• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್…!!!

TNN Correspondent Posted On October 4, 2018
0


0
Shares
  • Share On Facebook
  • Tweet It

ನವದೆಹಲಿ: ತೈಲ ಬೆಲೆ ಏರಿಕೆ ಆಗುತ್ತಿದ್ದಂತೆ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಸುಂಕ ಕಡಿತದಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ 2.50 ರೂ. ಇಳಿಕೆಯಾಗಲಿದೆ.

ತೈಲ ಬೆಲೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಹಣಕಾಸು ಇಲಾಖೆಯ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಪರಿಣಾಮ ಸರ್ಕಾರಕ್ಕೆ 10,500 ಕೋಟಿ ರೂ. ಹೊರೆಯಾಗುತ್ತದೆ. ಕೇಂದ್ರ ಸರ್ಕಾರ ಕಡಿಮೆ ಮಾಡಿದಂತೆ ರಾಜ್ಯ ಸರ್ಕಾರಗಳು ವ್ಯಾಟ್ ತೆರಿಗೆಯನ್ನು ಕಡಿತಗೊಳಿಸಲಿ ಎಂದು ಸಲಹೆ ನೀಡಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ ತೈಲ 76 ಡಾಲರ್ ನಲ್ಲಿ ಮಾರಾಟವಾಗುತ್ತಿದೆ. ಇದರ ಜೊತೆಯಲ್ಲಿ ಅಮೆರಿಕ ಚೀನಾ ವಾಣಿಜ್ಯ ಸಮರ, ಇರಾನ್ ನಿಂದ ತೈಲ ಖರೀದಿಗೆ ನಿರ್ಬಂಧ ಹೇರಿದ ಪರಿಣಾಮ ಡಾಲರ್ ಮುಂದೆ ರೂಪಾಯಿ ದುರ್ಬಲವಾಗುತ್ತಿದ್ದು 73 ರೂ. ಗಡಿ ದಾಟಿದೆ. ಹೀಗಾಗಿ ತೈಲ ಬೆಲೆ ಭಾರತದಲ್ಲಿ ಏರಿಕೆಯಾಗುತ್ತಿದೆ.

ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?

2014 ರಿಂದ 2016 ರ ಅವಧಿಯಲ್ಲಿ ಕೇಂದ್ರ ಸರ್ಕಾರ 9 ಬಾರಿ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಈ ಅವಧಿಯಲ್ಲಿ ಪೆಟ್ರೋಲ್ ಮೇಲೆ 11.77 ರೂ., ಡೀಸೆಲ್ ಮೇಲೆ 13.47 ರೂ. ನಂತೆ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಇದರಿಂದಾಗಿ 2014-15 ರಲ್ಲಿ ಬೊಕ್ಕಸಕ್ಕೆ 99 ಕೋಟಿ ರೂ. ಬಂದಿದ್ದರೆ, 2016-17 ನೇ ಅವಧಿಯಲ್ಲಿ 2.42 ಲಕ್ಷ ಕೋಟಿ ರೂ. ಆದಾಯ ಬಂದಿತ್ತು.

ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

ಪ್ರತಿ ಲೀಟರ್ ಪೆಟ್ರೋಲ್ ಮೇಲೆ 9.48 ರೂ. ನಿಂದ 21.48 ರೂ., ಡೀಸೆಲ್ ಮೇಲೆ 3.56 ರೂ.ನಿಂದ 17.33 ರೂ. ಅಬಕಾರಿ ಸುಂಕವನ್ನು ಏರಿಕೆ ಮಾಡಿತ್ತು. 2016 ರ ವರೆಗೆ ಈ ಏರಿಕೆ ಮಾಡಿದ್ದು, 2017 ರ ಅಕ್ಟೋಬರ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂ. ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಅಬಕಾರಿ ಸುಂಕದಿಂದ ಸಂಗ್ರಹವಾದ ಹಣವನ್ನು ಜನರ ಕಲ್ಯಾಣ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಈ ಹಿಂದೆ ತಿಳಿಸಿತ್ತು.

0
Shares
  • Share On Facebook
  • Tweet It


#PMMODI


Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
You may also like
ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ…!!!!!!
November 3, 2018
ಮತ್ತೆ ಮೇಲಕ್ಕೇರಿದ ಮೋದಿ ಸರ್ಕಾರ….!!! ಹೇಗೆ..?
November 1, 2018
ಮುಂದಿನ ಲೋಕಸಭೆಯಲ್ಲಿ ಎಂಎಸ್ ಧೋನಿ , ಗಂಭೀರ್ ಬಿ.ಜೆ.ಪಿ ಯಿಂದ ಸ್ಪರ್ಧೆ…!!!
October 23, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search