• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತೇಜಸ್ಸು ಕಳೆದುಕೊಂಡ ತೇಜಸ್ವಿ. ವಿಶ್ವಾಸ ಮತದಲ್ಲಿ ನಿತೀಶ್ ಗೆಲುವು. ಬಿಹಾರದಲ್ಲಿನ್ನು ನಿತೀಶ್-ಮೋದಿ ಸರ್ಕಾರ್.

TNN Correspondent Posted On July 28, 2017
0


0
Shares
  • Share On Facebook
  • Tweet It

ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ಪರ ಒಟ್ಟು 131 ಶಾಸಕರು ಮತ ಚಲಾಯಿಸಿದ್ದು, ಸರ್ಕಾರದ ವಿರುದ್ಧ 108 ಶಾಸಕರು ಮತ ಚಲಾಯಿಸಿದ್ದಾರೆ.ಸರ್ಕಾರದ ಉಳಿವಿಗಾಗಿ 122 ಶಾಸಕರ ಬೆಂಬಲದ ಅಗತ್ಯವಿದ್ದು, ನಿತೀಶ್ ಕುಮಾರ್ ಸರ್ಕಾರಕ್ಕೆ 131 ಶಾಸಕರು ಬೆಂಬಲ ನೀಡಿರುವುದರಿಂದ ಸಿಎಂ ಆಗಿ ನಿತೀಶ್ ಕುಮಾರ್ ಮುಂದುವರೆಯಲಿದ್ದಾರೆ.

ಹೀಗಾಗಿ ಈ ಹಿಂದೆ ಉಪ ಮುಖ್ಯಮಂತ್ರಿಯಾಗಿದ್ದ ಆರ್ ಜೆಡಿ ಪಕ್ಷದ ತೇಜಸ್ವಿ ಯಾದವ್ ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದು, ವಿಪಕ್ಷ ನಾಯಕರಾಗಿದ್ದ ಸುಶೀಲ್ ಕುಮಾರ್ ಮೋದಿ ಉಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಆರ್ ಜೆಡಿ, ಕಾಂಗ್ರೆಸ್ ಪಕ್ಷಗಳನ್ನೊಳಗೊಂಡ ಮಹಾಘಟ್ ಬಂಧನ್ ಮೈತ್ರಿಕೂಟದಿಂದ ಹೊರ ಬಂದಿದ್ದ ನಿತೀಶ್ ಕುಮಾರ್ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಬಳಿಕ ಬಿಜೆಪಿ ಜೊತೆಗೂಡಿ ಸರ್ಕಾರ ರಚನೆ ಮಾಡಿದ್ದಾರೆ. ವಿಧಾನಸಭೆ ಹೊರಗಿದ್ದ ಜೆಡಿಯು ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಮತ್ತು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ವಿಶ್ವಾಸ ಮತ ಯಾಚನೆಗೂ ಮುನ್ನ ಬಿಹಾರ ವಿಧಾನಸಭೆಯಲ್ಲಿ ದೊಡ್ಡ ಡ್ರಾಮಾವೇ ನಡೆದಿದ್ದು, ಭಾರಿ ಕೋಲಾಹಲದ ನಡುವೆಯೇ ವಿಶ್ವಾಸ ಮತ ಯಾಚನೆಗೆ ನಿರ್ಣಯ ಮಂಡಿಸಲಾಯಿತು. ಇದಕ್ಕೂ ಮೊದಲು ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲು ಮುಂದಾದಾಗ ಆರ್ ಜೆಡಿ ಸದಸ್ಯರು ಭಾರಿ ಕೋಲಾಹಲವೆಬ್ಬಿಸಿದರು. ಇದರ ನಡುವೆಯೂ ಮಾತನಾಡಿದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು, ಮೊದಲಿಗೆ ಆರ್ ಜೆಡಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅವರ ಕಾರ್ಯಗಳಿಂದಾಗಿಯೇ ನಾನು ಇಂದು ಈ ಸ್ಥಾನದಲ್ಲಿ ನಿಂತಿದ್ದೇನೆ ಎಂದು ಹೇಳಿದರು.

ಇದೇ ವೇಳೆ ತೇಜಸ್ವಿಯಾದವ್ ವಿರುದ್ಧ ಕಿಡಿಕಾರಿದ ಸುಶೀಲ್ ಕುಮಾರ್ ಮೋದಿ ಅವರು, ಬಿಹಾರದ ಜನತೆ ತಮ್ಮ ಜನಾದೇಶ ನೀಡಿರುವುದು. ಉತ್ತಮ ಆಡಳಿತ ನೀಡಲಿ ಎಂದು. ಆದರೆ ಕೆಲವರು ಜನಾದೇಶವನ್ನು ತಪ್ಪು ತಪ್ಪಾಗಿ ಕಲ್ಪಿಸಿಕೊಂಡು ಜನಾದೇಶವನ್ನು ತಮ್ಮ ಬೇನಾಮಿ ಆಸ್ತಿ ರಕ್ಷಣೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ 26 ವರ್ಷಗಳಲ್ಲಿ 26 ಬೇನಾಮಿ ಆಸ್ತಿಗಳಿಗೆ ಮಾಲೀಕರಾಗಿದ್ದಾರೆ. ಇದಕ್ಕಾಗಿ ಜನ ಬೆಂಬಲ ನೀಡಿರಲಿಲ್ಲ ಎಂದು ಅವರು ಕಿಡಿಕಾರಿದರು.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search