• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಎರಡನೇ ಬಾರಿಯೂ ಪಾಕಿಸ್ಥಾನವನ್ನು ಎಡಮುರಿ ಕಟ್ಟಿದ ಭಾರತ..!!

TNN Correspondent Posted On September 24, 2018


  • Share On Facebook
  • Tweet It

ದುಬೈ: ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರ ಶತಕಗಳ ನೆರವಿನಿಂದ ಭಾರತ ತಂಡ ಏಷ್ಯಾಕಪ್​ನಲ್ಲಿ ಪಾಕಿಸ್ತಾನ ವಿರುದ್ಧ 9 ವಿಕೆಟ್​ಗಳ ಭಾರೀ ಗೆಲುವು ದಾಖಲಿಸಿದೆ.ಭಾನುವಾರ ನಡೆದ ಸೂಪರ್​-4 ಹಂತದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡವನ್ನು 7 ವಿಕೆಟ್​ಗೆ 238 ರನ್‍ಗಳಿಗೆ ನಿಯಂತ್ರಿಸಿದ ಭಾರತ ತಂಡ 39.3 ಓವರ್​ ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.ಸ್ಪರ್ಧಾತ್ಮಕ ಮೊತ್ತ ಗುರಿ ಬೆಂಬತ್ತಿದ ಭಾರತ ತಂಡಕ್ಕೆ ರೋಹಿತ್ ಮತ್ತು ಶಿಖರ್ ಧವನ್ ಮೊದಲ ವಿಕೆಟ್​ಗೆ 210 ರನ್​ ಜೊತೆಯಾಟದ ಮೂಲಕ ಭರ್ಜರಿ ಆರಂಭ ಒದಗಿಸಿದರು. ನಂತರ ಬಂದ ಅಂಬಟಿ ರಾಯುಡು ಮತ್ತು ರೋಹಿತ್ ಗೆಲುವಿನ ದಡ ಸೇರಿಸಿದರು.ನಾಯಕ ರೋಹಿತ್119 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 111 ರನ್ ಬಾರಿಸಿ ಔಟಾಗದೇ ಉಳಿದರು. ಇದು ರೋಹಿತ್​ಗೆ 19ನೇ ಏಕದಿನ ಶತಕವಾಗಿದೆ. ಮತ್ತೊಬ್ಬ ಬ್ಯಾಟ್ಸ್ ಮನ್ ಶಿಖರ್ ಧವನ್ 100 ಎಸೆತಗಳಲ್ಲಿ 16 ಬೌಂಡರಿ ಹಾಗೂ 2 ಸಿಕ್ಸರ್ ಸೇರಿದಂತೆ 114 ರನ್ ಸಿಡಿಸಿ ಔಟಾದರು. ಇದು ಧವನ್​ಗೆ 15ನೇ ಶತಕವಾಗಿದೆ.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಆದರೂ ಮಧ್ಯಮ ಕ್ರಮಾಂಕದಲ್ಲಿ ನಾಯಕ ಸರ್ಫಾರಾಜ್ ಅಹ್ಮದ್ (44) ಮತ್ತು ಶೋಯೆಬ್ ಮಲಿಕ್ (78) 4ನೇ ವಿಕೆಟ್​ಗೆ 107 ರನ್ ಜೊತೆಯಾಟ ನಿಭಾಯಿಸಿ ತಂಡವನ್ನು ಉತ್ತಮ ಮೊತ್ತದತ್ತ ಕೊಂಡೊಯ್ದರು.ಭಾರತದ ಪರ ಉತ್ತಮ ದಾಳಿ ಸಂಘಟಿಸಿದ ಜಸ್ ಪ್ರೀತ್ ಬುಮ್ರಾ, ಯಜುರ್ವೆಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಕಬಳಿಸಿದರು.

ಸಂಕ್ಷಿಪ್ತ ಸ್ಕೋರ್

ಪಾಕಿಸ್ತಾನ 50 ಓವರ್ 7 ವಿಕೆಟ್​ಗೆ 237 (ಮಲಿಕ್ 78, ಸರ್ಫರಾಜ್ 44, ಜಮಾನ್ 31, ಆಸೀಫ್ 30, ಬುಮ್ರಾ 29/2, ಚಾಹಲ್ 46/2, ಕುಲದೀಪ್ 41/2).
ಭಾರತ 39.3 ಓವರ್ 1 ವಿಕೆಟ್ 237 (ರೋಹಿತ್ ಅಜೇಯ 111, ಧವನ್ 114, ರಾಯುಡು ಅಜೇಯ 12).
ಪಂದ್ಯಶ್ರೇಷ್ಠ: ಶಿಖರ್ ಧವನ್

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search