• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭೂ ಪರಿವರ್ತನೆ ಇನ್ನು ಎಷ್ಟು ಸುಲಭ ಗೊತ್ತಾ!!

Hanumantha Kamath Posted On September 20, 2018


  • Share On Facebook
  • Tweet It

ಕರ್ನಾಟಕ ರಾಜ್ಯ ಸರಕಾರವು ಕೃಷಿ ಭೂಮಿಯನ್ನು ಪರಿಭಾವಿತ ಭೂ ಪರಿವರ್ತನೆಗೆ (ಡೀಮ್ಡ್ ಕನ್ವರ್ಶನ್) ಪರಿವರ್ತನಾ ವಿಧಾನವನ್ನು ಸರಳೀಕರಣಗೊಳಿಸಿರುವ ಬಗ್ಗೆ ಸೆಪ್ಟೆಂಬರ್ 17 ರಂದು ಸುತ್ತೋಲೆ ಹೊರಡಿಸಿದೆ. ಈ ಮೂಲಕ ಬರುವ ದಿನಗಳಲ್ಲಿ ಭೂ ಪರಿವರ್ತನೆ ಸರಳೀಕೃತವಾಗುವ ಸೂಚನೆಗಳು ಸಿಕ್ಕಿವೆ. ಮಂಗಳೂರಿನಲ್ಲಿ ಕಳೆದ ಕೆಲವು ಸಮಯದಿಂದ ಯಾವುದೇ ಕೃಷಿ ಜಮೀನು ಬೇರೆ ಉದ್ದೇಶಗಳಾದ ವಾಸ್ತವ್ಯ ಅಥವಾ ವಾಣಿಜ್ಯ ಕಟ್ಟಡಗಳನ್ನು ಕಟ್ಟಲು ಪರಿವರ್ತನೆಯಾಗುವ ವ್ಯವಸ್ಥೆಯಲ್ಲಿ ಸಮಸ್ಯೆ ಇತ್ತು. ಭೂ ಪರಿವರ್ತನೆ ಆಗುತ್ತಿರಲಿಲ್ಲ. ಆದರೆ ಹೊಸ ಸುತ್ತೋಲೆಯ ಪ್ರಕಾರ ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ರ ಕಲಂ 95 (2) ರಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಬೋಗದಾರನು ಆ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಇತರೆ ಉದ್ದೇಶಕ್ಕಾಗಿ ಬದಲಿಸಲು ಇಚ್ಚಿಸಿದರೆ, ಅಂತಹ ಅಧಿಭೋಗದಾರನು ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಸತಾವಿತ ಕಲಂ 95(2) ರ ಮೊದಲನೇ ಪರಂತುಕದ ಪ್ರಕಾರ ಸಲ್ಲಿಸಿದ ಅರ್ಜಿಯಲ್ಲಿನ ಭೂ ಉಪಯೋಗದ ಉದ್ದೇಶವು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ, 1961 ರಡಿ ರಾಜ್ಯ ಸರಕಾರವು ಪ್ರಕಟಿಸುವ ಮಹಾ ಯೋಜನೆಯಲ್ಲಿರುವ (ಮಾಸ್ಟರ್ ಪ್ಲಾನ್) ಉದ್ದೇಶದಂತೆ ಇದ್ದರೆ, ಅರ್ಜಿದಾರನ ಕೋರಿಕೆಯನ್ನು ಜಿಲ್ಲಾಧಿಕಾರಿಯು ತಿರಸ್ಕರಿಸುವಂತಿಲ್ಲ. ಅಲ್ಲದೇ, ಒಂದು ವೇಳೆ ಜಿಲ್ಲಾಧಿಕಾರಿಯು ಸದರಿ ಅರ್ಜಿ ತಲುಪಿದ ದಿನಾಂಕದಿಂದ ನಾಲ್ಕು ತಿಂಗಳ ಅವಧಿಯೊಳಗೆ ತನ್ನ ತೀರ್ಮಾನವನ್ನು ಅರ್ಜಿದಾರನಿಗೆ ತಿಳಿಸದೇ ಇದ್ದಂತಹ ಸಂದರ್ಭದಲ್ಲಿ ಅದು “ಪರಿಭಾವಿತ ಭೂ ಪರಿವರ್ತನೆ” (ಡೀಮ್ಡ್ ಕನ್ವರ್ಷನ್) ಎಂದು ಭಾವಿಸಲು ಕಲಂ 95 (5) ರಲ್ಲಿ ಅವಕಾಶವಿರುತ್ತದೆ.
ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ, 1)ರ ಅಡಿಯಲ್ಲಿ ಪ್ರಕಟಿಸಲಾದ ಮಹಾಯೋಜನೆ (ಮಾಸ್ಟರ್ ಪ್ಲಾನ್) ಯಡಿಯಲ್ಲಿ ಬರುವ ಜಮೀನುಗಳ ಪರಿವರ್ತನೆಯನ್ನು ಸರಳೀಕೃತಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ರ ಕಲಂ 95 (2) ಗೆ ಉಲ್ಲೇಖಿತ ಅಧಿಸೂಚನೆಯ ದಿನಾಂಕ: 17-03-2018 ರಲ್ಲಿ ಹೇಳಲಾಗಿದೆ.
ಇಲ್ಲಿ ಇರುವ ವಿಷಯ ಏನೆಂದರೆ ಈ ನಿಯಮ ನೀವು ಮಂಗಳೂರಿನವರಾದರೇ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಂದರೆ ಮೂಡಾದ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ ಮಾತ್ರ ಉಪಯೋಗವಾಗಲಿದೆ. ಹಾಗಾದರೆ ಮೂಡಾದ ಹೊರಗೆ ವಾಸಿಸುವ ಜನರಿಗೆ ಇದರಿಂದ ಏನೂ ಪ್ರಯೋಜನವಿಲ್ಲ. ಆದ್ದರಿಂದ ಒಂದು ಯೋಜನೆ ಕೇವಲ ನಗರವಾಸಿಗಳಿಗೆ ಮಾತ್ರ ಮಾಡಿರುವುದು ಸರಿನಾ ಎನ್ನುವುದು ಸದ್ಯದ ಪ್ರಶ್ನೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Hanumantha Kamath May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Hanumantha Kamath May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search