• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕರಾವಳಿ ನದಿಗಳು ಬತ್ತುತ್ತಿರುವುದಕ್ಕೆ ತಜ್ಞರು ಕೊಟ್ಟ ಉತ್ತರ ನೋಡಿ

Tulunadu News Posted On September 17, 2018
0


0
Shares
  • Share On Facebook
  • Tweet It

ಮಂಗಳೂರು: ಕರಾವಳಿ ಭಾಗದ ನದಿಗಳಲ್ಲಿ ನೀರಿನ ಹರಿವು ದಿಢೀರ್ ಕುಸಿತವಾಗಿರುವುದಕ್ಕೆ ಕರಾವಳಿಯ ಜನರಲ್ಲಿ ಆತಂಕ ಮನೆಮಾಡಿದೆ. ದಕ್ಷಿಣ ಕನ್ನಡ ಮಾತ್ರವಲ್ಲದೇ ಉಡುಪಿ ಜಿಲ್ಲೆಯ ನದಿಗಳಲ್ಲೂ ನೀರಿನ ಹರಿವು ದಿಢೀರ್ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ , ಕುಮಾರಧಾರಾ, ಪಯಸ್ವಿನಿ, ಗುಂಡ್ಯ ಸೇರಿದಂತೆ ಇನ್ನಿತರ ಉಪನದಿಗಳಲ್ಲಿ ನೀರಿನ ಹರಿವು ಉಹಿಸಲು ಸಾಧ್ಯವಾಗದ ಮಟ್ಟದಲ್ಲಿ ಕುಸಿದಿದೆ. ಉಡುಪಿಗೆ ನೀರುಣಿಸುವ ಸ್ವರ್ಣ ನದಿ ಬತ್ತಲಾರಂಭಿಸಿದೆ. ಹೆಬ್ರಿ ಭಾಗದಲ್ಲಿ ಜನವರಿ ಹಾಗು ಫೆಬ್ರವರಿವರೆಗೂ ಭರ್ತಿಯಾಗಿ ಹರಿಯುತ್ತಿದ್ದ ಸೀತಾ ನದಿಯಲ್ಲೂ ಕಲ್ಲು ಬಂಡೆ, ತಳ ಗೋಚರಿಸತೊಡಗಿದೆ.

ಮಳೆಗಾಲ ಮುಗಿಯುವ ಮೊದಲೇ ನದಿಗಳು ಹೀಗೆ ಬತ್ತುತ್ತಾ ಹೋದರೆ ಬೇಸಿಗೆಯಲ್ಲಿ ಪರಿಸ್ಥಿತಿ ಹೇಗಿರಬಹುದೆಂದು ಕರಾವಳಿಯ ಜನರಿಗೆ ಊಹಿಸಿಕೊಳ್ಳಲೂ ಸಾಧ್ಯವಾಗುತ್ತಿಲ್ಲ. ಉಭಯ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕೂಡ ಕುಸಿದಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಆಕಾರಣ ಈಬಾರಿ ಬೇಸಿಗೆಯಲ್ಲಿ ನೀರಿನ ಸಮಸ್ಯೆಯ ಅಗಲಾರದು ಎಂದೇ ಭಾವಿಸಲಾಗಿತ್ತು. ಆದರೆ ಈಗ ನದಿಗಳು ಬತ್ತುತ್ತಿರುವುದು ಕರಾವಳಿಗರಲ್ಲಿ ಆತಂಕ ಮೂಡಿಸಿದೆ.

ಪ್ರಕೃತಿಯ ಮೇಲೆ ನಡೆದ ದೌರ್ಜನ್ಯದ ಫಲವೇನೋ ಎಂಬಂತೆ ಈ ಬಾರಿ ಧಾರಾಕಾರ ಮಳೆ ಸುರಿದಿತು. ಭಾರೀ ಮಳೆಗೆ ಗುಡ್ಡಗಳೇ ಕುಸಿದವು. ಕೆಲವೆಡೆ ಜಲಸ್ಫೋಟದಿಂದ ಆಸ್ತಿಪಾಸ್ತಿ ಸೇರಿದಂತೆ ಪ್ರಾಣಹಾನಿಗೂ ಈ ಬಾರಿಯ ಮಳೆ ಕಾರಣವಾಗಿತ್ತು. ಈಗ ಮಳೆ ನಿಂತಿದೆ ಆದರೆ ನದಿಯಲ್ಲಿ ಪ್ರವಾಹವಾಗಿ ಹರಿದ ಮಳೆ ನೀರು ಎಲ್ಲಿ ಹೋಯಿತು? ಎಂಬುದೇ ಜನರಿಗೆ ಯಕ್ಷ ಪ್ರಶ್ನೆಯಾಗಿ ಕಾಡತೊಡಗಿದ್ದು, ಈ ಕುರಿತು ತಜ್ಞರನ್ನು ಒನ್ ಇಂಡಿಯಾ ಮಾತನಾಡಿಸಿದಾಗ ಅವರಿಂದ ಬಂದ ಉತ್ತರ ಹೀಗಿತ್ತು.

 

 ಕೃಷಿಗೆ ನೀರಿಲ್ಲದಿದ್ದರೆ ಗತಿ ಏನು?

ಕೃಷಿಗೆ ನೀರಿಲ್ಲದಿದ್ದರೆ ಗತಿ ಏನು?; ಸುಳ್ಯ, ಬೆಳ್ತಂಗಡಿ ಭಾಗದ ತೋಟಗಳ ಬದಿಯ ತೋಡಿನಲ್ಲಿ ನೀರಿಲ್ಲದೇ ಭಯಾನಕ ದೃಶ್ಯ ಎದುರಾಗಿದೆ. ಪರಿಸರದ ಚಿಕ್ಕ ಹೊಳೆಗಳಾದ ಗೌರಿ, ಮಡಾವು ಹೊಳೆಯಲ್ಲೂ ನೀರು ಬತ್ತತೊಡಗಿದೆ. ಮುಂದಿನ ದಿನಗಳಲ್ಲಿ ಕೃಷಿಗೆ ನೀರಿಲ್ಲದಿದ್ದರೆ ಗತಿ ಏನು ಎಂದು ಕೃಷಿಕರು ಈಗಲೇ ತಲೆ ಮೇಲೆ ಕೈಹೊತ್ತಿ ಕೂತಿದ್ದಾರೆ. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾದ ಸುಳ್ಯ, ಬೆಳ್ತಂಗಡಿ, ಸಂಪಾಜೆ, ಜಾಲ್ಸೂರು, ಗುತ್ತಿಗಾರು ಸೇರಿದಂತೆ ಇತರೆ ಕಡೆಗಳಲ್ಲಿ ಅಂತರ್ಜಲ ಇಲಾಖೆ ಅಂಕಿಅಂಶಗಳ ಅಧ್ಯಯ ನಡೆಸಿದ್ದು ಅಂತರ್ಜಲ ಮಟ್ಟ ಕುಸಿಯುತ್ತಿರುವುದು ಧೃಡ ಪಟ್ಟಿದೆ. ಕೆಲವೆಡೆ ಅಂತರ್ಜಲ ಮಟ್ಟ 2.45 ಮೀಟರ್ ಗಳಷ್ಟು ಕೆಳಗೆ ಹೋಗಿದೆ.

 ನೀರನ್ನು ಸುಲಭವಾಗಿ ಹೀರಿಕೊಳ್ಳುವ ಕೆಂಪು ಮಣ್ಣು

 

ನೀರನ್ನು ಸುಲಭವಾಗಿ ಹೀರಿಕೊಳ್ಳುವ ಕೆಂಪು ಮಣ್ಣು; ನದಿಗಳಲ್ಲಿ ನೀರು ಬತ್ತಲೂ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನದಿ ನೀರಿನ ಒರತೆ ಸ್ಥಗಿತ ಗೊಂಡಿರುವುದೇ ಕಾರಣ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಡೆದ ಅರಣ್ಯ ನಾಶ. ಅದರ ಪರಿಣಾಮದಿಂದ ಈ ಭಾರೀ ಉಂಟಾದ ಭಾರೀ ಭೂ ಕುಸಿತ, ಕರಾವಳಿಯ ನದಿಯಲ್ಲಿ ನೀರು ಬತ್ತಲು ಮೂಲ ಕಾರಣ ಎಂದು ಎನ್ ಐಟಿಕೆ ತಜ್ಞ ಪ್ರೊ.ಎಸ್ ಜಿ ಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಪಶ್ಚಿಮ ಘಟ್ಟ ಕೆಂಪು ಮಣ್ಣನ್ನು ಹೊಂದಿದೆ. ಕೆಂಪು ಮಣ್ಣು ನೀರನ್ನು ಸುಲಭವಾಗಿ ಹೀರಿಕೊಳ್ಳುತ್ತದೆ. ಆದರೆ ಈ ಭಾಗದಲ್ಲಿ ವ್ಯಾಪಕವಾಗಿ ನಡೆದ ಅರಣ್ಯ ನಾಶದಿಂದ ಮಣ್ಣು ನೀರನ್ನು ಹಿಡಿದಿಟ್ಟು ಕೊಳ್ಳುವ ಶಕ್ತಿಯನ್ನು ಕಳೆದುಕೊಂಡಿದೆ ಎಂದು ತಿಳಿಸಿದರು.
0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search