• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ಮತ್ತಷ್ಟು ಸ್ಟ್ರೋಂಗ್…!!!

TNN Correspondent Posted On October 8, 2018
0


0
Shares
  • Share On Facebook
  • Tweet It

ನವದೆಹಲಿ: ಗಲಭೆ ಹಾಗೂ ದೊಂಬಿಯಂತಹ ಸಮಯದಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆಗೆಂದೇ ಇರುವ ಕ್ಷಿಪ್ರ ಕಾರ್ಯಪಡೆ(ಆರ್‌ಎಎಫ್) ತುಕಡಿಯನ್ನು ಮಂಗಳೂರಿನಲ್ಲಿ ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ.ಸದ್ಯ ದೇಶದಲ್ಲಿರುವ ಒಟ್ಟು 10 ಆರ್‌ಎಎಫ್ ತುಕಡಿಗಳ ಪೈಕಿ, 5 ಹೊಸ ತುಕಡಿಗಳನ್ನು ಆಯೋಜಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕಳೆದ ಜನವರಿಯಲ್ಲೇ 5 ಆರ್‌ಎಎಫ್ ಘಟಕವನ್ನು ಆರಂಭಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು. ಆದರೆ ಈಗ ಎಲ್ಲಿ ಸ್ಥಾಪನೆಯಾಗಲಿದೆ ಎನ್ನುವ ವಿವರವನ್ನು ಪ್ರಕಟಿಸಿದೆ.ಕರ್ನಾಟಕದ ಮಂಗಳೂರು, ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಉತ್ತರಪ್ರದೇಶದ ವಾರಾಣಸಿ, ರಾಜಸ್ಥಾನದ ಜೈಪುರ, ಬಿಹಾರ ಹಾಜಿಪುರ ಮತ್ತು ಹರಿಯಾಣದ ನುಹ್ ಜಿಲ್ಲೆಗಳಲ್ಲಿ ಹೊಸ ಆರ್‌ಎಎಫ್ ಘಟಕ ಪ್ರಾರಂಭವಾಗಲಿದೆ.

 

ಘಟಕ ಸ್ಥಾಪನೆ ಸಂಬಂಧ ಪಟ್ಟಂತೆ ಅಗತ್ಯವಾದ ಜಾಗ ಖರೀದಿ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಕಾರ್ಯಚರಣೆ ನಡೆಸುತ್ತಿರುವ ಆರ್‌ಎಎಫ್ ಸಿಬ್ಬಂದಿಗಳು ಶೀಘ್ರವೇ ಹೊಸ ನೆಲೆಗಳಿಗೆ ವರ್ಗಾವಣೆಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಈಗಾಗಲೇ ದೇಶದ ಹೈದರಾಬಾದ್, ಅಹಮದಾಬಾದ್, ಅಲಹಾಬಾದ್, ಮುಂಬೈ, ದೆಹಲಿ, ಆಲಿಘರ್, ಕೊಯಮತ್ತೂರ್, ಜಮ್ಶೆಡ್‍ಪುರ್, ಭೋಪಾಲ್ ಹಾಗೂ ಮೀರತ್ ಪ್ರದೇಶಗಳಲ್ಲಿ ಆರ್‌ಎಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿವೆ.

ಏನಿದು ಆರ್‌ಎಎಫ್?
ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಅರ್ಥಾತ್ ಕ್ಷಿಪ್ರ ಕಾರ್ಯಾಚರಣೆ ಪಡೆ. ದೊಂಬಿ, ಗಲಭೆ ಸೇರಿದಂತೆ ಮತ್ತಿತರ ತುರ್ತು ಪರಿಸ್ಥಿತಿಯನ್ನು ನಿರ್ವಹಿಸಲು ವಿಶೇಷ ತರಬೇತಿ ಹೊಂದಿದ ಅರೆಸೇನಾಪಡೆ ಘಟಕ. ಇಲ್ಲಿಯವರೆಗೂ ದೇಶದಲ್ಲಿ ಒಟ್ಟು 10 ಆರ್‌ಎಎಫ್ ತುಕಡಿಗಳಿವೆ. ಪ್ರತಿ ತುಕಡಿಯಲ್ಲಿ 1,000 ಸಿಬ್ಬಂದಿಗಳಿದ್ದು, ಅವರು ಅತ್ಯಾಧುನಿಕ ತಾಂತ್ರಿಕ ಉಪಕರಣಗಳು, ಮಾರಕವಲ್ಲದ ಶಸ್ತ್ರಾಸ್ತ್ರಗಳು, ಹೊಗೆಸೂಸುವ ಗ್ರೆನೇಡ್‍ಗಳು ಹಾಗೂ ಇನ್ನೂ ಮುಂತಾದ ತುರ್ತು ಶಸ್ತ್ರಾಸ್ತ್ರಗಳನ್ನು ಹೊಂದಿರುತ್ತಾರೆ.

ಮಂಗಳೂರಿನಲ್ಲಿ ಏಲ್ಲಿ?
ಮಂಗಳೂರಿನಲ್ಲಿ ಎಲ್ಲಿ ಎನ್ನುವುದು ಅಧಿಕೃತವಾಗಿ ಘೋಷಣೆಯಾಗಿಲ್ಲ. ಆರ್‌ಎಎಫ್ ಸ್ಥಾಪನೆ ಸಂಬಂಧ ಈ ಹಿಂದೆ ಬಜಪೆ ಮತ್ತು ಪರವೂರಿನಲ್ಲಿ ಜಾಗ ಗುರುತಿಸಿ 2 ವರ್ಷದ ಹಿಂದೆ ಸರ್ಕಾರ ಪ್ರಸ್ತಾವನೆ ಕಳುಹಿಸಲಾಗಿದೆ. ಈ ವಿಚಾರದ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುರೇಶ್ ಕುಮಾರ್ ಹೇಳಿದ್ದಾರೆ.

0
Shares
  • Share On Facebook
  • Tweet It


#mangalorecitypolice


Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
You may also like
ಪಾಗಲ್ ಲವ್ ಸ್ಟೋರಿ ಸಾವಿನಲ್ಲಿ ಅಂತ್ಯ…!!!
September 28, 2018
ಆಂಟಿ ತುಂಬಾ ತುಂಟಿ….!!
September 27, 2018
ವಿಶ್ವಹಿಂದೂ ಪರಿಷತ್ ಮುಖಂಡನಿಗೆ ತಲವಾರು ದಾಳಿ..! ಎ.ಜೆ. ಆಸ್ಪತ್ರೆಗೆ ಬಿ.ಜೆ.ಪಿ ಶಾಸಕರ ದಂಡು..
September 25, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search