• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಭೂ ಪರಿವರ್ತನೆ ಇನ್ನು ಎಷ್ಟು ಸುಲಭ ಗೊತ್ತಾ!!

Hanumantha Kamath Posted On September 20, 2018
0


0
Shares
  • Share On Facebook
  • Tweet It

ಕರ್ನಾಟಕ ರಾಜ್ಯ ಸರಕಾರವು ಕೃಷಿ ಭೂಮಿಯನ್ನು ಪರಿಭಾವಿತ ಭೂ ಪರಿವರ್ತನೆಗೆ (ಡೀಮ್ಡ್ ಕನ್ವರ್ಶನ್) ಪರಿವರ್ತನಾ ವಿಧಾನವನ್ನು ಸರಳೀಕರಣಗೊಳಿಸಿರುವ ಬಗ್ಗೆ ಸೆಪ್ಟೆಂಬರ್ 17 ರಂದು ಸುತ್ತೋಲೆ ಹೊರಡಿಸಿದೆ. ಈ ಮೂಲಕ ಬರುವ ದಿನಗಳಲ್ಲಿ ಭೂ ಪರಿವರ್ತನೆ ಸರಳೀಕೃತವಾಗುವ ಸೂಚನೆಗಳು ಸಿಕ್ಕಿವೆ. ಮಂಗಳೂರಿನಲ್ಲಿ ಕಳೆದ ಕೆಲವು ಸಮಯದಿಂದ ಯಾವುದೇ ಕೃಷಿ ಜಮೀನು ಬೇರೆ ಉದ್ದೇಶಗಳಾದ ವಾಸ್ತವ್ಯ ಅಥವಾ ವಾಣಿಜ್ಯ ಕಟ್ಟಡಗಳನ್ನು ಕಟ್ಟಲು ಪರಿವರ್ತನೆಯಾಗುವ ವ್ಯವಸ್ಥೆಯಲ್ಲಿ ಸಮಸ್ಯೆ ಇತ್ತು. ಭೂ ಪರಿವರ್ತನೆ ಆಗುತ್ತಿರಲಿಲ್ಲ. ಆದರೆ ಹೊಸ ಸುತ್ತೋಲೆಯ ಪ್ರಕಾರ ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ರ ಕಲಂ 95 (2) ರಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಬೋಗದಾರನು ಆ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಇತರೆ ಉದ್ದೇಶಕ್ಕಾಗಿ ಬದಲಿಸಲು ಇಚ್ಚಿಸಿದರೆ, ಅಂತಹ ಅಧಿಭೋಗದಾರನು ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಸತಾವಿತ ಕಲಂ 95(2) ರ ಮೊದಲನೇ ಪರಂತುಕದ ಪ್ರಕಾರ ಸಲ್ಲಿಸಿದ ಅರ್ಜಿಯಲ್ಲಿನ ಭೂ ಉಪಯೋಗದ ಉದ್ದೇಶವು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ, 1961 ರಡಿ ರಾಜ್ಯ ಸರಕಾರವು ಪ್ರಕಟಿಸುವ ಮಹಾ ಯೋಜನೆಯಲ್ಲಿರುವ (ಮಾಸ್ಟರ್ ಪ್ಲಾನ್) ಉದ್ದೇಶದಂತೆ ಇದ್ದರೆ, ಅರ್ಜಿದಾರನ ಕೋರಿಕೆಯನ್ನು ಜಿಲ್ಲಾಧಿಕಾರಿಯು ತಿರಸ್ಕರಿಸುವಂತಿಲ್ಲ. ಅಲ್ಲದೇ, ಒಂದು ವೇಳೆ ಜಿಲ್ಲಾಧಿಕಾರಿಯು ಸದರಿ ಅರ್ಜಿ ತಲುಪಿದ ದಿನಾಂಕದಿಂದ ನಾಲ್ಕು ತಿಂಗಳ ಅವಧಿಯೊಳಗೆ ತನ್ನ ತೀರ್ಮಾನವನ್ನು ಅರ್ಜಿದಾರನಿಗೆ ತಿಳಿಸದೇ ಇದ್ದಂತಹ ಸಂದರ್ಭದಲ್ಲಿ ಅದು “ಪರಿಭಾವಿತ ಭೂ ಪರಿವರ್ತನೆ” (ಡೀಮ್ಡ್ ಕನ್ವರ್ಷನ್) ಎಂದು ಭಾವಿಸಲು ಕಲಂ 95 (5) ರಲ್ಲಿ ಅವಕಾಶವಿರುತ್ತದೆ.
ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ, 1)ರ ಅಡಿಯಲ್ಲಿ ಪ್ರಕಟಿಸಲಾದ ಮಹಾಯೋಜನೆ (ಮಾಸ್ಟರ್ ಪ್ಲಾನ್) ಯಡಿಯಲ್ಲಿ ಬರುವ ಜಮೀನುಗಳ ಪರಿವರ್ತನೆಯನ್ನು ಸರಳೀಕೃತಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ರ ಕಲಂ 95 (2) ಗೆ ಉಲ್ಲೇಖಿತ ಅಧಿಸೂಚನೆಯ ದಿನಾಂಕ: 17-03-2018 ರಲ್ಲಿ ಹೇಳಲಾಗಿದೆ.
ಇಲ್ಲಿ ಇರುವ ವಿಷಯ ಏನೆಂದರೆ ಈ ನಿಯಮ ನೀವು ಮಂಗಳೂರಿನವರಾದರೇ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಂದರೆ ಮೂಡಾದ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ ಮಾತ್ರ ಉಪಯೋಗವಾಗಲಿದೆ. ಹಾಗಾದರೆ ಮೂಡಾದ ಹೊರಗೆ ವಾಸಿಸುವ ಜನರಿಗೆ ಇದರಿಂದ ಏನೂ ಪ್ರಯೋಜನವಿಲ್ಲ. ಆದ್ದರಿಂದ ಒಂದು ಯೋಜನೆ ಕೇವಲ ನಗರವಾಸಿಗಳಿಗೆ ಮಾತ್ರ ಮಾಡಿರುವುದು ಸರಿನಾ ಎನ್ನುವುದು ಸದ್ಯದ ಪ್ರಶ್ನೆ.

0
Shares
  • Share On Facebook
  • Tweet It




Trending Now
ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
Hanumantha Kamath December 23, 2025
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Hanumantha Kamath December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
  • Popular Posts

    • 1
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 2
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 3
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 4
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 5
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!

  • Privacy Policy
  • Contact
© Tulunadu Infomedia.

Press enter/return to begin your search