• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆರ್ ಎಸ್ ಎಸ್ ಶಕ್ತಿ ಕೇಂದ್ರದಲ್ಲಿ ಏಕದಂತನಿಗೆ ಪೂಜೆ ಸಲ್ಲಿಸಿದ ಕ್ರೈಸ್ತ ಧರ್ಮಗುರು, ಭಗಿನಿಯರು

Tulunadu News Posted On September 17, 2018


  • Share On Facebook
  • Tweet It

ಮಂಗಳೂರು: ಗಣೇಶ ಚತುರ್ಥಿ ಕೇವಲ ಹಿಂದೂಗಳ ಉತ್ಸವ ಮಾತ್ರವಾಗಿರದೇ ಸರ್ವ ಧರ್ಮಿಯರೂ ಸೇರಿ ವಿಜೃಂಭಣೆಯಿಂದ ಆಚರಿಸುವ ಹಲವಾರು ನಿದರ್ಶನಗಳ ನಮ್ಮ ಮುಂದಿದೆ. ಈ ಪಟ್ಟಿಗೆ ಇನ್ನೊಂದು ಹೆಸರು ಸೇರ್ಪಡೆಯಾಗಿದೆ. ಮಂಗಳೂರಿನ ಸಂಘನಿಕೇತನದಲ್ಲಿ ಪೂಜಿಸಲಾಗುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಕ್ರೈಸ್ತ ಧರ್ಮಗುರುಗಳು ಹಾಗು ಭಗಿನಿಯರು ಭಾಗವಹಿಸಿದ್ದಾರೆ.

ಆರ್ ಎಸ್ ಎಸ್ ನ ಶಕ್ತಿ ಕೇಂದ್ರ ಎಂದೇ ಹೇಳಲಾಗುವ ಸಂಘನಿಕೇತನದ ಗಣೇಶೋತ್ಸವ ಸೌಹಾರ್ದತೆಗೆ ವೇದಿಕೆಯಾಗುತ್ತಿದೆ. ಈ ಬಾರಿ ಕ್ರೈಸ್ತ ಧರ್ಮಗುರುಗಳು ಹಾಗು ಕ್ರೈಸ್ತ ಭಗಿನಿಯರು ಈ ಗಣೇಶನ ಪಾದತಲಕ್ಕೆ ಹಣ್ಣುಹಂಪಲು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕಳೆದ ಬಾರಿಯೂ ಬಾಲ ಏಸು ಕ್ಷೇತ್ರದ ಧರ್ಮಗುರುಗಳು ಬಂದು ಗಣಪತಿಗೆ ಪೂಜೆ ಮಾಡಿಸಿ ಪ್ರಾರ್ಥನೆ ಸಲ್ಲಿಸಿದ್ದರು.

ಸಂಘನಿಕೇತನದ ವತಿಯಿಂದ ಈ ಬಾರಿ 71ನೇ ವರ್ಷದ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಘನಿಕೇತನ ಸಭಾಂಗಣದಲ್ಲಿ ಇರಿಸಲಾದ ಗಣೇಶನ ವಿಗ್ರಹಕ್ಕೆ ಮಂಗಳೂರಿನ ಕ್ಯಾಥೊಲಿಕ್ ಸಭಾ ಮತ್ತು ಸೈಂಟ್ ಜೋಸೆಫ್ ಕಾನ್ವೆಂಟ್ ನ ಭಗಿನಿಯರು ಬಂದು ಫಲಪುಷ್ಪ ಸಮರ್ಪಿಸಿ, ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ

ಮಂಗಳೂರು ಕ್ಯಾಥೊಲಿಕ್ ಸಭಾದ ಕಾರ್ಯದರ್ಶಿ ಸೆಲೆಸ್ಟೀನ್ ಡಿಸೋಜಾ, ಸೈಂಟ್ ಜೋಸೆಫ್ ಕಾನ್ವೆಂಟ್ ನ ಭಗಿನಿಯರಾದ ಸಿಸ್ಟರ್ ಜ್ಯೋತಿ, ಸಿಸ್ಟರ್ ಮರಿಯಾ, ಸಿಸ್ಟರ್ ಅನಿತ, ಸಿಸ್ಟರ್ ರೋಸಾ, ಸಿಸ್ಟರ್ ಸುಜಾತ ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿದರು.

christian priests and Nuns offered pooja to Ganesha

ಹಲವು ವರ್ಷಗಳಿಂದ ಈ ಕ್ರೈಸ್ತ ಧರ್ಮಕೇಂದ್ರಗಳ ಧರ್ಮಗುರುಗಳು ಗಣೇಶೋತ್ಸವದಂದು ಸಂಘನಿಕೇತನಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಯಾವುದೇ ಜಾತಿ-ಧರ್ಮ ರಾಜಕೀಯವಿಲ್ಲದೆ ನಾವೆಲ್ಲರೂ ಒಂದಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇವೆ. ಮುಂದೆಯೂ ಇದೇ ರೀತಿ ಭಾಗಿಯಾಗಲು ದೇವರು ಅನುಗ್ರಹಿಸಲಿ ಎಂದು ಕ್ರೈಸ್ತ ಧರ್ಮಗುರುಗಳು ಹಾಗು ಭಗಿನಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
Tulunadu News March 20, 2023
Leave A Reply

  • Recent Posts

    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
    • ಜೆಎನ್ ಯು ದಂಡದ ಮೂಲಕವಾದರೂ ಸ್ವಚ್ಛವಾಗಲಿ!!
  • Popular Posts

    • 1
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 2
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 3
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 4
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • 5
      ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search