• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬಜೆಟ್ ಹಣ ಬಿಡುಗಡೆಗೆ ಪರ್ಸೆಂಟೇಜ್ ಕೇಳಿದ ವಿಚಾರ ಬಯಲು

Tulunadu News Posted On September 16, 2018
0


0
Shares
  • Share On Facebook
  • Tweet It

ಮಂಗಳೂರು: ಸರಕಾರಿ ಯೋಜನೆಗಳಿಗೆ ಪರ್ಸೆಂಟೇಜ್ ನೀಡದಿದ್ದರೆ ಕೆಲಸಗಳೇ ಮುಂದೆ ಸಾಗಲ್ಲ ಎನ್ನುವುದು ಜನರಲ್ಲಿರುವ ಸಾಮಾನ್ಯ ಅಭಿಪ್ರಾಯ. ಯೋಜನೆಗಳ ಹಣದಲ್ಲಿ ಇಂತಿಷ್ಟು ಪರ್ಸೆಂಟ್ ಶಾಸಕರಿಗೆ, ಅಧಿಕಾರಿಗಳಿಗೆ ಹೋಗೇ ಹೋಗುತ್ತೆ ಅನ್ನೋದು ಜನರ ಅನಿಸಿಕೆ. ಈಗ ಬಜೆಟ್ ಹಣ ಬಿಡುಗಡೆ ಮಾಡೋದಕ್ಕೂ ಅಧಿಕಾರಿಗಳು ಪರ್ಸೆಂಟೇಜ್ ಕೇಳುತ್ತಿದ್ದಾರೆ ಎನ್ನುವ ವಿಚಾರ ಬಯಲಾಗಿದೆ.

ಮಂಗಳೂರಿನಲ್ಲಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸ್ವತಃ ಶಾಸಕರ ಎದುರಲ್ಲೇ ಈ ವಿಚಾರ ಬಾಯ್ಬಿಟ್ಟಿದ್ದು, ಬಜೆಟ್ ಹಣ ಬಿಡುಗಡೆ ಆಗಬೇಕಿದ್ದರೆ ಹಣಕಾಸು ಇಲಾಖೆಗೆ ಲಂಚ ಕೊಡಬೇಕು ಅನ್ನೋದನ್ನು ಒಪ್ಪಿಕೊಂಡಿದ್ದಾರೆ. ಮಂಗಳೂರು ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಪಿಡಿಓಗಳಲ್ಲಿ ತಾಪಂ ಇಓ ಸದಾನಂದ, ಈ ಬಗ್ಗೆ ಲಂಚದ ಬೇಡಿಕೆ ಇಟ್ಟಿದ್ದರು. ಆದರೆ, ಪಿಡಿಓಗಳು ಒಟ್ಟು ಸೇರಿ ಕಾರ್ಯ ನಿರ್ವಹಣಾಧಿಕಾರಿ ಕಚೇರಿಗೆ ಆಗಮಿಸಿ, ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ, ಈ ಬಗ್ಗೆ ತಾಲೂಕು ಪಂಚಾಯತ್ ಇಓ ಬಳಿ ಪ್ರಶ್ನಿಸಿದಾಗ, ಸ್ವತಃ ಅಧಿಕಾರಿ ಹಣಕಾಸು ಇಲಾಖೆಗೆ ಸಂದಾಯ ಮಾಡಬೇಕಿರುವುದನ್ನು ಹೇಳಿಕೊಂಡಿದ್ದಾರೆ. ಅಲ್ಲದೆ, ಶಾಸಕರು ಹೊಸಬರಾಗಿದ್ದರಿಂದ ನಿಮಗೆ ಇದೆಲ್ಲ ಅರ್ಥ ಆಗಲ್ಲ ಅನ್ನುವ ಹಾರಿಕೆಯ ಮಾತನ್ನೂ ಆಡಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಲ್ಲಿ ನಡೆದ ಮಾತುಕತೆ ಎಲ್ಲವೂ ಮೊಬೈಲ್ ನಲ್ಲಿ ಸೆರೆಯಾಗಿದ್ದು, ರಾಜ್ಯದ ಹಣಕಾಸು ಇಲಾಖೆಯಿಂದಲೇ ಮಾಮೂಲಿ ಕಲೆಕ್ಷನ್ ಮಾಡ್ತಾರೆ ಅನ್ನೋದಕ್ಕೆ ದಾಖಲೆಯಾಗಿ ಪರಿಣಮಿಸಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search