• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತೇಜಸ್ಸು ಕಳೆದುಕೊಂಡ ತೇಜಸ್ವಿ. ವಿಶ್ವಾಸ ಮತದಲ್ಲಿ ನಿತೀಶ್ ಗೆಲುವು. ಬಿಹಾರದಲ್ಲಿನ್ನು ನಿತೀಶ್-ಮೋದಿ ಸರ್ಕಾರ್.

TNN Correspondent Posted On July 28, 2017
0


0
Shares
  • Share On Facebook
  • Tweet It

ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ಪರ ಒಟ್ಟು 131 ಶಾಸಕರು ಮತ ಚಲಾಯಿಸಿದ್ದು, ಸರ್ಕಾರದ ವಿರುದ್ಧ 108 ಶಾಸಕರು ಮತ ಚಲಾಯಿಸಿದ್ದಾರೆ.ಸರ್ಕಾರದ ಉಳಿವಿಗಾಗಿ 122 ಶಾಸಕರ ಬೆಂಬಲದ ಅಗತ್ಯವಿದ್ದು, ನಿತೀಶ್ ಕುಮಾರ್ ಸರ್ಕಾರಕ್ಕೆ 131 ಶಾಸಕರು ಬೆಂಬಲ ನೀಡಿರುವುದರಿಂದ ಸಿಎಂ ಆಗಿ ನಿತೀಶ್ ಕುಮಾರ್ ಮುಂದುವರೆಯಲಿದ್ದಾರೆ.

ಹೀಗಾಗಿ ಈ ಹಿಂದೆ ಉಪ ಮುಖ್ಯಮಂತ್ರಿಯಾಗಿದ್ದ ಆರ್ ಜೆಡಿ ಪಕ್ಷದ ತೇಜಸ್ವಿ ಯಾದವ್ ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದು, ವಿಪಕ್ಷ ನಾಯಕರಾಗಿದ್ದ ಸುಶೀಲ್ ಕುಮಾರ್ ಮೋದಿ ಉಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಆರ್ ಜೆಡಿ, ಕಾಂಗ್ರೆಸ್ ಪಕ್ಷಗಳನ್ನೊಳಗೊಂಡ ಮಹಾಘಟ್ ಬಂಧನ್ ಮೈತ್ರಿಕೂಟದಿಂದ ಹೊರ ಬಂದಿದ್ದ ನಿತೀಶ್ ಕುಮಾರ್ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಬಳಿಕ ಬಿಜೆಪಿ ಜೊತೆಗೂಡಿ ಸರ್ಕಾರ ರಚನೆ ಮಾಡಿದ್ದಾರೆ. ವಿಧಾನಸಭೆ ಹೊರಗಿದ್ದ ಜೆಡಿಯು ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಮತ್ತು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ವಿಶ್ವಾಸ ಮತ ಯಾಚನೆಗೂ ಮುನ್ನ ಬಿಹಾರ ವಿಧಾನಸಭೆಯಲ್ಲಿ ದೊಡ್ಡ ಡ್ರಾಮಾವೇ ನಡೆದಿದ್ದು, ಭಾರಿ ಕೋಲಾಹಲದ ನಡುವೆಯೇ ವಿಶ್ವಾಸ ಮತ ಯಾಚನೆಗೆ ನಿರ್ಣಯ ಮಂಡಿಸಲಾಯಿತು. ಇದಕ್ಕೂ ಮೊದಲು ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲು ಮುಂದಾದಾಗ ಆರ್ ಜೆಡಿ ಸದಸ್ಯರು ಭಾರಿ ಕೋಲಾಹಲವೆಬ್ಬಿಸಿದರು. ಇದರ ನಡುವೆಯೂ ಮಾತನಾಡಿದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು, ಮೊದಲಿಗೆ ಆರ್ ಜೆಡಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅವರ ಕಾರ್ಯಗಳಿಂದಾಗಿಯೇ ನಾನು ಇಂದು ಈ ಸ್ಥಾನದಲ್ಲಿ ನಿಂತಿದ್ದೇನೆ ಎಂದು ಹೇಳಿದರು.

ಇದೇ ವೇಳೆ ತೇಜಸ್ವಿಯಾದವ್ ವಿರುದ್ಧ ಕಿಡಿಕಾರಿದ ಸುಶೀಲ್ ಕುಮಾರ್ ಮೋದಿ ಅವರು, ಬಿಹಾರದ ಜನತೆ ತಮ್ಮ ಜನಾದೇಶ ನೀಡಿರುವುದು. ಉತ್ತಮ ಆಡಳಿತ ನೀಡಲಿ ಎಂದು. ಆದರೆ ಕೆಲವರು ಜನಾದೇಶವನ್ನು ತಪ್ಪು ತಪ್ಪಾಗಿ ಕಲ್ಪಿಸಿಕೊಂಡು ಜನಾದೇಶವನ್ನು ತಮ್ಮ ಬೇನಾಮಿ ಆಸ್ತಿ ರಕ್ಷಣೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ 26 ವರ್ಷಗಳಲ್ಲಿ 26 ಬೇನಾಮಿ ಆಸ್ತಿಗಳಿಗೆ ಮಾಲೀಕರಾಗಿದ್ದಾರೆ. ಇದಕ್ಕಾಗಿ ಜನ ಬೆಂಬಲ ನೀಡಿರಲಿಲ್ಲ ಎಂದು ಅವರು ಕಿಡಿಕಾರಿದರು.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search