆ ಮುಂದಾದರು. ಈ ಸಂದರ್ಭ ಹಿಂದೂ ಮುಖಂಡ ಶರತ್ ಪದವಿನಂಗಡಿ ಶಾಸಕ ವೇದವ್ಯಾಸ ಕಾಮತ್ ಗೆ ಕರೆ ಮಾಡಿ ವಿಷಯ ತಿಳಿಸಿದರು.
ಬಿಸಿ ಮುಟ್ಟಿಸಿದ ಶಾಸಕ; ಈ ಸಂದರ್ಭ ತನ್ನ ಕರೆಯನ್ನು ಪೊಲೀಸ್ ಪೇದೆಗೆ ನೀಡುವಂತೆ ಶಾಸಕರು ಸೂಚಿಸಿದರು. ಆಗ ಪೊಲೀಸ್ ಉಢಾಪೆಯಿಂದ “ ಶಾಸಕ ನಿನಗೆ ಆಗಿರಬಹುದು, ನನಗಲ”್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶಾಸಕರು ಕದ್ರಿ ಪೊಲೀಸ್ ಠಾಣೆ ದೂರವಾಣಿಗೆ ಕರೆ ಮಾಡಿದರೂ ಸ್ಪಂದಿಸಲಿಲ್ಲ.  ತಕ್ಷಣ ಪೊಲೀಸ್ ಠಾಣೆಗೆ ಆಗಮಿಸಿದ ವೇದವ್ಯಾಸ ಕಾಮತ್ ಅರ್ಧ ಗಂಟೆ ಕಾಲ ಪೊಲೀಸರಿಗೆ ಚಾರ್ಜ್ ಮಾಡಿದ್ದಾರೆ. ಸಬ್ ಇನ್‍ಸ್ಪೆಕ್ಟರ್ ಸಮಾಧಾನಕ್ಕೆ ಮುಂದಾದರು. ಇನ್ನೂ ಈ ರೀತಿ ಆಗದಂತೆ ಎಚ್ಚರ ವಹಿಸುವುದಾಗಿ ಹೇಳಿದರು. ಅತಿರೇಕವಾಗಿ ವರ್ತಿಸಿದ ಪೊಲೀಸ್‍ಗೆ ಇನ್‍ಸ್ಪೆಕ್ಟರ್ ಸಹಿತ ಮೇಲಧಿಕಾರಿಗಳೂ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆಕ್ರೋಶ; ಬಂದ್ ಮಾಡುವ ಸಂಘಪರಿವಾರದವರಿಗೆ ಚಪ್ಪಲಿಯಲ್ಲಿ ಹೊಡೆಯಬೇಕು ಎಂದು ಸಚಿವ ಯು.ಟಿ. ಖಾದರ್ ಹೇಳಿದರೆ ಸನ್ಮಾನ, ಅದೇ ಸಂಘಪರಿವಾರದ ಯವಕ ಕಾಂಗ್ರೆಸಿಗರಿಗೆ ಹೇಳಿದರೆ ಅವಮಾನ  ಹೇಗಾಗುತ್ತದೆ ಎಂದು ಎಂದು ಹಿಂಜಾವೇ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search