• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್

Tulunadu News Posted On September 22, 2018


  • Share On Facebook
  • Tweet It

ಮಂಗಳೂರಿನ ಶಾಲಾ ಮಕ್ಕಳಿಗೆ ಕೊಡುವ ದಸರಾ ರಜೆಯನ್ನು ಯಾವುದೇ ಕಾರಣಕ್ಕೂ ಕಡಿಮೆಗೊಳಿಸಬಾರದು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಮಂಗಳೂರಿನಲ್ಲಿ ದಸರಾ ಹಬ್ಬಕ್ಕೆ ತನ್ನದೇ ಆದ ವೈಶಿಷ್ಯವಿದೆ.ಮೈಸೂರು ದಸರಾದಂತೆ ಮಂಗಳೂರು ದಸರಾ ಕೂಡ ರಾಷ್ಟ್ರಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಮಂಗಳೂರಿನಲ್ಲಿರುವ ಪುರಾತನ ದೇವಿ ದೇವಾಲಯಗಳಾದ ಕಟೀಲು ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ,ಮಂಗಳಾದೇವಿ ಸನ್ನಿದ್ಧಿಗೆ ಭಕ್ತಸಾಗರ ಹರಿದು ಬರುತ್ತದೆ. ಹೀಗಿರುವಾಗ ಆ ಸಮಯದಲ್ಲಿ ಮಕ್ಕಳಿಗೆ ರಜೆ ನೀಡುವುದು ಹಿಂದಿನ ಕಾಲದಿಂದ ನಡೆಸಿಕೊಂಡು ಬಂದ ಪ್ರತೀತಿಯಾಗಿದೆ. ಮಳೆಗಾಲದಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದಾಗಿ ಜಿಲ್ಲಾಧಿಕಾರಿಗಳು ತುರ್ತು ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಿದ ಕಾರಣಕ್ಕಾಗಿ ಅದನ್ನು ಸರಿದೂಗಿಸಲು ದಸರಾ ರಜೆ ಕಡಿಮೆ ಮಾಡಲು ಶಿಕ್ಷಣ ಇಲಾಖೆಯು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸುತ್ತೋಲೆ ಕಳುಹಿಸಿದೆ.

ಅಕ್ಟೋಬರ್ 7 ರಿಂದ 21 ರವರೆಗೆ ನೀಡಲಾಗುವ ರಜೆಯನ್ನು ಅಕ್ಟೋಬರ್ 14 ರಿಂದ 21 ರ ತನಕ ಸೀಮಿತಗೊಳಿಸಲಾಗಿದೆ. ಇದು ಸರಿಯಲ್ಲ. ಮಕ್ಕಳಿಗೆ ನವರಾತ್ರಿಯ ಸಮಯದಲ್ಲಿ ನೀಡಲಾಗುವ ರಜೆಯನ್ನು ಯಾವ ಕಾರಣಕ್ಕೂ ಕಡಿಮೆ ಮಾಡಬಾರದು,ಪಕೃತಿ ವಿಕೋಪದ ಸಂಧರ್ಭದಲ್ಲಿ ನೀಡಿರುವ ರಜೆಯನ್ನು ಶನಿವಾದ ದಿವಸ ಹೆಚ್ಚುವರಿ ತರಗತಿಗಳನ್ನು ನಡೆಸಿ ಸರಿದೂಗಿಸಬಹುದು ಎಂದು ಶಾಸಕರು ಮನವಿ ಮಾಡಿದ್ದಾರೆ.

ಕ್ರಿಸ್ಮಸ್ ಹಬ್ಬದ ರಜೆ ನೀಡುವ ವಿಚಾರದಲ್ಲಿ ಆಯಾಯ ಶಾಲಾ ಕಾಲೇಜುಗಳ ವಿವೇಚನೆಗೆ ಬಿಟ್ಟ ನಿರ್ಣಯ ಎಂದಿರುವ ಸರಕಾರ, ದಸರಾ ರಜೆಯನ್ನು ನೀಡುವ ವಿಚಾರವನ್ನು ಕೂಡ ಆಯಾಯ ಶಾಲಾ ಕಾಲೇಜುಗಳ ವಿವೇಚನೆಗೆ ಬಿಡಬೇಕಿತ್ತು.ಆದರೆ ದಸರಾ ರಜೆ ಕಡಿಮೆ ಮಾಡುವ ಸುತ್ತೋಲೆಯನ್ನು ಸ್ವತಃ ರಾಜ್ಯ ಸರಕಾರವೇ ಹೊರಡಿಸಿರುವುದು ರಾಜ್ಯ ಸರಕಾರದ ಇಬ್ಬಗೆ ನೀತಿಯನ್ನು ಎತ್ತಿ ತೋರಿಸುತ್ತದೆ ಎಂದು ಶಾಸಕ ಕಾಮತ್ ಅವರು ಹೇಳಿದ್ದಾರೆ‌.

  • Share On Facebook
  • Tweet It


- Advertisement -
bjpchristmasdasaraholidayleave dasaravedavays kamath


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಮೊಯಿಲಿ ಪುತ್ರವಾತ್ಸಲ್ಯ ಕಾಂಗ್ರೆಸ್ ಜಾತಕ ಬಯಲಿಗೆ ತಂದು ಸಿದ್ದು ಕ್ಯಾಪೆಸಿಟಿ ತೋರಿಸಿತು!
March 21, 2018
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search