• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತೇಜಸ್ಸು ಕಳೆದುಕೊಂಡ ತೇಜಸ್ವಿ. ವಿಶ್ವಾಸ ಮತದಲ್ಲಿ ನಿತೀಶ್ ಗೆಲುವು. ಬಿಹಾರದಲ್ಲಿನ್ನು ನಿತೀಶ್-ಮೋದಿ ಸರ್ಕಾರ್.

TNN Correspondent Posted On July 28, 2017
0


0
Shares
  • Share On Facebook
  • Tweet It

ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ಪರ ಒಟ್ಟು 131 ಶಾಸಕರು ಮತ ಚಲಾಯಿಸಿದ್ದು, ಸರ್ಕಾರದ ವಿರುದ್ಧ 108 ಶಾಸಕರು ಮತ ಚಲಾಯಿಸಿದ್ದಾರೆ.ಸರ್ಕಾರದ ಉಳಿವಿಗಾಗಿ 122 ಶಾಸಕರ ಬೆಂಬಲದ ಅಗತ್ಯವಿದ್ದು, ನಿತೀಶ್ ಕುಮಾರ್ ಸರ್ಕಾರಕ್ಕೆ 131 ಶಾಸಕರು ಬೆಂಬಲ ನೀಡಿರುವುದರಿಂದ ಸಿಎಂ ಆಗಿ ನಿತೀಶ್ ಕುಮಾರ್ ಮುಂದುವರೆಯಲಿದ್ದಾರೆ.

ಹೀಗಾಗಿ ಈ ಹಿಂದೆ ಉಪ ಮುಖ್ಯಮಂತ್ರಿಯಾಗಿದ್ದ ಆರ್ ಜೆಡಿ ಪಕ್ಷದ ತೇಜಸ್ವಿ ಯಾದವ್ ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದು, ವಿಪಕ್ಷ ನಾಯಕರಾಗಿದ್ದ ಸುಶೀಲ್ ಕುಮಾರ್ ಮೋದಿ ಉಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಆರ್ ಜೆಡಿ, ಕಾಂಗ್ರೆಸ್ ಪಕ್ಷಗಳನ್ನೊಳಗೊಂಡ ಮಹಾಘಟ್ ಬಂಧನ್ ಮೈತ್ರಿಕೂಟದಿಂದ ಹೊರ ಬಂದಿದ್ದ ನಿತೀಶ್ ಕುಮಾರ್ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಬಳಿಕ ಬಿಜೆಪಿ ಜೊತೆಗೂಡಿ ಸರ್ಕಾರ ರಚನೆ ಮಾಡಿದ್ದಾರೆ. ವಿಧಾನಸಭೆ ಹೊರಗಿದ್ದ ಜೆಡಿಯು ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಮತ್ತು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ವಿಶ್ವಾಸ ಮತ ಯಾಚನೆಗೂ ಮುನ್ನ ಬಿಹಾರ ವಿಧಾನಸಭೆಯಲ್ಲಿ ದೊಡ್ಡ ಡ್ರಾಮಾವೇ ನಡೆದಿದ್ದು, ಭಾರಿ ಕೋಲಾಹಲದ ನಡುವೆಯೇ ವಿಶ್ವಾಸ ಮತ ಯಾಚನೆಗೆ ನಿರ್ಣಯ ಮಂಡಿಸಲಾಯಿತು. ಇದಕ್ಕೂ ಮೊದಲು ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲು ಮುಂದಾದಾಗ ಆರ್ ಜೆಡಿ ಸದಸ್ಯರು ಭಾರಿ ಕೋಲಾಹಲವೆಬ್ಬಿಸಿದರು. ಇದರ ನಡುವೆಯೂ ಮಾತನಾಡಿದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು, ಮೊದಲಿಗೆ ಆರ್ ಜೆಡಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅವರ ಕಾರ್ಯಗಳಿಂದಾಗಿಯೇ ನಾನು ಇಂದು ಈ ಸ್ಥಾನದಲ್ಲಿ ನಿಂತಿದ್ದೇನೆ ಎಂದು ಹೇಳಿದರು.

ಇದೇ ವೇಳೆ ತೇಜಸ್ವಿಯಾದವ್ ವಿರುದ್ಧ ಕಿಡಿಕಾರಿದ ಸುಶೀಲ್ ಕುಮಾರ್ ಮೋದಿ ಅವರು, ಬಿಹಾರದ ಜನತೆ ತಮ್ಮ ಜನಾದೇಶ ನೀಡಿರುವುದು. ಉತ್ತಮ ಆಡಳಿತ ನೀಡಲಿ ಎಂದು. ಆದರೆ ಕೆಲವರು ಜನಾದೇಶವನ್ನು ತಪ್ಪು ತಪ್ಪಾಗಿ ಕಲ್ಪಿಸಿಕೊಂಡು ಜನಾದೇಶವನ್ನು ತಮ್ಮ ಬೇನಾಮಿ ಆಸ್ತಿ ರಕ್ಷಣೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ 26 ವರ್ಷಗಳಲ್ಲಿ 26 ಬೇನಾಮಿ ಆಸ್ತಿಗಳಿಗೆ ಮಾಲೀಕರಾಗಿದ್ದಾರೆ. ಇದಕ್ಕಾಗಿ ಜನ ಬೆಂಬಲ ನೀಡಿರಲಿಲ್ಲ ಎಂದು ಅವರು ಕಿಡಿಕಾರಿದರು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search