• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭೂಲೋಕದ ಮೇಲಿನ ಸ್ವರ್ಗ ಅದು…!!!

udupi reporter Posted On October 6, 2018
0


0
Shares
  • Share On Facebook
  • Tweet It

ಉಡುಪಿ ಮಲ್ಪೆ-.. ದ ನಾಲ್ಕು ತಿಂಗಳಿಂದ ಆ ಸ್ವರ್ಗಕ್ಕೆ ಬಾಗಿಲು ಹಾಕಲಾಗಿತ್ತು. ಸ್ವರ್ಗಕ್ಕೆ ಹೋಗಲಾಗದೆ, ಜನರೆಲ್ಲಾ ಭೂಮಿ ಮೇಲೆಯೇ ಅಲೆದಾಡುತ್ತಿದ್ದರು. ಇದೀಗ ಸ್ವರ್ಗದ ಬಾಗಿಲು ತೆರೆದಿದ್ದು ಜನ ಹಾಡುತ್ತಾ.. ಕುಣಿಯುತ್ತಾ ಮಸ್ತ್ ಮಜಾ ಮಾಡುತ್ತಾ ಸುಂದರ ಸ್ವರ್ಗಕ್ಕೆ ಟ್ರಿಪ್ ಶುರು ಮಾಡಿದ್ದಾರೆ

ಕಣ್ಣು ಹಾಯಿಸಿದಲ್ಲೆಲ್ಲಾ ನೀಲಿ ನೀರು.., ರಭಸವಾಗಿ ಬೀಸೋ ತಂಗಾಳಿ.., ಆಕಾಶದಲ್ಲಿ ಹಾರಾಡೋ ಅನುಭವ..ಈ ಖುಷಿ ಒಟ್ಟಿಗೆ ಒಂದೇ ಕಡೆ ಸಿಗಬೇಕಾದ್ರೆ ನೀವು ಉಡುಪಿಗೆ ಬರಬೇಕು. ಮಲ್ಪೆಗೆ ಬಂದು ಸೈಂಟ್ ಮೇರೀಸ್ ದ್ವೀಪಕ್ಕೆ ಹೋಗುವ ಬೋಟ್ ಹತ್ತಬೇಕು. ಬೋಟ್ ಹತ್ತುತ್ತಿದ್ದಂತೆ ಕಿವಿಗೆ ಡೀಜೆ ಮ್ಯೂಸಿಕ್ ಅಪ್ಪಳಿಸುತ್ತದೆ. ಕೆಳಗೆ ಸಮುದ್ರ.. ಮೇಲೆ ಆಗಸ ಕಿವಿಗಪ್ಪಳಿಸೋ ಹಾಡು ಯಾರಿಗುಂಟು ಯಾರಿಗಿಲ್ಲ ಅಷ್ಟು ಎಂಜಾಯ್ ಮಾಡಬಹುದು.

ಮಳೆಗಾಲದಲ್ಲಿ ಮೂರೂವರೆ ತಿಂಗಳು ಸಂಪೂರ್ಣ ಬಂದ್ ಆಗಿದ್ದ ಉಡುಪಿಯ ಸೈಂಟ್ ಮೇರೀಸ್ ಪ್ರವಾಸ ಇದೀಗ ಮತ್ತೆ ಆರಂಭವಾಗಿದೆ. ಬೆಳಗ್ಗೆ 10 ಗಂಟೆಯಿಂದ ಟ್ರಿಪ್ ಶುರುವಾಗುತ್ತದೆ. ಸಂಜೆಯ ತನಕ ನಾಲ್ಕು ಸುತ್ತ ನೀರು ನಡುವೆ ಇರುವ ಭೂಲೋಕದ ಸ್ವರ್ಗಕ್ಕೆ ಹೋಗಿ ಎಂಜಾಯ್ ಮಾಡಬಹುದು. ಮಲ್ಪೆ ಬೋಟ್ ಪಾಯಿಂಟ್ ನಿಂದ ಆರೂವರೆ ಕಿಲೋಮೀಟರ್ ದೂರವಿರುವ ಸೈಂಟ್ ಮೇರೀಸ್ ದ್ವೀಪದ ಕೂಗಳತೆ ದೂರದಲ್ಲಿ ದೊಡ್ಡ ಬೋಟನ್ನು ನಿಲ್ಲಿಸಲಾಗುತ್ತದೆ. ಸಮುದ್ರದ ಮಧ್ಯೆಯೇ ಮತ್ತೊಂದು ಚಿಕ್ಕ ಬೋಟ್‍ಗೆ ಎಲ್ಲಾ ಪ್ರವಾಸಿಗರನ್ನು ಶಿಫ್ಟ್ ಮಾಡಲಾಗುತ್ತದೆ. ಆ ಬೋಟ್ ದ್ವೀಪ ತಲುಪುತ್ತದೆ. ದೊಡ್ಡ ಬೋಟ್ ಮಲ್ಪೆಗೆ ವಾಪಾಸ್ಸಾಗುತ್ತದೆ.

ಭಾರತವನ್ನು ಕಂಡು ಹಿಡಿದ ಕಲ್ಲಿಕೋಟೆಗೆ ಹೋಗುವ ಮೊದಲು ಸೈಂಟ್ ಮೇರೀಸ್ ದ್ವೀಪಕ್ಕೆ ಬಂದಿದ್ದ. ಇಲ್ಲಿನ ಸೌಂದರ್ಯವನ್ನು ಆತ ಬಹಳ ವರ್ಣಿಸಿದ್ದ. ಸೈಂಟ್ ಮೇರೀಸ್ ದ್ವೀಪದಲ್ಲಿ ಕಾಣಸಿಗುವ ವಿಭಿನ್ನಾಕಾರದ ಕಲ್ಲುಗಳು ಎಲ್ಲರನ್ನು ಸೆಳೆಯುತ್ತದೆ. ಕಲ್ಲಿನ ಮೇಲೆ ಅಪ್ಪಳಿಸೋ ತೆರೆಗಳನ್ನು ಅನುಭವಿಸೋದೆ ಚಂದ. ಸೂರ್ಯಾಸ್ತದ ಸಂದರ್ಭದಲ್ಲಿ ಇದ್ರಂತೂ ಇಡೀ ಸಮುದ್ರ ಬಂಗಾರದ ಬಣ್ಣದಲ್ಲಿ ಹೊಳೆಯುತ್ತದೆ. ಈ ಬಾರಿ ಸೇಫ್ಟಿ ದೃಷ್ಟಿಯಿಂದ ದೊಡ್ಡ ಬೋಟ್, ಅದರಲ್ಲೊಂದು ವಾಶ್ ರೂಮನ್ನೂ ನಿರ್ಮಾಣ ಮಾಡಲಾಗಿದೆ. ದೇಶ ವಿದೇಶದ ಪ್ರವಾಸಿಗರಿಗೆ ಇದು ಬಹಳ ಇಷ್ಟವಾಗಿದೆ.

ಬೋಟ್‍ನಲ್ಲಿ ಲೈಫ್ ಜಾಕೆಟ್- ಕುಡಿಯುವ ನೀರಿನ ವ್ಯವಸ್ಥೆ ಎಲ್ಲವನ್ನೂ ಮಾಡಲಾಗಿದೆ. 250 ರುಪಾಯಿ ಟಿಕೆಟ್‍ನಲ್ಲಿ ಸೈಂಟ್ ಮೇರೀಸ್ ಕಣ್ತುಂಬಿಕೊಳ್ಳಬಹುದು. ಮಕ್ಕಳಿಗೆ 150 ರುಪಾಯಿ ಟಿಕೆಟ್ ನಿಗದಿ ಮಾಡಲಾಗಿದೆ.

ಮಳೆಗಾಲ ಆರಂಭವಾಗುವವರೆಗೆ ಸೈಂಟ್ ಮೇರೀಸ್ ಎಂಬ ಭೂಲೋಕದ ಮೇಲಿನ ಸ್ವರ್ಗ ಓಪನ್ ಇರುತ್ತದೆ. ಅರ್ಧಗಂಟೆ ದೊಡ್ಡ ಬೋಟ್‍ನಲ್ಲಿ ಪಯಣ, ಅಲ್ಲಿಂದ ಸಣ್ಣ ಬೋಟ್ ಮೂಲಕ ದ್ವೀಪಕ್ಕೆ ಶಿಫ್ಟ್, ಅಲ್ಲಿ ಬೇಕಾದಷ್ಟು ಸುತ್ತಾಟ, ಮತ್ತೆ ಎರಡು ಬೋಟ್‍ಗಳಲ್ಲಿ ಮಲ್ಪೆಗೆ ವಾಪಾಸ್. ಇಷ್ಟಕ್ಕೆ ತಗಲುವ ವೆಚ್ಚ 250 ರೂಪಾಯಿ ಮಾತ್ರ. ತಮಗೆ ಬೇಕಾದ ತಿಂಡಿ- ಊಟ ಕೊಂಡೊಯ್ದು ಫ್ಯಾಮಿಲಿ.. ಫ್ರೆಂಡ್ಸ್ .., ಲವ್ವರ್ಸ್ ಸಿಕ್ಕಾಪಟ್ಟೆ ಎಂಜಾಯ್ ಮಾಡಬಹುದು.

0
Shares
  • Share On Facebook
  • Tweet It


#malpe


Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
udupi reporter January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
udupi reporter January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search