• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ಥಾನಕ್ಕೆ ಎಚ್ಚರಿಕೆ ನೀಡಿದ ಭಾರತೀಯ ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌

TNN Correspondent Posted On September 23, 2018
0


0
Shares
  • Share On Facebook
  • Tweet It

ದೆಹಲಿ- ಜಮ್ಮು-ಕಾಶ್ಮೀರದಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಉಗ್ರರು ಮೂವರು ಪೊಲೀಸರನ್ನು ಮನೆಗಳಿಗೇ ನುಗ್ಗಿ ಗುಂಡಿಟ್ಟು ಕೊಂದ ಘಟನೆಗೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಅವರು ಕಿಡಿಕಾರಿದ್ದಾರೆ.ಜಮ್ಮು-ಕಾಶ್ಮೀರದಲ್ಲಿ ಅನಾಗರಿಕ ಕೃತ್ಯಗಳನ್ನು ಪ್ರಚೋದಿಸುತ್ತಿರುವ ಪಾಕಿಸ್ತಾನ ಸೇನೆ ಹಾಗೂ ಉಗ್ರರಿಗೆ ತಿರುಗೇಟು ನೀಡುವ ಸಮಯ ಇದೀಗ ಒದಗಿ ಬಂದಿದೆ ಎಂದು ರಾವತ್‌ ಅವರು ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾವತ್‌ ಅವರು, ‘ಕಣಿವೆ ರಾಜ್ಯದಾದ್ಯಂತ ಬರ್ಬರ ಕೃತ್ಯಗಳನ್ನು ಎಸಗುತ್ತಿರುವ ಪಾಕಿಸ್ತಾನ ಸೇನೆ ಹಾಗೂ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಮಯ ಬಂದಿದೆ. ಆದರೆ, ಅವರು ಹಿಡಿದ ಅನಾಗರಿಕ ಮಾರ್ಗ ನಾವು ಹಿಡಿಯುವುದಿಲ್ಲ. ಆದಾಗ್ಯೂ, ಅವರಿಗೆ ತಕ್ಕ ಪ್ರತಿಕ್ರಿಯೆ ನೀಡಲಾಗುತ್ತದೆ,’ ಎಂದು ಪಾಕಿಸ್ತಾನದ ವಿರುದ್ಧ ಗುಡುಗಿದರು.

ಇನ್ನು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಜೊತೆಗಿನ ಮಾತುಕತೆ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ಭಯೋತ್ಪಾದನೆ ಹಾಗೂ ಶಾಂತಿ ಮಾತುಕತೆ ಒಟ್ಟಾಗಿ ನಡೆಯಲು ಸಾಧ್ಯವಿಲ್ಲ ಎಂದರು. ಈ ಮೂಲಕ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಜೊತೆ ಮಾತುಕತೆ ರದ್ದುಗೊಳಿಸಿದ ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡರು. ಅಲ್ಲದೆ, ಪಾಕಿಸ್ತಾನ ಮೊದಲು ಭಯೋತ್ಪಾದನೆಯನ್ನು ಬುಡಮೇಲು ಮಾಡಬೇಕು ಎಂದು ಆಗ್ರಹಿಸಿದರು.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search