• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಬರಿಮಲೆ ತೀರ್ಪಿನ ವಿರುದ್ಧ ಅ.9ರಂದು ಮಂಗಳೂರಿನಲ್ಲಿ ಬೃಹತ್ ಸಭೆ….!

TNN Correspondent Posted On October 6, 2018
0


0
Shares
  • Share On Facebook
  • Tweet It

ಕದ್ರಿ ಮೈದಾನದಲ್ಲಿ ಸೇರಲಿದ್ದಾರೆ ಸಹಸ್ರಾರು ಮಂದಿ..!!!

ಮಂಗಳೂರು: ಶಬರಿಮಲೆ ಪ್ರವೇಶ ಕುರಿತಂತೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಸುಪ್ರಿಂಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಬೃಹತ್ ಹೋರಾಟ ನಡೆಸಲು ಮಂಗಳೂರಿನ ಅಯ್ಯಪ್ಪ ಸೇವಾ ಸಮಿತಿ ನಿರ್ಧರಿಸಿದೆ.

ಹೋರಾಟದ ಪೂರ್ವಭಾವಿ ಸಭೆ ಶನಿವಾರ ನಗರದ ಸಂಘನಿಕೇತನದಲ್ಲಿ ನಡೆದಿದ್ದು, ಮೊದಲ ಹಂತವಾಗಿ ಅ.೯ರಂದು ಸಂಜೆ ೫ ಗಂಟೆಗೆ ಕದ್ರಿ ಮೈದಾನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರು ಸೇರಿದಂತೆ ಹಿಂದು ಬಾಂಧವರು ಒಟ್ಟು ಸೇರಿ ಹೋರಾಟದ ರೂಪುರೇಷೆಯ ಸಭೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಭಜನೆಯ ಮೂಲಕ ಶ್ರೀ ಕ್ಷೇತ್ರ ಕದ್ರಿಗೆ ತೆರಳಿ ಪ್ರಾರ್ಥನೆ ಸಲ್ಲಿಸುವ ನಿರ್ಧಾರಕ್ಕೆ ಸಮಿತಿ ಬಂದಿದೆ. ಸಭೆಯಲ್ಲಿ ಪಾಲ್ಗೊಂಡ ವಿವಿಧೆಡೆಯ ಅಯ್ಯಪ್ಪಸ್ವಾಮಿ ಭಕ್ತರು, ಸಂಘಟನೆಗಳ ಪ್ರಮುಖರು ಹಾಗೂ ಹಿಂದು ಬಾಂಧವರು ತಮ್ಮ ತಮ್ಮ ವ್ಯಾಪ್ತಿಯ ಪುಣ್ಯ ಕ್ಷೇತ್ರಗಳಲ್ಲಿ ಪೂಜೆ ಸಲ್ಲಿಸಿ ಆ ಬಳಿಕ ೫ ಗಂಟೆಗೆ ಸರಿಯಾಗಿ ಕದ್ರಿ ಮೈದಾನದಲ್ಲಿ ಸೇರುವಂತೆ ಸೂಚಿಸಲಾಗಿದೆ. ಪ್ರತಿಯೊಬ್ಬರೂ ತಮ್ಮ ತಮ್ಮ ವ್ಯಾಪ್ತಿಯಿಂದ ಸುಮಾರು ೪೦೦-೫೦೦ ಮಂದಿಯನ್ನು ಕರೆತರುವ ಭರವಸೆ ನೀಡಿದ್ದು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಮರು ಪರಿಶೀಲನೆಗೆ ಅರ್ಜಿ ಸಲ್ಲಿಸಲೇಬೇಕು..
ಸಭೆಯನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪ್ರಕಾಶ್ ಪಿ.ಎಸ್., ಇಡೀ ದೇಶವನ್ನು ಒಗ್ಗೂಡಿಸಿದ ಶಕ್ತಿಯ ಕ್ಷೇತ್ರವೆಂದರೆ ಅದು ಶಬರಿಮಲೆ. ಅತ್ಯಂತ ಶ್ರದ್ಧಾ ಭಕ್ತಿಯಿಂದ ಕೋಟ್ಯಂತರ ಮಂದಿ ಈ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಆದರೆ ಪರಂಪರೆಯಿಂದ ಬಂದ ಜನತೆಯ ನಂಬಿಕೆಗೆ ಧಕ್ಕೆ ತರುವ  ಕೆಲಸ ಸುಪ್ರಿಂ ಕೋರ್ಟ್ ತೀರ್ಪಿನ ಮೂಲಕ ಆಗಿದೆ. ಕೇರಳ ಸರಕಾರ ತೀರ್ಪಿನ ಮರು ಪರಿಶೀಲನೆಗೆ ಸುಪ್ರಿಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲೇಬೇಕು. ಭಕ್ತರ ಧಾರ್ಮಿಕ ಭಾವನೆಗೆ ಮೊದಲ ಅವಕಾಶ ನೀಡಬೇಕು. ಅಷ್ಟರವರೆಗೆ ಹೋರಾಟ ನಿಲ್ಲಬಾರದು ಎಂದರು.
ಹಿಂದು ಸಮಾಜ ಮಹಿಳಾ ವಿರೋಧಿಯಲ್ಲ, ಶಬರಿಮಲೆಗೆ ಮಹಿಳೆಯರಿಗೆ ನಿಷೇಧವನ್ನೂ ಹೇರಿಲ್ಲ. ೧೦ನೇ ವಯಸ್ಸಿನೊಳಗಿನ ಮತ್ತು ೫೦ ವರ್ಷ ಮೇಲ್ಪಟ್ಟ ಮಹಿಳೆಯರು ಶಬರಿ ಮಲೆಗೆ ಬರಲು ಹಿಂದಿನಿಂದಲೂ ಅವಕಾಶವಿದೆ. ಆದರೆ ಶಬರಿಮಲೆ ಏನೆಂದೇ ಗೊತ್ತಿರದ ಮಂದಿ ಕೋರ್ಟ್ ಮೆಟ್ಟಿಲೇರುವ ಮೂಲಕ ಪರಂಪರೆಗೆ ಪೆಟ್ಟು ನೀಡುವ ಕೆಲಸ ಮಾಡಿದ್ದಾರೆ. ಹಿಂದು ಸಮಾಜವನ್ನು ಮುನ್ನಡೆಸಬೇಕಾದ ಸಂತ ಶ್ರೇಷ್ಟರ ಧಾರ್ಮಿಕ ವಿಚಾರದ ಕುರಿತು ನಿರ್ಧಾರ ತೆಗೆದುಕೊಳ್ಳುವಂತಾಗಬೇಕು ಎಂದವರು ಹೇಳಿದರು.

ಸಂಸದ ನಳಿನ್ ಕುಮಾರ್ ಕಟೀಲ್, ವಿಶ್ವಹಿಂದು ಪರಿಷತ್ ದಕ್ಷಿಣ ಪ್ರಾಂತ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ಆರೆಸ್ಸೆಸ್ ಮಹಾನಗರ ಸಂಘಚಾಲಕ್ ಸುನಿಲ್ ಆಚಾರ್, ಬಜರಂಗದಳ ಪ್ರಾಂತ ಸಂಚಾಲಕ ಶರ್‌ಪಂಪ್‌ವೆಲ್ ಮತ್ತಿತರರು ಉಪಸ್ಥಿತರಿದ್ದರು.

ಹೀಗಿರಲಿದೆ ಅ.೯ರ ಬೃಹತ್ ಸಭೆ
-ಭಜನೆಗಾಗಿ ತಾಳದೊಂದಿಗೆ ಬರಲಿದ್ದಾರೆ ಭಕ್ತರು
-ಕೇಸರಿ ಶಾಲಿನೊಂದಿಗೆ ಸಹಸ್ರಾರು ಸಂಖ್ಯೆಯಲಿ ಸೇರುವ ನಿರೀಕ್ಷೆ
-ಬೃಹತ್ ಸಬೆಯ ಬಳಿಕ ಭಜನೆಯೊಂದಿಗೆ ಕದ್ರಿಗೆ ತೆರಳಿ ಪೂಜೆ ಸಲ್ಲಿಕೆ
-ರಾಜ್ಯಪಾಲರು, ಕೇಂದ್ರಕ್ಕೆ ಮನವಿ ಸಲ್ಲಿಕೆ
-ಹೋರಾಟಕ್ಕೆ ಹಿರಿಯರನ್ನೊಳಗೊಂಡ ಸೂಕ್ತ ಸಮಿತಿ ರಚನೆ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ರಾಜೇಶ್ -ಸಂಚಾಲಕರು ಅಯ್ಯಪ್ಪ ಸೇವಾ ಸಮಿತಿ ದಕ . Mobile- 9964142283
0
Shares
  • Share On Facebook
  • Tweet It


#sanghnikethanamangalore #rss


Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search