• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತೇಜಸ್ಸು ಕಳೆದುಕೊಂಡ ತೇಜಸ್ವಿ. ವಿಶ್ವಾಸ ಮತದಲ್ಲಿ ನಿತೀಶ್ ಗೆಲುವು. ಬಿಹಾರದಲ್ಲಿನ್ನು ನಿತೀಶ್-ಮೋದಿ ಸರ್ಕಾರ್.

TNN Correspondent Posted On July 28, 2017
0


0
Shares
  • Share On Facebook
  • Tweet It

ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ಪರ ಒಟ್ಟು 131 ಶಾಸಕರು ಮತ ಚಲಾಯಿಸಿದ್ದು, ಸರ್ಕಾರದ ವಿರುದ್ಧ 108 ಶಾಸಕರು ಮತ ಚಲಾಯಿಸಿದ್ದಾರೆ.ಸರ್ಕಾರದ ಉಳಿವಿಗಾಗಿ 122 ಶಾಸಕರ ಬೆಂಬಲದ ಅಗತ್ಯವಿದ್ದು, ನಿತೀಶ್ ಕುಮಾರ್ ಸರ್ಕಾರಕ್ಕೆ 131 ಶಾಸಕರು ಬೆಂಬಲ ನೀಡಿರುವುದರಿಂದ ಸಿಎಂ ಆಗಿ ನಿತೀಶ್ ಕುಮಾರ್ ಮುಂದುವರೆಯಲಿದ್ದಾರೆ.

ಹೀಗಾಗಿ ಈ ಹಿಂದೆ ಉಪ ಮುಖ್ಯಮಂತ್ರಿಯಾಗಿದ್ದ ಆರ್ ಜೆಡಿ ಪಕ್ಷದ ತೇಜಸ್ವಿ ಯಾದವ್ ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದು, ವಿಪಕ್ಷ ನಾಯಕರಾಗಿದ್ದ ಸುಶೀಲ್ ಕುಮಾರ್ ಮೋದಿ ಉಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಆರ್ ಜೆಡಿ, ಕಾಂಗ್ರೆಸ್ ಪಕ್ಷಗಳನ್ನೊಳಗೊಂಡ ಮಹಾಘಟ್ ಬಂಧನ್ ಮೈತ್ರಿಕೂಟದಿಂದ ಹೊರ ಬಂದಿದ್ದ ನಿತೀಶ್ ಕುಮಾರ್ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಬಳಿಕ ಬಿಜೆಪಿ ಜೊತೆಗೂಡಿ ಸರ್ಕಾರ ರಚನೆ ಮಾಡಿದ್ದಾರೆ. ವಿಧಾನಸಭೆ ಹೊರಗಿದ್ದ ಜೆಡಿಯು ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಮತ್ತು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ವಿಶ್ವಾಸ ಮತ ಯಾಚನೆಗೂ ಮುನ್ನ ಬಿಹಾರ ವಿಧಾನಸಭೆಯಲ್ಲಿ ದೊಡ್ಡ ಡ್ರಾಮಾವೇ ನಡೆದಿದ್ದು, ಭಾರಿ ಕೋಲಾಹಲದ ನಡುವೆಯೇ ವಿಶ್ವಾಸ ಮತ ಯಾಚನೆಗೆ ನಿರ್ಣಯ ಮಂಡಿಸಲಾಯಿತು. ಇದಕ್ಕೂ ಮೊದಲು ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲು ಮುಂದಾದಾಗ ಆರ್ ಜೆಡಿ ಸದಸ್ಯರು ಭಾರಿ ಕೋಲಾಹಲವೆಬ್ಬಿಸಿದರು. ಇದರ ನಡುವೆಯೂ ಮಾತನಾಡಿದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು, ಮೊದಲಿಗೆ ಆರ್ ಜೆಡಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅವರ ಕಾರ್ಯಗಳಿಂದಾಗಿಯೇ ನಾನು ಇಂದು ಈ ಸ್ಥಾನದಲ್ಲಿ ನಿಂತಿದ್ದೇನೆ ಎಂದು ಹೇಳಿದರು.

ಇದೇ ವೇಳೆ ತೇಜಸ್ವಿಯಾದವ್ ವಿರುದ್ಧ ಕಿಡಿಕಾರಿದ ಸುಶೀಲ್ ಕುಮಾರ್ ಮೋದಿ ಅವರು, ಬಿಹಾರದ ಜನತೆ ತಮ್ಮ ಜನಾದೇಶ ನೀಡಿರುವುದು. ಉತ್ತಮ ಆಡಳಿತ ನೀಡಲಿ ಎಂದು. ಆದರೆ ಕೆಲವರು ಜನಾದೇಶವನ್ನು ತಪ್ಪು ತಪ್ಪಾಗಿ ಕಲ್ಪಿಸಿಕೊಂಡು ಜನಾದೇಶವನ್ನು ತಮ್ಮ ಬೇನಾಮಿ ಆಸ್ತಿ ರಕ್ಷಣೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ 26 ವರ್ಷಗಳಲ್ಲಿ 26 ಬೇನಾಮಿ ಆಸ್ತಿಗಳಿಗೆ ಮಾಲೀಕರಾಗಿದ್ದಾರೆ. ಇದಕ್ಕಾಗಿ ಜನ ಬೆಂಬಲ ನೀಡಿರಲಿಲ್ಲ ಎಂದು ಅವರು ಕಿಡಿಕಾರಿದರು.

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search