• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ಕಿಟ್ಟಿಯ ಅಣ್ಣನ ಮಗನ ಕಿಡ್ನ್ಯಾಪ್ ದುನಿಯಾ ವಿಜಿ ಅರೆಸ್ಟ್

TNN Correspondent Posted On September 23, 2018
0


0
Shares
  • Share On Facebook
  • Tweet It

ಬೆಂಗಳೂರು-ದುನಿಯಾ ವಿಜಿ ಕಿರಿಕ್ ನ ಮೇಲೆ ಕಿರಿಕ್ ಮಾಡಿಕೊಂಡು ಜೈಲು ಪಾಲಾಗಿದ್ದಾರೆ. ಸಣ್ಣ ಕಿರಿಕ್ ಗೆ ತಲೆಕೆಡಿಸಿಕೊಂಡು ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿರುವ ದುನಿಯಾ ವಿಜಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಅಂಬೆಡ್ಕರ್ ಭವನದಲ್ಲಿ ನಡೆಯುತ್ತಿದ್ದ ಬಾಡಿ ಬಿಲ್ಡ್ ಕಾರ್ಯಕ್ರಮದಲ್ಲಿ ಮಾರುತಿ ಎಂಬ ಜಿಮ್ ಟ್ರೇನರ್ ಮೇಲೆ ವಿಜಿ ಮತ್ತು ಆತನ ತಂಡ ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿದ್ರು. ಪಾನಿಪುರಿ ಕಿಟ್ಟಿಯ ಅಣ್ಣನ ಮಗನಾಗಿರುವ ಮಾರುತಿ , ಬಾಡಿ ಬಿಲ್ಡಿಂಗ್ ಕಾರ್ಯಕ್ರಮಕ್ಕೆ ಬಂದಿದ್ದ ಸಮಯದಲ್ಲಿ ಅಲ್ಲಿಗೆ ಬಂದಿದ್ದ ವಿಜಿ, ಪಾನಿಪುರಿ ಕಿಟ್ಟಿ ಬಗ್ಗೆ ಕೀಳಾಗಿ ಮಾತನಾಡಿದ್ರಂತೆ . ಅದಕ್ಕೆ ಮಾರುತಿ ವಿರೋಧ ವ್ಯೆಕ್ತಪಡಿಸಿದ ಕಾರಣ ವಿಜಿ ಹಲ್ಲೆ ನಡೆಸಿದ್ದಾರೆ.

ಪಾನಿಪುರಿ ಕಿಟ್ಟಿ ಈ ಹಿಂದೆ ದುನಿಯಾ ವಿಜಿಗೆ ಟ್ರೈನರ್ ಆಗಿದ್ರು . ನಂತರ ಕಾರಣಾಂತರದಿಂದ ಕಳೆದ ಎಂಟು ತಿಂಗಳಿನಿಂದ ದೂರವಾಗಿದ್ರು. ಇದೇ ದ್ವೇಷದಿಂದ ದುನಿಯಾ ವಿಜಿ ಹಲ್ಲೆ ನಡೆಸಿರುವ ಸಾಧ್ಯತೆ ಇದೆ.

ದೂರು ದಾಖಲಾದ ನಂತರ ಸುಮಾರು ಅರ್ಧ ಗಂಟೆ ಬಳಿಕ ದುನಿಯಾ ವಿಜಿ ಮಾರುತಿಯನ್ನ ಪೊಲೀಸ್ ಠಾಣೆಗೆ ಕರೆ ತಂದಿದ್ರು. ಈ ಸಂದರ್ಭದಲ್ಲಿ ಮಾರುತಿ ಕಡೆಯವರಿಂದ ದುನಿಯಾ ವಿಜಿ ಕಾರನ್ನ ಧ್ವಂಸಗೊಳಿಸಲಾಯಿತು .ಕ್ಷಣ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು .ತಕ್ಷಣ ಪೊಲೀಸರು ಆರೋಪಿಯನ್ನ ಬಂಧಿಸಿ ಸ್ಥಳದಲ್ಲಿ ಕೆ.ಎಸ್.ಆರ್.ಪಿ ತುಕುಡಿಯನ್ನ ನಿಯೋಜಿಸಿದ್ರು .ಸದ್ಯ ದುನಿಯಾ ವಿಜಿ ಮೇಲೆ 365 ಕಿಡ್ನ್ಯಾಪ್ , 325 , ಹಲ್ಲೆ ,ಮತ್ತು ಬೆದರಿಕೆ ಪ್ರಕರಣ ದಾಖಲು ಮಾಡಿ ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ.

0
Shares
  • Share On Facebook
  • Tweet It


#duniyavijay


Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search