• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರ್ ಎಸ್ ಎಸ್ ಶಕ್ತಿ ಕೇಂದ್ರದಲ್ಲಿ ಏಕದಂತನಿಗೆ ಪೂಜೆ ಸಲ್ಲಿಸಿದ ಕ್ರೈಸ್ತ ಧರ್ಮಗುರು, ಭಗಿನಿಯರು

Tulunadu News Posted On September 17, 2018
0


0
Shares
  • Share On Facebook
  • Tweet It

ಮಂಗಳೂರು: ಗಣೇಶ ಚತುರ್ಥಿ ಕೇವಲ ಹಿಂದೂಗಳ ಉತ್ಸವ ಮಾತ್ರವಾಗಿರದೇ ಸರ್ವ ಧರ್ಮಿಯರೂ ಸೇರಿ ವಿಜೃಂಭಣೆಯಿಂದ ಆಚರಿಸುವ ಹಲವಾರು ನಿದರ್ಶನಗಳ ನಮ್ಮ ಮುಂದಿದೆ. ಈ ಪಟ್ಟಿಗೆ ಇನ್ನೊಂದು ಹೆಸರು ಸೇರ್ಪಡೆಯಾಗಿದೆ. ಮಂಗಳೂರಿನ ಸಂಘನಿಕೇತನದಲ್ಲಿ ಪೂಜಿಸಲಾಗುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಕ್ರೈಸ್ತ ಧರ್ಮಗುರುಗಳು ಹಾಗು ಭಗಿನಿಯರು ಭಾಗವಹಿಸಿದ್ದಾರೆ.

ಆರ್ ಎಸ್ ಎಸ್ ನ ಶಕ್ತಿ ಕೇಂದ್ರ ಎಂದೇ ಹೇಳಲಾಗುವ ಸಂಘನಿಕೇತನದ ಗಣೇಶೋತ್ಸವ ಸೌಹಾರ್ದತೆಗೆ ವೇದಿಕೆಯಾಗುತ್ತಿದೆ. ಈ ಬಾರಿ ಕ್ರೈಸ್ತ ಧರ್ಮಗುರುಗಳು ಹಾಗು ಕ್ರೈಸ್ತ ಭಗಿನಿಯರು ಈ ಗಣೇಶನ ಪಾದತಲಕ್ಕೆ ಹಣ್ಣುಹಂಪಲು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕಳೆದ ಬಾರಿಯೂ ಬಾಲ ಏಸು ಕ್ಷೇತ್ರದ ಧರ್ಮಗುರುಗಳು ಬಂದು ಗಣಪತಿಗೆ ಪೂಜೆ ಮಾಡಿಸಿ ಪ್ರಾರ್ಥನೆ ಸಲ್ಲಿಸಿದ್ದರು.

ಸಂಘನಿಕೇತನದ ವತಿಯಿಂದ ಈ ಬಾರಿ 71ನೇ ವರ್ಷದ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಘನಿಕೇತನ ಸಭಾಂಗಣದಲ್ಲಿ ಇರಿಸಲಾದ ಗಣೇಶನ ವಿಗ್ರಹಕ್ಕೆ ಮಂಗಳೂರಿನ ಕ್ಯಾಥೊಲಿಕ್ ಸಭಾ ಮತ್ತು ಸೈಂಟ್ ಜೋಸೆಫ್ ಕಾನ್ವೆಂಟ್ ನ ಭಗಿನಿಯರು ಬಂದು ಫಲಪುಷ್ಪ ಸಮರ್ಪಿಸಿ, ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ

ಮಂಗಳೂರು ಕ್ಯಾಥೊಲಿಕ್ ಸಭಾದ ಕಾರ್ಯದರ್ಶಿ ಸೆಲೆಸ್ಟೀನ್ ಡಿಸೋಜಾ, ಸೈಂಟ್ ಜೋಸೆಫ್ ಕಾನ್ವೆಂಟ್ ನ ಭಗಿನಿಯರಾದ ಸಿಸ್ಟರ್ ಜ್ಯೋತಿ, ಸಿಸ್ಟರ್ ಮರಿಯಾ, ಸಿಸ್ಟರ್ ಅನಿತ, ಸಿಸ್ಟರ್ ರೋಸಾ, ಸಿಸ್ಟರ್ ಸುಜಾತ ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿದರು.

christian priests and Nuns offered pooja to Ganesha

ಹಲವು ವರ್ಷಗಳಿಂದ ಈ ಕ್ರೈಸ್ತ ಧರ್ಮಕೇಂದ್ರಗಳ ಧರ್ಮಗುರುಗಳು ಗಣೇಶೋತ್ಸವದಂದು ಸಂಘನಿಕೇತನಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಯಾವುದೇ ಜಾತಿ-ಧರ್ಮ ರಾಜಕೀಯವಿಲ್ಲದೆ ನಾವೆಲ್ಲರೂ ಒಂದಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇವೆ. ಮುಂದೆಯೂ ಇದೇ ರೀತಿ ಭಾಗಿಯಾಗಲು ದೇವರು ಅನುಗ್ರಹಿಸಲಿ ಎಂದು ಕ್ರೈಸ್ತ ಧರ್ಮಗುರುಗಳು ಹಾಗು ಭಗಿನಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search