• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರ್ ಎಸ್ ಎಸ್ ಶಕ್ತಿ ಕೇಂದ್ರದಲ್ಲಿ ಏಕದಂತನಿಗೆ ಪೂಜೆ ಸಲ್ಲಿಸಿದ ಕ್ರೈಸ್ತ ಧರ್ಮಗುರು, ಭಗಿನಿಯರು

Tulunadu News Posted On September 17, 2018
0


0
Shares
  • Share On Facebook
  • Tweet It

ಮಂಗಳೂರು: ಗಣೇಶ ಚತುರ್ಥಿ ಕೇವಲ ಹಿಂದೂಗಳ ಉತ್ಸವ ಮಾತ್ರವಾಗಿರದೇ ಸರ್ವ ಧರ್ಮಿಯರೂ ಸೇರಿ ವಿಜೃಂಭಣೆಯಿಂದ ಆಚರಿಸುವ ಹಲವಾರು ನಿದರ್ಶನಗಳ ನಮ್ಮ ಮುಂದಿದೆ. ಈ ಪಟ್ಟಿಗೆ ಇನ್ನೊಂದು ಹೆಸರು ಸೇರ್ಪಡೆಯಾಗಿದೆ. ಮಂಗಳೂರಿನ ಸಂಘನಿಕೇತನದಲ್ಲಿ ಪೂಜಿಸಲಾಗುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಕ್ರೈಸ್ತ ಧರ್ಮಗುರುಗಳು ಹಾಗು ಭಗಿನಿಯರು ಭಾಗವಹಿಸಿದ್ದಾರೆ.

ಆರ್ ಎಸ್ ಎಸ್ ನ ಶಕ್ತಿ ಕೇಂದ್ರ ಎಂದೇ ಹೇಳಲಾಗುವ ಸಂಘನಿಕೇತನದ ಗಣೇಶೋತ್ಸವ ಸೌಹಾರ್ದತೆಗೆ ವೇದಿಕೆಯಾಗುತ್ತಿದೆ. ಈ ಬಾರಿ ಕ್ರೈಸ್ತ ಧರ್ಮಗುರುಗಳು ಹಾಗು ಕ್ರೈಸ್ತ ಭಗಿನಿಯರು ಈ ಗಣೇಶನ ಪಾದತಲಕ್ಕೆ ಹಣ್ಣುಹಂಪಲು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕಳೆದ ಬಾರಿಯೂ ಬಾಲ ಏಸು ಕ್ಷೇತ್ರದ ಧರ್ಮಗುರುಗಳು ಬಂದು ಗಣಪತಿಗೆ ಪೂಜೆ ಮಾಡಿಸಿ ಪ್ರಾರ್ಥನೆ ಸಲ್ಲಿಸಿದ್ದರು.

ಸಂಘನಿಕೇತನದ ವತಿಯಿಂದ ಈ ಬಾರಿ 71ನೇ ವರ್ಷದ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಘನಿಕೇತನ ಸಭಾಂಗಣದಲ್ಲಿ ಇರಿಸಲಾದ ಗಣೇಶನ ವಿಗ್ರಹಕ್ಕೆ ಮಂಗಳೂರಿನ ಕ್ಯಾಥೊಲಿಕ್ ಸಭಾ ಮತ್ತು ಸೈಂಟ್ ಜೋಸೆಫ್ ಕಾನ್ವೆಂಟ್ ನ ಭಗಿನಿಯರು ಬಂದು ಫಲಪುಷ್ಪ ಸಮರ್ಪಿಸಿ, ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ

ಮಂಗಳೂರು ಕ್ಯಾಥೊಲಿಕ್ ಸಭಾದ ಕಾರ್ಯದರ್ಶಿ ಸೆಲೆಸ್ಟೀನ್ ಡಿಸೋಜಾ, ಸೈಂಟ್ ಜೋಸೆಫ್ ಕಾನ್ವೆಂಟ್ ನ ಭಗಿನಿಯರಾದ ಸಿಸ್ಟರ್ ಜ್ಯೋತಿ, ಸಿಸ್ಟರ್ ಮರಿಯಾ, ಸಿಸ್ಟರ್ ಅನಿತ, ಸಿಸ್ಟರ್ ರೋಸಾ, ಸಿಸ್ಟರ್ ಸುಜಾತ ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿದರು.

christian priests and Nuns offered pooja to Ganesha

ಹಲವು ವರ್ಷಗಳಿಂದ ಈ ಕ್ರೈಸ್ತ ಧರ್ಮಕೇಂದ್ರಗಳ ಧರ್ಮಗುರುಗಳು ಗಣೇಶೋತ್ಸವದಂದು ಸಂಘನಿಕೇತನಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಯಾವುದೇ ಜಾತಿ-ಧರ್ಮ ರಾಜಕೀಯವಿಲ್ಲದೆ ನಾವೆಲ್ಲರೂ ಒಂದಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇವೆ. ಮುಂದೆಯೂ ಇದೇ ರೀತಿ ಭಾಗಿಯಾಗಲು ದೇವರು ಅನುಗ್ರಹಿಸಲಿ ಎಂದು ಕ್ರೈಸ್ತ ಧರ್ಮಗುರುಗಳು ಹಾಗು ಭಗಿನಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search