• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುಂಡಾಟಿಕೆ ನಡೆಸಿದವರ ವಿರುದ್ಧ ಸಮರ ಸಾರಿದ ಎಸ್ಪಿ…, ಸ್ವ ಪ್ರತಿಷ್ಠೆಯ ರಾಜಕೀಯದಾಟಕ್ಕೆ ಬಲಿಯಾಗ್ತಾರಾ…!?

udupi reporter Posted On October 5, 2018
0


0
Shares
  • Share On Facebook
  • Tweet It

 

ಉಡುಪಿ-ಖಾಕಿ ಖದರ್ ನೊಳಗೆ ನಗುಮೊಗ ಅಡಗಿರುವ ಅಧಿಕಾರಿ ಇವರು. ಬಾಲ ಬಿಚ್ಚಿದ್ರೆ ಮಾತ್ರ ರೌದ್ರಾತಾರ ತಳೆದು ಬಿಡುವ ಖಡಕ್ ಪೊಲೀಸ್. ಉಡುಪಿಯ ರಾಷ್ಟ್ರೀಯ ಪಕ್ಷಗಳ ಮುಖಂಡರು ಸದ್ಯ ಇವರ ಹಿಂದೆ ಬಿದ್ದಿದ್ದಾರೆ. ಕೈ ಮತ್ತು ಕಮಲ ಪಡೆಯ ಒಣ ಪ್ರತಿಷ್ಠೆಗೆ ಉಡುಪಿ ಎಸ್ಪಿಯೇ ಸಮರಾಸ್ತ್ರವಾಗಿದ್ದಾರೆ. ಪಕ್ಷಗಳ ಪ್ರತಿಷ್ಠೆಗೆ ಕಾನೂನು ಕಾಪಾಡುವ ಅಧಿಕಾರಿಯ ತಲೆದಂಡವಾಗುತ್ತಾ ಅನ್ನೋದು ಸದ್ಯ ಕೃಷ್ಣನಾಡಿನಲ್ಲಿ ಬಿಸಿ ಬಿಸಿ ಚರ್ಚೆ ಗ್ರಾಸವಾಗಿದೆ.

 

ಹೌದು..ಕಳೆದ ಕೆಲವು ದಿನಗಳ ಹಿಂದೆಯಷ್ಟೇ ರಾಷ್ಟ್ರೀಯ ಪಕ್ಷ ಕಾಂಗ್ರೇಸ್ ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ ಭಾರತ್ ಬಂದ್ ಗೆ ಕರೆ ನೀಡಿತ್ತು. ಉಡುಪಿಯಲ್ಲಿ ಕೂಡ ಬಂದ್ ಬಿಸಿ ಜೋರಾಗಿತ್ತು. ಆರಂಭದಲ್ಲಿ ಎಲ್ಲಾ ಚೆನ್ನಾಗಿಯೇ ಇತ್ತು, ಆದ್ರೆ ಬಿಸಿಲೇರುತ್ತಿದ್ದಂತೆ ಉಡುಪಿ ರಣಾಂಗಣವಾಯ್ತು. ಕೈ ಪಾಳಯ ಬಂದ್ ಒತ್ತಾಯಿಸಿದ್ರೆ , ಕಮಲ ಪಡೆ ಅಂಗಡಿ ಮುಗಟ್ಟು ಒಪನ್ ಮಾಡಿಸುವ ಪಣತೊಟ್ಟಿತು. ಕೈ ಮತ್ತು ಕಮಲ ಪಡೆಯ ತಿಕ್ಕಾಟ ತಾರಕೇರಿತ್ತು. ಬಂದ್ ಗಲಾಟೆ ರಕ್ತ ಹರಿಯುವ ಮಟ್ಟಕ್ಕೆ ಬಂತು. ಎರಡು ಪಕ್ಷಗಳೂ ತಾವೇನೂ ಕಮ್ಮಿಇಲ್ಲ ಅನ್ನುವಂತೆ ನಗರ ತುಂಬ ಮೇರೆದಾಡಿದ್ರು ಅಷ್ಟೇ ಸಾಕಾಗದೆ ಎಸ್ಪಿ ಅಪೀಸ್ ಮುಂದೆ ಪರಸ್ಪರ ಬಡಿದಾಟ ಆರಂಭಿಸಿದ್ರು .ಪೊಲೀಸ್ ಮಧ್ಯ ಪ್ರವೇಶ ಕ್ಕೂ ಜಗ್ಗದೇ ಹೋದಾಗ ಖುದ್ದಾಗಿ ಉಡುಪಿ ಎಸ್ಪಿ ಲಾಠಿ ಕೈಗೆತ್ತಿಕೊಂಡರು ಲಾಠಿ ಬೀಸಿದ್ರು.

ಎರಡು ಪಕ್ಷದ ಪುಡಾರಿಗಳು ಲಾಠಿ ರುಚಿ ತಿಂದು ಆಸ್ಪತ್ರೆ ಸೇರಿದ್ದು ಹಳೆಯ ಕತೆ. ಆದ್ರೆ ಲಾಠಿ ರುಚಿ ನೋಡಿದ ಮಂದಿಯಂತೂ ಇನ್ನೂ ಒಳಗೊಳಗೆ ತಣ್ಣನೆ ಕುದಿಯುತ್ತಿದ್ದಾರೆ. ಎಸ್ಪಿ ಲಕ್ಷಣ್ ನಿಂಬರಗಿ ಎತ್ತಂಗಡಿ ಮಾಡ್ಲೇ ಬೇಕು ಅಂತಾ ಕಾಂಗ್ರೇಸ್ ಯುವ ನಾಯಕರು ಒತ್ತಾಯಿಸುತ್ತಿದ್ದಾರೆ. ಗದ್ದುಗೆ ಹಿಡಿದ ಹಿರಿಯ ನಾಯಕರು ನಮ್ಮ ಬೆಂಬಲ ನಿಲುತ್ತಿಲ್ಲ ಕಾರ್ಯಕರ್ತರಿಗೆ ಬೆಂಬಲ ಇಲ್ಲ ಅಂತಾ ಆಕ್ರೋಶ ಹಾಕುತ್ತಿದ್ದಾರೆ.ಬಂದ್ ಗಲಾಟೆಯ ದಿನ ಲಾಠಿ ಏಟಿನ ರುಚಿ ಕಂಡ ಕಾಂಗ್ರೇಸ್ ಪಡೆ ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಗಾಂಧಿ ಜಯಂತಿಯ ದಿನ ಕಾಂಗ್ರೇಸ್ ಭವನದಲ್ಲಿ ಉಸ್ತುವಾರಿ ಸಚಿವೆ ಜಯಮಾಲಾಗೆ ಮುತ್ತಿಗೆ ಹಾಕಿ ಮುಜುಗರ ಉಂಟುಮಾಡಿದ್ದಾರೆ. ಕಾರ್ಯಕರ್ತರ ಆಕ್ರೋಶ ತಣ್ಣಗೆ ಮಾಡಲಾಗದೆ ಕೋಪಗೊಂಡ ಗ್ಲಾಮರ್ ಮಿನಿಸ್ಟರ್ ಕಾರು ಹತ್ತಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.ಸದ್ಯ ಉರಿಯುವ ಬೆಂಕಿಗೆ ತುಪ್ಪ ಹಾಕಿ ಜಿಲ್ಲೆಯ ಹಿರಿಯ ಕಾಂಗ್ರೇಸ್ ನಾಯಕರು ಮಜಾ ನೋಡುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ. ಲಾಠಿ ಏಟು ತಿಂದ ಬಿಜೆಪಿ ಮಂದಿ ಮಾತ್ರ ಮೌನವಾಗಿದ್ದಾರೆ. ಪಕ್ಷದ ಕಾರ್ಯಕತರು ಲಾಠಿ ಏಟು ತಿಂದ್ರು ನಾಯಕರೂ ಎಸ್ಪಿ ಪರ ಬ್ಯಾಟಿಂಗ್ ಆರಂಭಿಸಿದ್ದಾರೆ. ಈ ಮೂಲಕ ರಾಜಕೀಯ ಲಾಭ ಪಡೆಯುವ ಲೆಕ್ಕಾಚಾರದಲ್ಲಿದ್ದಾರೆ. ರಾಜಕೀಯ ಕಾರಣಕ್ಕೆ ಪೊಲೀಸ್ ಅಧಿಕಾರಿ ವರ್ಗಾವಣೆ ಮಾಡಿದ್ರೆ ಸಹಿಸುವುದಿಲ್ಲ ಅಂತಾ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ

ಅನಿವಾರ್ಯವಾಗಿ ಲಾಠಿ ಕೈಗೆತ್ತಿಕೊಂಡು ಕಾನೂನು ಸುವ್ಯವಸ್ಥೆ ಕಾಪಾಡಿದ ಎಸ್ಪಿ ಲಕ್ಷ್ಮಣ ನಿಂಬರಗಿ ನಿಗದಿತ ಅವಧಿ ವರೆಗೆ ಉಡುಪಿಯಲ್ಲಿರ್ತಾರಾ… ಅನೈತಿಕ ದಂಧೆಕೋರರ ವಿರುದ್ಧ, ಪುಂಡಾಟಿಕೆ ನಡೆಸಿದವರ ವಿರುದ್ಧ ಸಮರ ಸಾರಿದ ಅಧಿಕಾರಿ ಸ್ವ ಪ್ರತಿಷ್ಠೆಯ ರಾಜಕೀಯದಾಟಕ್ಕೆ ಬಲಿಯಾಗ್ತಾರಾ? ಅನ್ನುವುದು ಸದ್ಯ ಜನಸಾಮಾನ್ಯರ ನ್ನು ಬಿಡದೆ ಕಾಡುತ್ತಿರುವ ಯಕ್ಷ ಪ್ರಶ್ನೆ.

0
Shares
  • Share On Facebook
  • Tweet It


#udupicitypolice


Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
udupi reporter June 16, 2026
Najlepsze bonusy i sloty w polskim kasynie online
udupi reporter May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search