• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕರಾವಳಿ ನದಿಗಳು ಬತ್ತುತ್ತಿರುವುದಕ್ಕೆ ತಜ್ಞರು ಕೊಟ್ಟ ಉತ್ತರ ನೋಡಿ

Tulunadu News Posted On September 17, 2018
0


0
Shares
  • Share On Facebook
  • Tweet It

ಮಂಗಳೂರು: ಕರಾವಳಿ ಭಾಗದ ನದಿಗಳಲ್ಲಿ ನೀರಿನ ಹರಿವು ದಿಢೀರ್ ಕುಸಿತವಾಗಿರುವುದಕ್ಕೆ ಕರಾವಳಿಯ ಜನರಲ್ಲಿ ಆತಂಕ ಮನೆಮಾಡಿದೆ. ದಕ್ಷಿಣ ಕನ್ನಡ ಮಾತ್ರವಲ್ಲದೇ ಉಡುಪಿ ಜಿಲ್ಲೆಯ ನದಿಗಳಲ್ಲೂ ನೀರಿನ ಹರಿವು ದಿಢೀರ್ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ , ಕುಮಾರಧಾರಾ, ಪಯಸ್ವಿನಿ, ಗುಂಡ್ಯ ಸೇರಿದಂತೆ ಇನ್ನಿತರ ಉಪನದಿಗಳಲ್ಲಿ ನೀರಿನ ಹರಿವು ಉಹಿಸಲು ಸಾಧ್ಯವಾಗದ ಮಟ್ಟದಲ್ಲಿ ಕುಸಿದಿದೆ. ಉಡುಪಿಗೆ ನೀರುಣಿಸುವ ಸ್ವರ್ಣ ನದಿ ಬತ್ತಲಾರಂಭಿಸಿದೆ. ಹೆಬ್ರಿ ಭಾಗದಲ್ಲಿ ಜನವರಿ ಹಾಗು ಫೆಬ್ರವರಿವರೆಗೂ ಭರ್ತಿಯಾಗಿ ಹರಿಯುತ್ತಿದ್ದ ಸೀತಾ ನದಿಯಲ್ಲೂ ಕಲ್ಲು ಬಂಡೆ, ತಳ ಗೋಚರಿಸತೊಡಗಿದೆ.

ಮಳೆಗಾಲ ಮುಗಿಯುವ ಮೊದಲೇ ನದಿಗಳು ಹೀಗೆ ಬತ್ತುತ್ತಾ ಹೋದರೆ ಬೇಸಿಗೆಯಲ್ಲಿ ಪರಿಸ್ಥಿತಿ ಹೇಗಿರಬಹುದೆಂದು ಕರಾವಳಿಯ ಜನರಿಗೆ ಊಹಿಸಿಕೊಳ್ಳಲೂ ಸಾಧ್ಯವಾಗುತ್ತಿಲ್ಲ. ಉಭಯ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕೂಡ ಕುಸಿದಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಆಕಾರಣ ಈಬಾರಿ ಬೇಸಿಗೆಯಲ್ಲಿ ನೀರಿನ ಸಮಸ್ಯೆಯ ಅಗಲಾರದು ಎಂದೇ ಭಾವಿಸಲಾಗಿತ್ತು. ಆದರೆ ಈಗ ನದಿಗಳು ಬತ್ತುತ್ತಿರುವುದು ಕರಾವಳಿಗರಲ್ಲಿ ಆತಂಕ ಮೂಡಿಸಿದೆ.

ಪ್ರಕೃತಿಯ ಮೇಲೆ ನಡೆದ ದೌರ್ಜನ್ಯದ ಫಲವೇನೋ ಎಂಬಂತೆ ಈ ಬಾರಿ ಧಾರಾಕಾರ ಮಳೆ ಸುರಿದಿತು. ಭಾರೀ ಮಳೆಗೆ ಗುಡ್ಡಗಳೇ ಕುಸಿದವು. ಕೆಲವೆಡೆ ಜಲಸ್ಫೋಟದಿಂದ ಆಸ್ತಿಪಾಸ್ತಿ ಸೇರಿದಂತೆ ಪ್ರಾಣಹಾನಿಗೂ ಈ ಬಾರಿಯ ಮಳೆ ಕಾರಣವಾಗಿತ್ತು. ಈಗ ಮಳೆ ನಿಂತಿದೆ ಆದರೆ ನದಿಯಲ್ಲಿ ಪ್ರವಾಹವಾಗಿ ಹರಿದ ಮಳೆ ನೀರು ಎಲ್ಲಿ ಹೋಯಿತು? ಎಂಬುದೇ ಜನರಿಗೆ ಯಕ್ಷ ಪ್ರಶ್ನೆಯಾಗಿ ಕಾಡತೊಡಗಿದ್ದು, ಈ ಕುರಿತು ತಜ್ಞರನ್ನು ಒನ್ ಇಂಡಿಯಾ ಮಾತನಾಡಿಸಿದಾಗ ಅವರಿಂದ ಬಂದ ಉತ್ತರ ಹೀಗಿತ್ತು.

 

 ಕೃಷಿಗೆ ನೀರಿಲ್ಲದಿದ್ದರೆ ಗತಿ ಏನು?

ಕೃಷಿಗೆ ನೀರಿಲ್ಲದಿದ್ದರೆ ಗತಿ ಏನು?; ಸುಳ್ಯ, ಬೆಳ್ತಂಗಡಿ ಭಾಗದ ತೋಟಗಳ ಬದಿಯ ತೋಡಿನಲ್ಲಿ ನೀರಿಲ್ಲದೇ ಭಯಾನಕ ದೃಶ್ಯ ಎದುರಾಗಿದೆ. ಪರಿಸರದ ಚಿಕ್ಕ ಹೊಳೆಗಳಾದ ಗೌರಿ, ಮಡಾವು ಹೊಳೆಯಲ್ಲೂ ನೀರು ಬತ್ತತೊಡಗಿದೆ. ಮುಂದಿನ ದಿನಗಳಲ್ಲಿ ಕೃಷಿಗೆ ನೀರಿಲ್ಲದಿದ್ದರೆ ಗತಿ ಏನು ಎಂದು ಕೃಷಿಕರು ಈಗಲೇ ತಲೆ ಮೇಲೆ ಕೈಹೊತ್ತಿ ಕೂತಿದ್ದಾರೆ. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾದ ಸುಳ್ಯ, ಬೆಳ್ತಂಗಡಿ, ಸಂಪಾಜೆ, ಜಾಲ್ಸೂರು, ಗುತ್ತಿಗಾರು ಸೇರಿದಂತೆ ಇತರೆ ಕಡೆಗಳಲ್ಲಿ ಅಂತರ್ಜಲ ಇಲಾಖೆ ಅಂಕಿಅಂಶಗಳ ಅಧ್ಯಯ ನಡೆಸಿದ್ದು ಅಂತರ್ಜಲ ಮಟ್ಟ ಕುಸಿಯುತ್ತಿರುವುದು ಧೃಡ ಪಟ್ಟಿದೆ. ಕೆಲವೆಡೆ ಅಂತರ್ಜಲ ಮಟ್ಟ 2.45 ಮೀಟರ್ ಗಳಷ್ಟು ಕೆಳಗೆ ಹೋಗಿದೆ.

 ನೀರನ್ನು ಸುಲಭವಾಗಿ ಹೀರಿಕೊಳ್ಳುವ ಕೆಂಪು ಮಣ್ಣು

 

ನೀರನ್ನು ಸುಲಭವಾಗಿ ಹೀರಿಕೊಳ್ಳುವ ಕೆಂಪು ಮಣ್ಣು; ನದಿಗಳಲ್ಲಿ ನೀರು ಬತ್ತಲೂ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನದಿ ನೀರಿನ ಒರತೆ ಸ್ಥಗಿತ ಗೊಂಡಿರುವುದೇ ಕಾರಣ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಡೆದ ಅರಣ್ಯ ನಾಶ. ಅದರ ಪರಿಣಾಮದಿಂದ ಈ ಭಾರೀ ಉಂಟಾದ ಭಾರೀ ಭೂ ಕುಸಿತ, ಕರಾವಳಿಯ ನದಿಯಲ್ಲಿ ನೀರು ಬತ್ತಲು ಮೂಲ ಕಾರಣ ಎಂದು ಎನ್ ಐಟಿಕೆ ತಜ್ಞ ಪ್ರೊ.ಎಸ್ ಜಿ ಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಪಶ್ಚಿಮ ಘಟ್ಟ ಕೆಂಪು ಮಣ್ಣನ್ನು ಹೊಂದಿದೆ. ಕೆಂಪು ಮಣ್ಣು ನೀರನ್ನು ಸುಲಭವಾಗಿ ಹೀರಿಕೊಳ್ಳುತ್ತದೆ. ಆದರೆ ಈ ಭಾಗದಲ್ಲಿ ವ್ಯಾಪಕವಾಗಿ ನಡೆದ ಅರಣ್ಯ ನಾಶದಿಂದ ಮಣ್ಣು ನೀರನ್ನು ಹಿಡಿದಿಟ್ಟು ಕೊಳ್ಳುವ ಶಕ್ತಿಯನ್ನು ಕಳೆದುಕೊಂಡಿದೆ ಎಂದು ತಿಳಿಸಿದರು.
0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.

  • Privacy Policy
  • Contact
© Tulunadu Infomedia.

Press enter/return to begin your search