• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ಮತ್ತಷ್ಟು ಸ್ಟ್ರೋಂಗ್…!!!

TNN Correspondent Posted On October 8, 2018
0


0
Shares
  • Share On Facebook
  • Tweet It

ನವದೆಹಲಿ: ಗಲಭೆ ಹಾಗೂ ದೊಂಬಿಯಂತಹ ಸಮಯದಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆಗೆಂದೇ ಇರುವ ಕ್ಷಿಪ್ರ ಕಾರ್ಯಪಡೆ(ಆರ್‌ಎಎಫ್) ತುಕಡಿಯನ್ನು ಮಂಗಳೂರಿನಲ್ಲಿ ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ.ಸದ್ಯ ದೇಶದಲ್ಲಿರುವ ಒಟ್ಟು 10 ಆರ್‌ಎಎಫ್ ತುಕಡಿಗಳ ಪೈಕಿ, 5 ಹೊಸ ತುಕಡಿಗಳನ್ನು ಆಯೋಜಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕಳೆದ ಜನವರಿಯಲ್ಲೇ 5 ಆರ್‌ಎಎಫ್ ಘಟಕವನ್ನು ಆರಂಭಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು. ಆದರೆ ಈಗ ಎಲ್ಲಿ ಸ್ಥಾಪನೆಯಾಗಲಿದೆ ಎನ್ನುವ ವಿವರವನ್ನು ಪ್ರಕಟಿಸಿದೆ.ಕರ್ನಾಟಕದ ಮಂಗಳೂರು, ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಉತ್ತರಪ್ರದೇಶದ ವಾರಾಣಸಿ, ರಾಜಸ್ಥಾನದ ಜೈಪುರ, ಬಿಹಾರ ಹಾಜಿಪುರ ಮತ್ತು ಹರಿಯಾಣದ ನುಹ್ ಜಿಲ್ಲೆಗಳಲ್ಲಿ ಹೊಸ ಆರ್‌ಎಎಫ್ ಘಟಕ ಪ್ರಾರಂಭವಾಗಲಿದೆ.

 

ಘಟಕ ಸ್ಥಾಪನೆ ಸಂಬಂಧ ಪಟ್ಟಂತೆ ಅಗತ್ಯವಾದ ಜಾಗ ಖರೀದಿ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಕಾರ್ಯಚರಣೆ ನಡೆಸುತ್ತಿರುವ ಆರ್‌ಎಎಫ್ ಸಿಬ್ಬಂದಿಗಳು ಶೀಘ್ರವೇ ಹೊಸ ನೆಲೆಗಳಿಗೆ ವರ್ಗಾವಣೆಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಈಗಾಗಲೇ ದೇಶದ ಹೈದರಾಬಾದ್, ಅಹಮದಾಬಾದ್, ಅಲಹಾಬಾದ್, ಮುಂಬೈ, ದೆಹಲಿ, ಆಲಿಘರ್, ಕೊಯಮತ್ತೂರ್, ಜಮ್ಶೆಡ್‍ಪುರ್, ಭೋಪಾಲ್ ಹಾಗೂ ಮೀರತ್ ಪ್ರದೇಶಗಳಲ್ಲಿ ಆರ್‌ಎಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿವೆ.

ಏನಿದು ಆರ್‌ಎಎಫ್?
ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಅರ್ಥಾತ್ ಕ್ಷಿಪ್ರ ಕಾರ್ಯಾಚರಣೆ ಪಡೆ. ದೊಂಬಿ, ಗಲಭೆ ಸೇರಿದಂತೆ ಮತ್ತಿತರ ತುರ್ತು ಪರಿಸ್ಥಿತಿಯನ್ನು ನಿರ್ವಹಿಸಲು ವಿಶೇಷ ತರಬೇತಿ ಹೊಂದಿದ ಅರೆಸೇನಾಪಡೆ ಘಟಕ. ಇಲ್ಲಿಯವರೆಗೂ ದೇಶದಲ್ಲಿ ಒಟ್ಟು 10 ಆರ್‌ಎಎಫ್ ತುಕಡಿಗಳಿವೆ. ಪ್ರತಿ ತುಕಡಿಯಲ್ಲಿ 1,000 ಸಿಬ್ಬಂದಿಗಳಿದ್ದು, ಅವರು ಅತ್ಯಾಧುನಿಕ ತಾಂತ್ರಿಕ ಉಪಕರಣಗಳು, ಮಾರಕವಲ್ಲದ ಶಸ್ತ್ರಾಸ್ತ್ರಗಳು, ಹೊಗೆಸೂಸುವ ಗ್ರೆನೇಡ್‍ಗಳು ಹಾಗೂ ಇನ್ನೂ ಮುಂತಾದ ತುರ್ತು ಶಸ್ತ್ರಾಸ್ತ್ರಗಳನ್ನು ಹೊಂದಿರುತ್ತಾರೆ.

ಮಂಗಳೂರಿನಲ್ಲಿ ಏಲ್ಲಿ?
ಮಂಗಳೂರಿನಲ್ಲಿ ಎಲ್ಲಿ ಎನ್ನುವುದು ಅಧಿಕೃತವಾಗಿ ಘೋಷಣೆಯಾಗಿಲ್ಲ. ಆರ್‌ಎಎಫ್ ಸ್ಥಾಪನೆ ಸಂಬಂಧ ಈ ಹಿಂದೆ ಬಜಪೆ ಮತ್ತು ಪರವೂರಿನಲ್ಲಿ ಜಾಗ ಗುರುತಿಸಿ 2 ವರ್ಷದ ಹಿಂದೆ ಸರ್ಕಾರ ಪ್ರಸ್ತಾವನೆ ಕಳುಹಿಸಲಾಗಿದೆ. ಈ ವಿಚಾರದ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುರೇಶ್ ಕುಮಾರ್ ಹೇಳಿದ್ದಾರೆ.

0
Shares
  • Share On Facebook
  • Tweet It


#mangalorecitypolice


Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
You may also like
ಪಾಗಲ್ ಲವ್ ಸ್ಟೋರಿ ಸಾವಿನಲ್ಲಿ ಅಂತ್ಯ…!!!
September 28, 2018
ಆಂಟಿ ತುಂಬಾ ತುಂಟಿ….!!
September 27, 2018
ವಿಶ್ವಹಿಂದೂ ಪರಿಷತ್ ಮುಖಂಡನಿಗೆ ತಲವಾರು ದಾಳಿ..! ಎ.ಜೆ. ಆಸ್ಪತ್ರೆಗೆ ಬಿ.ಜೆ.ಪಿ ಶಾಸಕರ ದಂಡು..
September 25, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search