• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕರಾವಳಿ ನದಿಗಳು ಬತ್ತುತ್ತಿರುವುದಕ್ಕೆ ತಜ್ಞರು ಕೊಟ್ಟ ಉತ್ತರ ನೋಡಿ

Tulunadu News Posted On September 17, 2018
0


0
Shares
  • Share On Facebook
  • Tweet It

ಮಂಗಳೂರು: ಕರಾವಳಿ ಭಾಗದ ನದಿಗಳಲ್ಲಿ ನೀರಿನ ಹರಿವು ದಿಢೀರ್ ಕುಸಿತವಾಗಿರುವುದಕ್ಕೆ ಕರಾವಳಿಯ ಜನರಲ್ಲಿ ಆತಂಕ ಮನೆಮಾಡಿದೆ. ದಕ್ಷಿಣ ಕನ್ನಡ ಮಾತ್ರವಲ್ಲದೇ ಉಡುಪಿ ಜಿಲ್ಲೆಯ ನದಿಗಳಲ್ಲೂ ನೀರಿನ ಹರಿವು ದಿಢೀರ್ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ , ಕುಮಾರಧಾರಾ, ಪಯಸ್ವಿನಿ, ಗುಂಡ್ಯ ಸೇರಿದಂತೆ ಇನ್ನಿತರ ಉಪನದಿಗಳಲ್ಲಿ ನೀರಿನ ಹರಿವು ಉಹಿಸಲು ಸಾಧ್ಯವಾಗದ ಮಟ್ಟದಲ್ಲಿ ಕುಸಿದಿದೆ. ಉಡುಪಿಗೆ ನೀರುಣಿಸುವ ಸ್ವರ್ಣ ನದಿ ಬತ್ತಲಾರಂಭಿಸಿದೆ. ಹೆಬ್ರಿ ಭಾಗದಲ್ಲಿ ಜನವರಿ ಹಾಗು ಫೆಬ್ರವರಿವರೆಗೂ ಭರ್ತಿಯಾಗಿ ಹರಿಯುತ್ತಿದ್ದ ಸೀತಾ ನದಿಯಲ್ಲೂ ಕಲ್ಲು ಬಂಡೆ, ತಳ ಗೋಚರಿಸತೊಡಗಿದೆ.

ಮಳೆಗಾಲ ಮುಗಿಯುವ ಮೊದಲೇ ನದಿಗಳು ಹೀಗೆ ಬತ್ತುತ್ತಾ ಹೋದರೆ ಬೇಸಿಗೆಯಲ್ಲಿ ಪರಿಸ್ಥಿತಿ ಹೇಗಿರಬಹುದೆಂದು ಕರಾವಳಿಯ ಜನರಿಗೆ ಊಹಿಸಿಕೊಳ್ಳಲೂ ಸಾಧ್ಯವಾಗುತ್ತಿಲ್ಲ. ಉಭಯ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕೂಡ ಕುಸಿದಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಆಕಾರಣ ಈಬಾರಿ ಬೇಸಿಗೆಯಲ್ಲಿ ನೀರಿನ ಸಮಸ್ಯೆಯ ಅಗಲಾರದು ಎಂದೇ ಭಾವಿಸಲಾಗಿತ್ತು. ಆದರೆ ಈಗ ನದಿಗಳು ಬತ್ತುತ್ತಿರುವುದು ಕರಾವಳಿಗರಲ್ಲಿ ಆತಂಕ ಮೂಡಿಸಿದೆ.

ಪ್ರಕೃತಿಯ ಮೇಲೆ ನಡೆದ ದೌರ್ಜನ್ಯದ ಫಲವೇನೋ ಎಂಬಂತೆ ಈ ಬಾರಿ ಧಾರಾಕಾರ ಮಳೆ ಸುರಿದಿತು. ಭಾರೀ ಮಳೆಗೆ ಗುಡ್ಡಗಳೇ ಕುಸಿದವು. ಕೆಲವೆಡೆ ಜಲಸ್ಫೋಟದಿಂದ ಆಸ್ತಿಪಾಸ್ತಿ ಸೇರಿದಂತೆ ಪ್ರಾಣಹಾನಿಗೂ ಈ ಬಾರಿಯ ಮಳೆ ಕಾರಣವಾಗಿತ್ತು. ಈಗ ಮಳೆ ನಿಂತಿದೆ ಆದರೆ ನದಿಯಲ್ಲಿ ಪ್ರವಾಹವಾಗಿ ಹರಿದ ಮಳೆ ನೀರು ಎಲ್ಲಿ ಹೋಯಿತು? ಎಂಬುದೇ ಜನರಿಗೆ ಯಕ್ಷ ಪ್ರಶ್ನೆಯಾಗಿ ಕಾಡತೊಡಗಿದ್ದು, ಈ ಕುರಿತು ತಜ್ಞರನ್ನು ಒನ್ ಇಂಡಿಯಾ ಮಾತನಾಡಿಸಿದಾಗ ಅವರಿಂದ ಬಂದ ಉತ್ತರ ಹೀಗಿತ್ತು.

 

 ಕೃಷಿಗೆ ನೀರಿಲ್ಲದಿದ್ದರೆ ಗತಿ ಏನು?

ಕೃಷಿಗೆ ನೀರಿಲ್ಲದಿದ್ದರೆ ಗತಿ ಏನು?; ಸುಳ್ಯ, ಬೆಳ್ತಂಗಡಿ ಭಾಗದ ತೋಟಗಳ ಬದಿಯ ತೋಡಿನಲ್ಲಿ ನೀರಿಲ್ಲದೇ ಭಯಾನಕ ದೃಶ್ಯ ಎದುರಾಗಿದೆ. ಪರಿಸರದ ಚಿಕ್ಕ ಹೊಳೆಗಳಾದ ಗೌರಿ, ಮಡಾವು ಹೊಳೆಯಲ್ಲೂ ನೀರು ಬತ್ತತೊಡಗಿದೆ. ಮುಂದಿನ ದಿನಗಳಲ್ಲಿ ಕೃಷಿಗೆ ನೀರಿಲ್ಲದಿದ್ದರೆ ಗತಿ ಏನು ಎಂದು ಕೃಷಿಕರು ಈಗಲೇ ತಲೆ ಮೇಲೆ ಕೈಹೊತ್ತಿ ಕೂತಿದ್ದಾರೆ. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾದ ಸುಳ್ಯ, ಬೆಳ್ತಂಗಡಿ, ಸಂಪಾಜೆ, ಜಾಲ್ಸೂರು, ಗುತ್ತಿಗಾರು ಸೇರಿದಂತೆ ಇತರೆ ಕಡೆಗಳಲ್ಲಿ ಅಂತರ್ಜಲ ಇಲಾಖೆ ಅಂಕಿಅಂಶಗಳ ಅಧ್ಯಯ ನಡೆಸಿದ್ದು ಅಂತರ್ಜಲ ಮಟ್ಟ ಕುಸಿಯುತ್ತಿರುವುದು ಧೃಡ ಪಟ್ಟಿದೆ. ಕೆಲವೆಡೆ ಅಂತರ್ಜಲ ಮಟ್ಟ 2.45 ಮೀಟರ್ ಗಳಷ್ಟು ಕೆಳಗೆ ಹೋಗಿದೆ.

 ನೀರನ್ನು ಸುಲಭವಾಗಿ ಹೀರಿಕೊಳ್ಳುವ ಕೆಂಪು ಮಣ್ಣು

 

ನೀರನ್ನು ಸುಲಭವಾಗಿ ಹೀರಿಕೊಳ್ಳುವ ಕೆಂಪು ಮಣ್ಣು; ನದಿಗಳಲ್ಲಿ ನೀರು ಬತ್ತಲೂ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನದಿ ನೀರಿನ ಒರತೆ ಸ್ಥಗಿತ ಗೊಂಡಿರುವುದೇ ಕಾರಣ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಡೆದ ಅರಣ್ಯ ನಾಶ. ಅದರ ಪರಿಣಾಮದಿಂದ ಈ ಭಾರೀ ಉಂಟಾದ ಭಾರೀ ಭೂ ಕುಸಿತ, ಕರಾವಳಿಯ ನದಿಯಲ್ಲಿ ನೀರು ಬತ್ತಲು ಮೂಲ ಕಾರಣ ಎಂದು ಎನ್ ಐಟಿಕೆ ತಜ್ಞ ಪ್ರೊ.ಎಸ್ ಜಿ ಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಪಶ್ಚಿಮ ಘಟ್ಟ ಕೆಂಪು ಮಣ್ಣನ್ನು ಹೊಂದಿದೆ. ಕೆಂಪು ಮಣ್ಣು ನೀರನ್ನು ಸುಲಭವಾಗಿ ಹೀರಿಕೊಳ್ಳುತ್ತದೆ. ಆದರೆ ಈ ಭಾಗದಲ್ಲಿ ವ್ಯಾಪಕವಾಗಿ ನಡೆದ ಅರಣ್ಯ ನಾಶದಿಂದ ಮಣ್ಣು ನೀರನ್ನು ಹಿಡಿದಿಟ್ಟು ಕೊಳ್ಳುವ ಶಕ್ತಿಯನ್ನು ಕಳೆದುಕೊಂಡಿದೆ ಎಂದು ತಿಳಿಸಿದರು.
0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search