ಅಣ್ಣಾ ಮಲೈ ಸೇರಿ ನಾಲ್ವರು ಬೆಂಗಳೂರಿಗೆ….!!!!! ಯಾಕೆ ಗೊತ್ತೆ..?
Posted On October 16, 2018
ಬೆಂಗಳೂರು: ಅಲೋಕ್ ಕುಮಾರ್ ಮತ್ತು ಗಿರೀಶ್ ಅವರಂತಹ ಖಡಕ್ ಪೊಲೀಸ್ ಅಧಿಕಾರಿಗಳನ್ನು ಸಿಸಿಬಿಗೆ ಹಾಕಿ, ದಂಧೆಕೋರರಿಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಸಿ ಮುಟ್ಟಿಸಿದ್ದಾರೆ. ಇದರ ಬೆನ್ನಲ್ಲೇ ಐವರು ಖಡಕ್ ಆಫೀಸರ್ ಗಳನ್ನು ವರ್ಗಾವಣೆ ಮಾಡಿದ್ದಾರೆ.ಭೂ ಮಾಫಿಯಾ ಮಟ್ಟ ಹಾಕಲು ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಣ್ಣಾ ಮಲೈ ಹಾಗೂ ಪೂರ್ವ ವಿಭಾಗ ಡಿಸಿಪಿಯಾಗಿ ರಾಹುಲ್ ಕುಮಾರ್ ಅವರನ್ನು ವರ್ಗಾವಣೆ ಮಾಡಿದ್ದಾರೆ. ಬೆಂಗಳೂರು ವಿಭಾಗದ ಹೆಚ್ಚುವರಿ ಸಂಚಾರ ಆಯುಕ್ತರಾಗಿ ಹರಿಶೇಖರನ್, ಕೆಎಸ್ಆರ್ಪಿ 1ನೇ ಬೆಟಾಲಿಯನ್ ಕಮಾಂಡೆಂಟ್ಗೆ ಅಜಯ್ ಹಿಲೋರಿ ಹಾಗೂ ಚಿಕ್ಕಮಗಳೂರು ಎಸ್ಪಿಯಾಗಿ ಹರೀಶ್ ಪಾಂಡೆ ಅವರು ವರ್ಗಾವಣೆಯಾಗಿದ್ದಾರೆ. ಭೂಕಳ್ಳರನ್ನು ಮಟ್ಟ ಹಾಕಲು ಬೆಂಗ್ಳೂರಿಗೆ ಬರ್ತಿದ್ದಾರೆ ಎಸ್ಪಿ ಅಣ್ಣಾ ಮಲೈ
ಈ ಮೂಲಕ ಮತ್ತೆ ನಾಲ್ವರು ಖಡಕ್ ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರಿನಲ್ಲಿ ಮಣೆ ಹಾಕಿ, ಕಳ್ಳರಿಗೆ ಹಾಗೂ ನಿಯಮ ಉಲ್ಲಂಘನೆ ಮಾಡುವವರಲ್ಲಿ ನಡುಕ ಹುಟ್ಟಿಸಲು ಎಚ್.ಡಿ.ಕುಮಾರಸ್ವಾಮಿ ಅವರು ತಂತ್ರ ಹೆಣೆಯುತ್ತಿದ್ದಾರೆ.
- Advertisement -
Trending Now
ಆವತ್ತು ಮಗಳನ್ನು ಪಕ್ಷಕ್ಕೆ ತೆಗೆದುಕೊಳ್ಳದೇ ಇದ್ದ ಡಿಕೆ ಕಾದಿದ್ದು ತಂದೆಗಾಗಿ!
October 23, 2024
ನಳಿನ್ ಎಂಬ ಸ್ಥಿತಪ್ರಜ್ಞ ಪ್ರಚಾರಕನಿಂದ ಪ್ರಸ್ತುತದ ತನಕ ಹೇಗೆ ಸಾಧ್ಯ?
October 2, 2024
Leave A Reply