• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರನ್ನು ಮಾಹಿತಿ, ತಂತ್ರಜ್ಞಾನದ ಪರ್ಯಾಯ ನೆಲೆಯನ್ನಾಗಿ ಮಾಡಲು ನಳಿನ್ ಮನವಿ.

TNN Correspondent Posted On July 27, 2017
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲು ಅವರು ಭಾರತದ ಸನ್ಮಾನ್ಯ ಕಾನೂನು ರಾಜ್ಯ ಸಚಿವ ಪಿ ಪಿ ಚೌಧರಿಯವರನ್ನು ಭೇಟಿಯಾಗಿ ಮಂಗಳೂರನ್ನು ಮಾಹಿತಿ ತಂತ್ರಜ್ಞಾನದ ಹಬ್ ಆಗಿ ಮಾಡಲು ಮನವಿ ಸಲ್ಲಿಸಿದರು. ಕೇಂದ್ರ ಸಚಿವರಿಗೆ ಮಂಗಳೂರಿನ ಬಗ್ಗೆ ಸಮಗ್ರ ಮಾಹಿತಿ, ಇಲ್ಲಿನ ಭೌಗೋಳಿಕ ಪ್ರದೇಶದ ಬಗ್ಗೆ ವಿವರ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಷ್ಟ್ರೀಯ ಮಾಹಿತಿ ಮತ್ತು ತಂತ್ರಜ್ಞಾನದ ಶಿಕ್ಷಣ ಸಂಸ್ಥೆಯನ್ನು ಮಂಗಳೂರಿನಲ್ಲಿ ಪ್ರಾರಂಭಿಸಿಲು ಒತ್ತಾಯಿಸಿದರು.

ಈಗಾಗಲೇ ಅನೇಕ ಮಾಹಿತಿ ಮತ್ತು ತಂತ್ರಜ್ಞಾನದ ದಿಗ್ಗಜ ಸಂಸ್ಥೆಗಳು ಬೆಂಗಳೂರಿನಲ್ಲಿ ಬೇರು ಬಿಟ್ಟಿದ್ದು ಇದರಿಂದ ಮಂಗಳೂರು ಸೇರಿ ಕರಾವಳಿ ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ಯುವಕ, ಯುವತಿಯರು ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ಇದರಿಂದ ರಾಜಧಾನಿಯಲ್ಲಿ ಸಹಜವಾಗಿ ಒತ್ತಡ ಬಿದ್ದಿದೆ. ಇದರ ಬದಲಾಗಿ ರಾಜ್ಯದಲ್ಲಿ ವಿಮಾನ, ರೈಲು, ರಾಷ್ಟ್ರೀಯ ಹೆದ್ದಾರಿ, ಬಂದರನ್ನು ಒಳಗೊಂಡ ಏಕೈಕ ನಗರವಾಗಿರುವ ಮಂಗಳೂರನ್ನು ಮಾಹಿತಿ, ತಂತ್ರಜ್ಞಾನದ ಪರ್ಯಾಯ ಕೇಂದ್ರವನ್ನಾಗಿ ಮಾಡಿದರೆ ಇಲ್ಲಿನ ಪ್ರತಿಭಾವಂತರಿಗೆ ಊರಿನಲ್ಲಿಯೇ ಸೇವೆ ಸಲ್ಲಿಸುವ ಅವಕಾಶ ಸಿಗುತ್ತದೆ. ಇಷ್ಟೇ ಇಲ್ಲದೆ ಮಂಗಳೂರು ಕೇಂದ್ರ ಸರಕಾರದ ಮಹೋನ್ನತ ಯೋಜನೆಯಾದ ಸ್ಮಾರ್ಟ್ ಸಿಟಿಯ ಪಟ್ಟಿಯಲ್ಲಿ ಕೂಡ ಗುರುತಿಸಿಕೊಂಡಿರುವುದರಿಂದ ಇಲ್ಲಿ ತಂತ್ರಜ್ಞಾನ ಸಂಬಂಧಿತ ಸಂಸ್ಥೆಗಳು ನೆಲೆ ಕಾಣಲು ಪೂರಕ ವ್ಯವಸ್ಥೆಗಳನ್ನು ರಾಜ್ಯ ಮತ್ತು ಕೇಂದ್ರದ ಸಹಭಾಗಿತ್ವದಲ್ಲಿ ಮಾಡಲು ಸಾಧ್ಯವಿದೆ. ನಮ್ಮ ಕೇಂದ್ರದ ಯೋಜನೆಯಾದ ಸ್ಟಾರ್ಟ್ ಅಪ್ ಯೋಜನೆ ಉತ್ತಮ ಗತಿಯಲ್ಲಿ ಸಾಗುತ್ತಿದ್ದು ಅದಕ್ಕೆ ಮಂಗಳೂರಿನಲ್ಲಿ ಆಶಾದಾಯಕ ಪ್ರಗತಿ ಕಾಣಿಸುತ್ತಿದೆ. ಅಷ್ಟೇ ಅಲ್ಲದೆ ಇಂತಹ ತಂತ್ರಜ್ಞಾನ ಸಂಬಂಧಿತ ಕೈಗಾರಿಕೆಗಳು ಬಂದರೆ ಅದರಿಂದ ಪರಿಸರ ನಾಶ ಕೂಡ ಆಗುವುದಿಲ್ಲ ಮತ್ತು ಇಲ್ಲಿನ ಪರಿಸರ ಸೂಕ್ಷ್ಮ ಪ್ರಭೇದಗಳಿಗೂ ಹಾನಿಯಾಗುವುದಿಲ್ಲ ಎಂದು ಕಟೀಲ್ ಅವರು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಈಗಾಗಲೇ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಂಗಳೂರು ವಿಶ್ವಮಟ್ಟದಲ್ಲಿ ತನ್ನ ಸ್ಥಾನವನ್ನು ಗುರುತಿಸಿಕೊಂಡಿದೆ. ಅದಕ್ಕೆ ಕಾರಣ ಇಲ್ಲಿನ ಜನರ ದೂರದೃಷ್ಟಿ ಮತ್ತು ಅಗಾಧ ಪರಿಶ್ರಮ. ಹಾಗಿರುವಾಗ ಇನ್ನು ಮುಂದಿನ ಜನಾಂಗ ಮಾಹಿತಿ, ತಂತ್ರಜ್ಞಾನದಲ್ಲಿ ಭವಿಷ್ಯ ಹುಡುಕುವ ಕೆಲಸಕ್ಕೆ ಮುಂದಾಗುವಾಗ ಕೇಂದ್ರ ಸರಕಾರದ ಇದರ ಅಗತ್ಯತೆಯನ್ನು ಮನಗಂಡು ಸಕಲ ಸೌಲಭ್ಯವನ್ನು ಮಂಗಳೂರಿಗೆ ನೀಡುವ ಕೆಲಸ ನಡೆಯಬೇಕಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ವಿವರವಾಗಿ ಕೇಂದ್ರ ಸಚಿವರಿಗೆ ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇವಲ ಬೆಂಗಳೂರಿನ ಮೇಲೆನೆ ತಂತ್ರಜ್ಞಾನ ದಿಗ್ಗಜರು ಒತ್ತಡ ಹಾಕುವುದಕ್ಕಿಂತ ಟೈಯರ್-2 ಸಿಟಿಯಾಗಿರುವ ಮಂಗಳೂರನ್ನು ಪರಿಗಣಿಸಬೇಕು. ಅದಕ್ಕೆ ತಳಹದಿಯಾಗಿ ನ್ಯಾಶನಲ್ ಇನ್ಸಟಿಟ್ಯೂಟ್ ಫಾರ್ ಇಲೆಕ್ಟ್ರಾನಿಕ್ ಎಂಡ್ ಐಟಿ ಅನ್ನು ಆದಷ್ಟು ಶೀಘ್ರವಾಗಿ ಸ್ಥಾಪಿಸಲು ಮುಂದಾಗಬೇಕು ಎಂದು ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದರು.

ನಳಿನ್ ಕುಮಾರ್ ಕಟೀಲ್ ಅವರ ಈ ಪ್ರಯತ್ನ ಶೀಘ್ರದಲ್ಲಿ ಫಲ ಕಂಡರೆ ಭವಿಷ್ಯದಲ್ಲಿ ಮಂಗಳೂರು ಮಾಹಿತಿ, ತಂತ್ರಜ್ಞಾನದ ಪರ್ಯಾಯ ಕೇಂದ್ರವಾಗಿ ಬೆಳೆದು ಬೆಂಗಳೂರಿಗೆ ಸ್ಪರ್ಧೆ ಕೊಡುವುದರಲ್ಲಿ ಆಶ್ಚರ್ಯವಿಲ್ಲ. ಹಾಗೇ ಆಗಲಿ ಎನ್ನುವುದು ಅಸಂಖ್ಯಾತ ಪ್ರತಿಭಾವಂತರ ಆಶಯ

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search