• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಭೂ ಪರಿವರ್ತನೆ ಇನ್ನು ಎಷ್ಟು ಸುಲಭ ಗೊತ್ತಾ!!

Hanumantha Kamath Posted On September 20, 2018
0


0
Shares
  • Share On Facebook
  • Tweet It

ಕರ್ನಾಟಕ ರಾಜ್ಯ ಸರಕಾರವು ಕೃಷಿ ಭೂಮಿಯನ್ನು ಪರಿಭಾವಿತ ಭೂ ಪರಿವರ್ತನೆಗೆ (ಡೀಮ್ಡ್ ಕನ್ವರ್ಶನ್) ಪರಿವರ್ತನಾ ವಿಧಾನವನ್ನು ಸರಳೀಕರಣಗೊಳಿಸಿರುವ ಬಗ್ಗೆ ಸೆಪ್ಟೆಂಬರ್ 17 ರಂದು ಸುತ್ತೋಲೆ ಹೊರಡಿಸಿದೆ. ಈ ಮೂಲಕ ಬರುವ ದಿನಗಳಲ್ಲಿ ಭೂ ಪರಿವರ್ತನೆ ಸರಳೀಕೃತವಾಗುವ ಸೂಚನೆಗಳು ಸಿಕ್ಕಿವೆ. ಮಂಗಳೂರಿನಲ್ಲಿ ಕಳೆದ ಕೆಲವು ಸಮಯದಿಂದ ಯಾವುದೇ ಕೃಷಿ ಜಮೀನು ಬೇರೆ ಉದ್ದೇಶಗಳಾದ ವಾಸ್ತವ್ಯ ಅಥವಾ ವಾಣಿಜ್ಯ ಕಟ್ಟಡಗಳನ್ನು ಕಟ್ಟಲು ಪರಿವರ್ತನೆಯಾಗುವ ವ್ಯವಸ್ಥೆಯಲ್ಲಿ ಸಮಸ್ಯೆ ಇತ್ತು. ಭೂ ಪರಿವರ್ತನೆ ಆಗುತ್ತಿರಲಿಲ್ಲ. ಆದರೆ ಹೊಸ ಸುತ್ತೋಲೆಯ ಪ್ರಕಾರ ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ರ ಕಲಂ 95 (2) ರಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಬೋಗದಾರನು ಆ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಇತರೆ ಉದ್ದೇಶಕ್ಕಾಗಿ ಬದಲಿಸಲು ಇಚ್ಚಿಸಿದರೆ, ಅಂತಹ ಅಧಿಭೋಗದಾರನು ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಸತಾವಿತ ಕಲಂ 95(2) ರ ಮೊದಲನೇ ಪರಂತುಕದ ಪ್ರಕಾರ ಸಲ್ಲಿಸಿದ ಅರ್ಜಿಯಲ್ಲಿನ ಭೂ ಉಪಯೋಗದ ಉದ್ದೇಶವು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ, 1961 ರಡಿ ರಾಜ್ಯ ಸರಕಾರವು ಪ್ರಕಟಿಸುವ ಮಹಾ ಯೋಜನೆಯಲ್ಲಿರುವ (ಮಾಸ್ಟರ್ ಪ್ಲಾನ್) ಉದ್ದೇಶದಂತೆ ಇದ್ದರೆ, ಅರ್ಜಿದಾರನ ಕೋರಿಕೆಯನ್ನು ಜಿಲ್ಲಾಧಿಕಾರಿಯು ತಿರಸ್ಕರಿಸುವಂತಿಲ್ಲ. ಅಲ್ಲದೇ, ಒಂದು ವೇಳೆ ಜಿಲ್ಲಾಧಿಕಾರಿಯು ಸದರಿ ಅರ್ಜಿ ತಲುಪಿದ ದಿನಾಂಕದಿಂದ ನಾಲ್ಕು ತಿಂಗಳ ಅವಧಿಯೊಳಗೆ ತನ್ನ ತೀರ್ಮಾನವನ್ನು ಅರ್ಜಿದಾರನಿಗೆ ತಿಳಿಸದೇ ಇದ್ದಂತಹ ಸಂದರ್ಭದಲ್ಲಿ ಅದು “ಪರಿಭಾವಿತ ಭೂ ಪರಿವರ್ತನೆ” (ಡೀಮ್ಡ್ ಕನ್ವರ್ಷನ್) ಎಂದು ಭಾವಿಸಲು ಕಲಂ 95 (5) ರಲ್ಲಿ ಅವಕಾಶವಿರುತ್ತದೆ.
ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ, 1)ರ ಅಡಿಯಲ್ಲಿ ಪ್ರಕಟಿಸಲಾದ ಮಹಾಯೋಜನೆ (ಮಾಸ್ಟರ್ ಪ್ಲಾನ್) ಯಡಿಯಲ್ಲಿ ಬರುವ ಜಮೀನುಗಳ ಪರಿವರ್ತನೆಯನ್ನು ಸರಳೀಕೃತಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ರ ಕಲಂ 95 (2) ಗೆ ಉಲ್ಲೇಖಿತ ಅಧಿಸೂಚನೆಯ ದಿನಾಂಕ: 17-03-2018 ರಲ್ಲಿ ಹೇಳಲಾಗಿದೆ.
ಇಲ್ಲಿ ಇರುವ ವಿಷಯ ಏನೆಂದರೆ ಈ ನಿಯಮ ನೀವು ಮಂಗಳೂರಿನವರಾದರೇ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಂದರೆ ಮೂಡಾದ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ ಮಾತ್ರ ಉಪಯೋಗವಾಗಲಿದೆ. ಹಾಗಾದರೆ ಮೂಡಾದ ಹೊರಗೆ ವಾಸಿಸುವ ಜನರಿಗೆ ಇದರಿಂದ ಏನೂ ಪ್ರಯೋಜನವಿಲ್ಲ. ಆದ್ದರಿಂದ ಒಂದು ಯೋಜನೆ ಕೇವಲ ನಗರವಾಸಿಗಳಿಗೆ ಮಾತ್ರ ಮಾಡಿರುವುದು ಸರಿನಾ ಎನ್ನುವುದು ಸದ್ಯದ ಪ್ರಶ್ನೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Hanumantha Kamath April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Hanumantha Kamath April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search