• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ದಸರಾಕ್ಕೆ ಅದ್ದೂರಿ ತೆರೆ…!!!!

photo-hari prasad perinje Posted On October 20, 2018
0


0
Shares
  • Share On Facebook
  • Tweet It

ಚಿತ್ರ-ಹರಿಪ್ರಸಾದ್ ಪೇರಿಂಜಿ

ಮಂಗಳೂರು-ಮಂಗಳೂರಿನ ಕೊದ್ರೋಳಿ ದೇವಾಲಯದಲ್ಲಿ ನಡೆದ ಸಂಭ್ರಮದ ದಸರಾಕ್ಕೆ ನಿನ್ನೆ ತೆರೆ ಕಂಡಿದೆ. ನವದುರ್ಗೆಯರ ಸಂಭ್ರಮದ ಶೋಭಾಯಾತ್ರೆಯನ್ನು ಕಣ್ತುಂಬಿಕೊಳ್ಳಲು ಕುದ್ರೋಳಿ ದೇವಸ್ಥಾನದಿಂದ ಎಂ.ಜಿ.ರೋಡ್‌ವರೆಗೆ ಜನ ಸಾಗರವೇ ನೆರೆದಿತ್ತು. ಶುಕ್ರವಾರ ಮುಂಜಾನೆ ದೇವಸ್ಥಾನದಲ್ಲಿ ವಾಗೀಶ್ವರಿ ದುರ್ಗಾಹೋಮ, ಮಧ್ಯಾಹ್ನ ಶಿವಪೂಜೆ, ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ, ಉತ್ಸವಗಳು ನಡೆದು ಶಾರದಾ ಮೂರ್ತಿ ವಿಸರ್ಜನೆಗೆ ಚಾಲನೆ ನೀಡಲಾಯಿತು.ಜಯಘೋಷದೊಂದಿಗೆ ಮಹಾಗಣಪತಿಯ ವಿಗ್ರಹಕ್ಕೆ ಪೂಜೆ ನೆರವೇರಿಸಿ ಶೋಭಾಯಾತ್ರೆಯ ಮುಂಚೂಣಿಯ ಅಲಂಕೃತ ವಾಹನದಲ್ಲಿ ಇರಿಸಲಾಯಿತು. ಬಳಿಕ ಹೂವು, ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ಲಾರಿಗಳಲ್ಲಿ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸ್ಕಂದಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿದಾತ್ರಿ ಮತ್ತು ಆದಿಶಕ್ತಿಯರೊಂದಿಗೆ ಶಾರದಾ ಮಾತೆ ಮತ್ತು ನಾರಾಯಣಗುರುಗಳ ಚಿತ್ರಗಳನ್ನು ಇಟ್ಟು ಮೆರವಣಿಗೆ ಆರಂಭಿಸಲಾಯಿತು. ದೇವಿಯರ ವಿಗ್ರಹ ಮಂಟಪದಿಂದ ಹೊರ ತರುತ್ತಿದ್ದಂತೆ ಸೇರಿದ್ದ ಭಕ್ತ ಸಮೂಹ ಜಯಘೋಷ ಹೊರಡಿಸಿದರು.

ಮಂಗಳೂರಿನಲ್ಲಿ ನಡೆಯುವ ಈ ವಿಜೃಂಭಣೆಯ ದಸರಾ ಉತ್ಸವದ ಆಕರ್ಷಕ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸಿದ್ದರು. ಶ್ರೀ ಕ್ಷೇತ್ರದಿಂದ ಹೊರಡಿದ ಶೋಭಾ ಯಾತ್ರೆಯು ಮಣ್ಣಗುಡ್ಡ, ಲೇಡಿಹಿಲ್ ಸರ್ಕಲ್, ಪಿವಿಎಸ್ ಸರ್ಕಲ್, ನವಭಾರತ್ ಸರ್ಕಲ್, ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟೆ, ಸರಕಾರಿ ಕಾಲೇಜು ವೃತ್ತದಿಂದ ಹೈಸ್ಕೂಲ್ ರಸ್ತೆಯಾಗಿ ಶ್ರೀ ವೆಂಕರಮಣ ದೇಗುಲದ ಮುಂಭಾಗವಾಗಿ ಕಾರ್‌ಸ್ಟ್ರೀಟ್, ಅಳಕೆಯಾಗಿ ಸಾಗಿ ಶನಿವಾರ ಮುಂಜಾನೆ ವೇಳೆ ಶ್ರೀ ಕ್ಷೇತ್ರದಲ್ಲಿ ಶಾರದಾ ವಿಸರ್ಜನೆ ಮಾಡಲಾಗಿದೆ.

ಸಾಲುಸಾಲು ಕೇರಳ ಶೈಲಿ ಕೊಡೆಗಳು, ವಿವಿಧ ಬೊಂಬೆಗಳು, ಕರ್ನಾಟಕದ ಜಾನಪದ ವೈವಿಧ್ಯ ಸಾರುವ ಡೊಳ್ಳುಕುಣಿತ, ನರ್ತನಗಳೊಂದಿಗೆ ಕೇರಳ ಚೆಂಡೆ, ಸ್ಥಳೀಯ ಚೆಂಡೆಗಳು, ಲಾರಿ ತುಂಬ ಕೇಕೆ ಹಾಕುವ ಹುಲಿವೇಷಗಳು, ಪುರಾಣ ಕತೆಗಳ ಸಂದರ್ಭಗಳನ್ನು ವ್ಯಕ್ತಪಡಿಸುವ 75ಕ್ಕೂ ಹೆಚ್ಚು ಸ್ತಬ್ಧಚಿತ್ರ, ಬ್ಯಾಂಡ್‌ಸೆಟ್‌ಗಳು ಮೆರವಣಿಗೆ ಹುರುಪು ಹೆಚ್ಚಿಸಿದವು.

100ಕ್ಕೂ ಅಧಿಕ ವೇಷಭೂಷಣ, ವಾದ್ಯಮೇಳ ತಂಡ, ಭಜನಾ ತಂಡಗಳು, ಗೊಂಬೆ ಕುಣಿತದ ತಂಡಗಳು, ಹುಲಿ ಕುಣಿದ ತಂಡ, ಭಾಗವಹಿಸಿದ್ದವು. ವಿವಿಧೆಡೆ ಆರ್ಕೆಸ್ಟ್ರಾ ತಂಡಗಳಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.ಮೆರವಣಿಗೆ ಹೊರಡುವ ಸುಮಾರು 9 ಕಿ.ಮೀ. ಉದ್ದದ ರಸ್ತೆಯ ಇಕ್ಕಡೆಗಳು ಕೂಡ ದೀಪದಿಂದ ಅಲಂಕೃತಗೊಂಡಿದೆ. ಶ್ರೀ ಕ್ಷೇತ್ರದ ಮೂಲಗಳ ಪ್ರಕಾರ ಸುಮಾರು 20ಲಕ್ಷಕ್ಕೂ ಅಧಿಕ ಬಲ್ಬ್‌ಗಳನ್ನು ಬಳಸಲಾಗಿದೆ. ಅದಲ್ಲದೆ ಪ್ರಮುಖ ವೃತ್ತಗಳನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು.

0
Shares
  • Share On Facebook
  • Tweet It


#mangaloredasara


Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
photo-hari prasad perinje June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
photo-hari prasad perinje June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search