• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬಜೆಟ್ ಹಣ ಬಿಡುಗಡೆಗೆ ಪರ್ಸೆಂಟೇಜ್ ಕೇಳಿದ ವಿಚಾರ ಬಯಲು

Tulunadu News Posted On September 16, 2018
0


0
Shares
  • Share On Facebook
  • Tweet It

ಮಂಗಳೂರು: ಸರಕಾರಿ ಯೋಜನೆಗಳಿಗೆ ಪರ್ಸೆಂಟೇಜ್ ನೀಡದಿದ್ದರೆ ಕೆಲಸಗಳೇ ಮುಂದೆ ಸಾಗಲ್ಲ ಎನ್ನುವುದು ಜನರಲ್ಲಿರುವ ಸಾಮಾನ್ಯ ಅಭಿಪ್ರಾಯ. ಯೋಜನೆಗಳ ಹಣದಲ್ಲಿ ಇಂತಿಷ್ಟು ಪರ್ಸೆಂಟ್ ಶಾಸಕರಿಗೆ, ಅಧಿಕಾರಿಗಳಿಗೆ ಹೋಗೇ ಹೋಗುತ್ತೆ ಅನ್ನೋದು ಜನರ ಅನಿಸಿಕೆ. ಈಗ ಬಜೆಟ್ ಹಣ ಬಿಡುಗಡೆ ಮಾಡೋದಕ್ಕೂ ಅಧಿಕಾರಿಗಳು ಪರ್ಸೆಂಟೇಜ್ ಕೇಳುತ್ತಿದ್ದಾರೆ ಎನ್ನುವ ವಿಚಾರ ಬಯಲಾಗಿದೆ.

ಮಂಗಳೂರಿನಲ್ಲಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸ್ವತಃ ಶಾಸಕರ ಎದುರಲ್ಲೇ ಈ ವಿಚಾರ ಬಾಯ್ಬಿಟ್ಟಿದ್ದು, ಬಜೆಟ್ ಹಣ ಬಿಡುಗಡೆ ಆಗಬೇಕಿದ್ದರೆ ಹಣಕಾಸು ಇಲಾಖೆಗೆ ಲಂಚ ಕೊಡಬೇಕು ಅನ್ನೋದನ್ನು ಒಪ್ಪಿಕೊಂಡಿದ್ದಾರೆ. ಮಂಗಳೂರು ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಪಿಡಿಓಗಳಲ್ಲಿ ತಾಪಂ ಇಓ ಸದಾನಂದ, ಈ ಬಗ್ಗೆ ಲಂಚದ ಬೇಡಿಕೆ ಇಟ್ಟಿದ್ದರು. ಆದರೆ, ಪಿಡಿಓಗಳು ಒಟ್ಟು ಸೇರಿ ಕಾರ್ಯ ನಿರ್ವಹಣಾಧಿಕಾರಿ ಕಚೇರಿಗೆ ಆಗಮಿಸಿ, ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ, ಈ ಬಗ್ಗೆ ತಾಲೂಕು ಪಂಚಾಯತ್ ಇಓ ಬಳಿ ಪ್ರಶ್ನಿಸಿದಾಗ, ಸ್ವತಃ ಅಧಿಕಾರಿ ಹಣಕಾಸು ಇಲಾಖೆಗೆ ಸಂದಾಯ ಮಾಡಬೇಕಿರುವುದನ್ನು ಹೇಳಿಕೊಂಡಿದ್ದಾರೆ. ಅಲ್ಲದೆ, ಶಾಸಕರು ಹೊಸಬರಾಗಿದ್ದರಿಂದ ನಿಮಗೆ ಇದೆಲ್ಲ ಅರ್ಥ ಆಗಲ್ಲ ಅನ್ನುವ ಹಾರಿಕೆಯ ಮಾತನ್ನೂ ಆಡಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಲ್ಲಿ ನಡೆದ ಮಾತುಕತೆ ಎಲ್ಲವೂ ಮೊಬೈಲ್ ನಲ್ಲಿ ಸೆರೆಯಾಗಿದ್ದು, ರಾಜ್ಯದ ಹಣಕಾಸು ಇಲಾಖೆಯಿಂದಲೇ ಮಾಮೂಲಿ ಕಲೆಕ್ಷನ್ ಮಾಡ್ತಾರೆ ಅನ್ನೋದಕ್ಕೆ ದಾಖಲೆಯಾಗಿ ಪರಿಣಮಿಸಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search