• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರ್ ಎಸ್ ಎಸ್ ಶಕ್ತಿ ಕೇಂದ್ರದಲ್ಲಿ ಏಕದಂತನಿಗೆ ಪೂಜೆ ಸಲ್ಲಿಸಿದ ಕ್ರೈಸ್ತ ಧರ್ಮಗುರು, ಭಗಿನಿಯರು

Tulunadu News Posted On September 17, 2018
0


0
Shares
  • Share On Facebook
  • Tweet It

ಮಂಗಳೂರು: ಗಣೇಶ ಚತುರ್ಥಿ ಕೇವಲ ಹಿಂದೂಗಳ ಉತ್ಸವ ಮಾತ್ರವಾಗಿರದೇ ಸರ್ವ ಧರ್ಮಿಯರೂ ಸೇರಿ ವಿಜೃಂಭಣೆಯಿಂದ ಆಚರಿಸುವ ಹಲವಾರು ನಿದರ್ಶನಗಳ ನಮ್ಮ ಮುಂದಿದೆ. ಈ ಪಟ್ಟಿಗೆ ಇನ್ನೊಂದು ಹೆಸರು ಸೇರ್ಪಡೆಯಾಗಿದೆ. ಮಂಗಳೂರಿನ ಸಂಘನಿಕೇತನದಲ್ಲಿ ಪೂಜಿಸಲಾಗುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಕ್ರೈಸ್ತ ಧರ್ಮಗುರುಗಳು ಹಾಗು ಭಗಿನಿಯರು ಭಾಗವಹಿಸಿದ್ದಾರೆ.

ಆರ್ ಎಸ್ ಎಸ್ ನ ಶಕ್ತಿ ಕೇಂದ್ರ ಎಂದೇ ಹೇಳಲಾಗುವ ಸಂಘನಿಕೇತನದ ಗಣೇಶೋತ್ಸವ ಸೌಹಾರ್ದತೆಗೆ ವೇದಿಕೆಯಾಗುತ್ತಿದೆ. ಈ ಬಾರಿ ಕ್ರೈಸ್ತ ಧರ್ಮಗುರುಗಳು ಹಾಗು ಕ್ರೈಸ್ತ ಭಗಿನಿಯರು ಈ ಗಣೇಶನ ಪಾದತಲಕ್ಕೆ ಹಣ್ಣುಹಂಪಲು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕಳೆದ ಬಾರಿಯೂ ಬಾಲ ಏಸು ಕ್ಷೇತ್ರದ ಧರ್ಮಗುರುಗಳು ಬಂದು ಗಣಪತಿಗೆ ಪೂಜೆ ಮಾಡಿಸಿ ಪ್ರಾರ್ಥನೆ ಸಲ್ಲಿಸಿದ್ದರು.

ಸಂಘನಿಕೇತನದ ವತಿಯಿಂದ ಈ ಬಾರಿ 71ನೇ ವರ್ಷದ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಘನಿಕೇತನ ಸಭಾಂಗಣದಲ್ಲಿ ಇರಿಸಲಾದ ಗಣೇಶನ ವಿಗ್ರಹಕ್ಕೆ ಮಂಗಳೂರಿನ ಕ್ಯಾಥೊಲಿಕ್ ಸಭಾ ಮತ್ತು ಸೈಂಟ್ ಜೋಸೆಫ್ ಕಾನ್ವೆಂಟ್ ನ ಭಗಿನಿಯರು ಬಂದು ಫಲಪುಷ್ಪ ಸಮರ್ಪಿಸಿ, ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ

ಮಂಗಳೂರು ಕ್ಯಾಥೊಲಿಕ್ ಸಭಾದ ಕಾರ್ಯದರ್ಶಿ ಸೆಲೆಸ್ಟೀನ್ ಡಿಸೋಜಾ, ಸೈಂಟ್ ಜೋಸೆಫ್ ಕಾನ್ವೆಂಟ್ ನ ಭಗಿನಿಯರಾದ ಸಿಸ್ಟರ್ ಜ್ಯೋತಿ, ಸಿಸ್ಟರ್ ಮರಿಯಾ, ಸಿಸ್ಟರ್ ಅನಿತ, ಸಿಸ್ಟರ್ ರೋಸಾ, ಸಿಸ್ಟರ್ ಸುಜಾತ ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿದರು.

christian priests and Nuns offered pooja to Ganesha

ಹಲವು ವರ್ಷಗಳಿಂದ ಈ ಕ್ರೈಸ್ತ ಧರ್ಮಕೇಂದ್ರಗಳ ಧರ್ಮಗುರುಗಳು ಗಣೇಶೋತ್ಸವದಂದು ಸಂಘನಿಕೇತನಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಯಾವುದೇ ಜಾತಿ-ಧರ್ಮ ರಾಜಕೀಯವಿಲ್ಲದೆ ನಾವೆಲ್ಲರೂ ಒಂದಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇವೆ. ಮುಂದೆಯೂ ಇದೇ ರೀತಿ ಭಾಗಿಯಾಗಲು ದೇವರು ಅನುಗ್ರಹಿಸಲಿ ಎಂದು ಕ್ರೈಸ್ತ ಧರ್ಮಗುರುಗಳು ಹಾಗು ಭಗಿನಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search