• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎರಡನೇ ಬಾರಿಯೂ ಪಾಕಿಸ್ಥಾನವನ್ನು ಎಡಮುರಿ ಕಟ್ಟಿದ ಭಾರತ..!!

TNN Correspondent Posted On September 24, 2018
0


0
Shares
  • Share On Facebook
  • Tweet It

ದುಬೈ: ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರ ಶತಕಗಳ ನೆರವಿನಿಂದ ಭಾರತ ತಂಡ ಏಷ್ಯಾಕಪ್​ನಲ್ಲಿ ಪಾಕಿಸ್ತಾನ ವಿರುದ್ಧ 9 ವಿಕೆಟ್​ಗಳ ಭಾರೀ ಗೆಲುವು ದಾಖಲಿಸಿದೆ.ಭಾನುವಾರ ನಡೆದ ಸೂಪರ್​-4 ಹಂತದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡವನ್ನು 7 ವಿಕೆಟ್​ಗೆ 238 ರನ್‍ಗಳಿಗೆ ನಿಯಂತ್ರಿಸಿದ ಭಾರತ ತಂಡ 39.3 ಓವರ್​ ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.ಸ್ಪರ್ಧಾತ್ಮಕ ಮೊತ್ತ ಗುರಿ ಬೆಂಬತ್ತಿದ ಭಾರತ ತಂಡಕ್ಕೆ ರೋಹಿತ್ ಮತ್ತು ಶಿಖರ್ ಧವನ್ ಮೊದಲ ವಿಕೆಟ್​ಗೆ 210 ರನ್​ ಜೊತೆಯಾಟದ ಮೂಲಕ ಭರ್ಜರಿ ಆರಂಭ ಒದಗಿಸಿದರು. ನಂತರ ಬಂದ ಅಂಬಟಿ ರಾಯುಡು ಮತ್ತು ರೋಹಿತ್ ಗೆಲುವಿನ ದಡ ಸೇರಿಸಿದರು.ನಾಯಕ ರೋಹಿತ್119 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 111 ರನ್ ಬಾರಿಸಿ ಔಟಾಗದೇ ಉಳಿದರು. ಇದು ರೋಹಿತ್​ಗೆ 19ನೇ ಏಕದಿನ ಶತಕವಾಗಿದೆ. ಮತ್ತೊಬ್ಬ ಬ್ಯಾಟ್ಸ್ ಮನ್ ಶಿಖರ್ ಧವನ್ 100 ಎಸೆತಗಳಲ್ಲಿ 16 ಬೌಂಡರಿ ಹಾಗೂ 2 ಸಿಕ್ಸರ್ ಸೇರಿದಂತೆ 114 ರನ್ ಸಿಡಿಸಿ ಔಟಾದರು. ಇದು ಧವನ್​ಗೆ 15ನೇ ಶತಕವಾಗಿದೆ.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಆದರೂ ಮಧ್ಯಮ ಕ್ರಮಾಂಕದಲ್ಲಿ ನಾಯಕ ಸರ್ಫಾರಾಜ್ ಅಹ್ಮದ್ (44) ಮತ್ತು ಶೋಯೆಬ್ ಮಲಿಕ್ (78) 4ನೇ ವಿಕೆಟ್​ಗೆ 107 ರನ್ ಜೊತೆಯಾಟ ನಿಭಾಯಿಸಿ ತಂಡವನ್ನು ಉತ್ತಮ ಮೊತ್ತದತ್ತ ಕೊಂಡೊಯ್ದರು.ಭಾರತದ ಪರ ಉತ್ತಮ ದಾಳಿ ಸಂಘಟಿಸಿದ ಜಸ್ ಪ್ರೀತ್ ಬುಮ್ರಾ, ಯಜುರ್ವೆಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಕಬಳಿಸಿದರು.

ಸಂಕ್ಷಿಪ್ತ ಸ್ಕೋರ್

ಪಾಕಿಸ್ತಾನ 50 ಓವರ್ 7 ವಿಕೆಟ್​ಗೆ 237 (ಮಲಿಕ್ 78, ಸರ್ಫರಾಜ್ 44, ಜಮಾನ್ 31, ಆಸೀಫ್ 30, ಬುಮ್ರಾ 29/2, ಚಾಹಲ್ 46/2, ಕುಲದೀಪ್ 41/2).
ಭಾರತ 39.3 ಓವರ್ 1 ವಿಕೆಟ್ 237 (ರೋಹಿತ್ ಅಜೇಯ 111, ಧವನ್ 114, ರಾಯುಡು ಅಜೇಯ 12).
ಪಂದ್ಯಶ್ರೇಷ್ಠ: ಶಿಖರ್ ಧವನ್

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search