• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬಜೆಟ್ ಹಣ ಬಿಡುಗಡೆಗೆ ಪರ್ಸೆಂಟೇಜ್ ಕೇಳಿದ ವಿಚಾರ ಬಯಲು

Tulunadu News Posted On September 16, 2018
0


0
Shares
  • Share On Facebook
  • Tweet It

ಮಂಗಳೂರು: ಸರಕಾರಿ ಯೋಜನೆಗಳಿಗೆ ಪರ್ಸೆಂಟೇಜ್ ನೀಡದಿದ್ದರೆ ಕೆಲಸಗಳೇ ಮುಂದೆ ಸಾಗಲ್ಲ ಎನ್ನುವುದು ಜನರಲ್ಲಿರುವ ಸಾಮಾನ್ಯ ಅಭಿಪ್ರಾಯ. ಯೋಜನೆಗಳ ಹಣದಲ್ಲಿ ಇಂತಿಷ್ಟು ಪರ್ಸೆಂಟ್ ಶಾಸಕರಿಗೆ, ಅಧಿಕಾರಿಗಳಿಗೆ ಹೋಗೇ ಹೋಗುತ್ತೆ ಅನ್ನೋದು ಜನರ ಅನಿಸಿಕೆ. ಈಗ ಬಜೆಟ್ ಹಣ ಬಿಡುಗಡೆ ಮಾಡೋದಕ್ಕೂ ಅಧಿಕಾರಿಗಳು ಪರ್ಸೆಂಟೇಜ್ ಕೇಳುತ್ತಿದ್ದಾರೆ ಎನ್ನುವ ವಿಚಾರ ಬಯಲಾಗಿದೆ.

ಮಂಗಳೂರಿನಲ್ಲಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸ್ವತಃ ಶಾಸಕರ ಎದುರಲ್ಲೇ ಈ ವಿಚಾರ ಬಾಯ್ಬಿಟ್ಟಿದ್ದು, ಬಜೆಟ್ ಹಣ ಬಿಡುಗಡೆ ಆಗಬೇಕಿದ್ದರೆ ಹಣಕಾಸು ಇಲಾಖೆಗೆ ಲಂಚ ಕೊಡಬೇಕು ಅನ್ನೋದನ್ನು ಒಪ್ಪಿಕೊಂಡಿದ್ದಾರೆ. ಮಂಗಳೂರು ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಪಿಡಿಓಗಳಲ್ಲಿ ತಾಪಂ ಇಓ ಸದಾನಂದ, ಈ ಬಗ್ಗೆ ಲಂಚದ ಬೇಡಿಕೆ ಇಟ್ಟಿದ್ದರು. ಆದರೆ, ಪಿಡಿಓಗಳು ಒಟ್ಟು ಸೇರಿ ಕಾರ್ಯ ನಿರ್ವಹಣಾಧಿಕಾರಿ ಕಚೇರಿಗೆ ಆಗಮಿಸಿ, ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ, ಈ ಬಗ್ಗೆ ತಾಲೂಕು ಪಂಚಾಯತ್ ಇಓ ಬಳಿ ಪ್ರಶ್ನಿಸಿದಾಗ, ಸ್ವತಃ ಅಧಿಕಾರಿ ಹಣಕಾಸು ಇಲಾಖೆಗೆ ಸಂದಾಯ ಮಾಡಬೇಕಿರುವುದನ್ನು ಹೇಳಿಕೊಂಡಿದ್ದಾರೆ. ಅಲ್ಲದೆ, ಶಾಸಕರು ಹೊಸಬರಾಗಿದ್ದರಿಂದ ನಿಮಗೆ ಇದೆಲ್ಲ ಅರ್ಥ ಆಗಲ್ಲ ಅನ್ನುವ ಹಾರಿಕೆಯ ಮಾತನ್ನೂ ಆಡಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಲ್ಲಿ ನಡೆದ ಮಾತುಕತೆ ಎಲ್ಲವೂ ಮೊಬೈಲ್ ನಲ್ಲಿ ಸೆರೆಯಾಗಿದ್ದು, ರಾಜ್ಯದ ಹಣಕಾಸು ಇಲಾಖೆಯಿಂದಲೇ ಮಾಮೂಲಿ ಕಲೆಕ್ಷನ್ ಮಾಡ್ತಾರೆ ಅನ್ನೋದಕ್ಕೆ ದಾಖಲೆಯಾಗಿ ಪರಿಣಮಿಸಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search