• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬಜೆಟ್ ಹಣ ಬಿಡುಗಡೆಗೆ ಪರ್ಸೆಂಟೇಜ್ ಕೇಳಿದ ವಿಚಾರ ಬಯಲು

Tulunadu News Posted On September 16, 2018
0


0
Shares
  • Share On Facebook
  • Tweet It

ಮಂಗಳೂರು: ಸರಕಾರಿ ಯೋಜನೆಗಳಿಗೆ ಪರ್ಸೆಂಟೇಜ್ ನೀಡದಿದ್ದರೆ ಕೆಲಸಗಳೇ ಮುಂದೆ ಸಾಗಲ್ಲ ಎನ್ನುವುದು ಜನರಲ್ಲಿರುವ ಸಾಮಾನ್ಯ ಅಭಿಪ್ರಾಯ. ಯೋಜನೆಗಳ ಹಣದಲ್ಲಿ ಇಂತಿಷ್ಟು ಪರ್ಸೆಂಟ್ ಶಾಸಕರಿಗೆ, ಅಧಿಕಾರಿಗಳಿಗೆ ಹೋಗೇ ಹೋಗುತ್ತೆ ಅನ್ನೋದು ಜನರ ಅನಿಸಿಕೆ. ಈಗ ಬಜೆಟ್ ಹಣ ಬಿಡುಗಡೆ ಮಾಡೋದಕ್ಕೂ ಅಧಿಕಾರಿಗಳು ಪರ್ಸೆಂಟೇಜ್ ಕೇಳುತ್ತಿದ್ದಾರೆ ಎನ್ನುವ ವಿಚಾರ ಬಯಲಾಗಿದೆ.

ಮಂಗಳೂರಿನಲ್ಲಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸ್ವತಃ ಶಾಸಕರ ಎದುರಲ್ಲೇ ಈ ವಿಚಾರ ಬಾಯ್ಬಿಟ್ಟಿದ್ದು, ಬಜೆಟ್ ಹಣ ಬಿಡುಗಡೆ ಆಗಬೇಕಿದ್ದರೆ ಹಣಕಾಸು ಇಲಾಖೆಗೆ ಲಂಚ ಕೊಡಬೇಕು ಅನ್ನೋದನ್ನು ಒಪ್ಪಿಕೊಂಡಿದ್ದಾರೆ. ಮಂಗಳೂರು ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಪಿಡಿಓಗಳಲ್ಲಿ ತಾಪಂ ಇಓ ಸದಾನಂದ, ಈ ಬಗ್ಗೆ ಲಂಚದ ಬೇಡಿಕೆ ಇಟ್ಟಿದ್ದರು. ಆದರೆ, ಪಿಡಿಓಗಳು ಒಟ್ಟು ಸೇರಿ ಕಾರ್ಯ ನಿರ್ವಹಣಾಧಿಕಾರಿ ಕಚೇರಿಗೆ ಆಗಮಿಸಿ, ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ, ಈ ಬಗ್ಗೆ ತಾಲೂಕು ಪಂಚಾಯತ್ ಇಓ ಬಳಿ ಪ್ರಶ್ನಿಸಿದಾಗ, ಸ್ವತಃ ಅಧಿಕಾರಿ ಹಣಕಾಸು ಇಲಾಖೆಗೆ ಸಂದಾಯ ಮಾಡಬೇಕಿರುವುದನ್ನು ಹೇಳಿಕೊಂಡಿದ್ದಾರೆ. ಅಲ್ಲದೆ, ಶಾಸಕರು ಹೊಸಬರಾಗಿದ್ದರಿಂದ ನಿಮಗೆ ಇದೆಲ್ಲ ಅರ್ಥ ಆಗಲ್ಲ ಅನ್ನುವ ಹಾರಿಕೆಯ ಮಾತನ್ನೂ ಆಡಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಲ್ಲಿ ನಡೆದ ಮಾತುಕತೆ ಎಲ್ಲವೂ ಮೊಬೈಲ್ ನಲ್ಲಿ ಸೆರೆಯಾಗಿದ್ದು, ರಾಜ್ಯದ ಹಣಕಾಸು ಇಲಾಖೆಯಿಂದಲೇ ಮಾಮೂಲಿ ಕಲೆಕ್ಷನ್ ಮಾಡ್ತಾರೆ ಅನ್ನೋದಕ್ಕೆ ದಾಖಲೆಯಾಗಿ ಪರಿಣಮಿಸಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search