• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತ್ತೆ ಮೇಲಕ್ಕೇರಿದ ಮೋದಿ ಸರ್ಕಾರ….!!! ಹೇಗೆ..?

TNN Correspondent Posted On November 1, 2018
0


0
Shares
  • Share On Facebook
  • Tweet It

ದೆಹಲಿ: ಉದ್ಯಮ ಸ್ನೇಹಿ ವಾತಾವರಣ ಹೊಂದಿರುವ ವಿಶ್ವದ 190 ದೇಶಗಳ ಶ್ರೇಯಾಂಕ ಪಟ್ಟಿಯೊಂದು ವಿಶ್ವಬ್ಯಾಂಕ್‌ ಬುಧವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭರ್ಜರಿ 23 ಸ್ಥಾನ ಮೇಲೇರುವ ಮೂಲಕ 77 ಸ್ಥಾನ ತಲುಪಿದೆ. ಜೊತೆಗೆ ಅತ್ಯಂತ ದೊಡ್ಡ ಆರ್ಥಿಕತೆ ಹೊಂದಿದ ದೇಶಗಳ ಪೈಕಿ ಅತ್ಯಂತ ಹೆಚ್ಚು ಆರ್ಥಿಕ ಸುಧಾರಣೆಗಳನ್ನು ತಂದ ದೇಶಗಳ ಪೈಕಿ ಭಾರತವೂ ಒಂದು ವಿಶ್ವಸಂಸ್ಥೆ ತೀವ್ರ ಮೆಚ್ಚುಗೆ ವ್ಯಕ್ತಪಡಿಸಿದೆ.

2019ರ ಲೋಕಸಭಾ ಚುನಾವಣೆಗೂ ಮುನ್ನ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗುತ್ತಿದ್ದ ಕೇಂದ್ರ ಸರ್ಕಾರಕ್ಕೆ, ವಿಶ್ವಬ್ಯಾಂಕ್‌ ಬಿಡುಗಡೆ ಮಾಡಿರುವ ವರದಿ, ಹೊಸ ಟಾನಿಕ್‌ ನೀಡಿದೆ. ಈ ನಡುವೆ ವರದಿಯನ್ನು ಸ್ವಾಗತಿಸಿರುವ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ, ರಿಯಲ್‌ ಎಸ್ಟೇಟ್‌ ಸೇರಿದಂತೆ ಇನ್ನಿತರೆ ಕೆಲ ಕ್ಷೇತ್ರಗಳು ಸುಧಾರಣೆ ಅಳವಡಿಕೆಯಾದರೆ, ಟಾಪ್‌ 50ರೊಳಗೆ ಭಾರತ ಸೇರುವುದು ಕಷ್ಟವೇನಲ್ಲ ಎಂದು ಹೇಳಿದ್ದಾರೆ.

ಹೈಜಂಪ್‌: ದೇಶವೊಂದರಲ್ಲಿ ಉದ್ಯಮ ಸ್ಥಾಪಿಸಲು ಉದ್ಯಮಿಗಳು ವಹಿಸಬೇಕಾದ ಶ್ರಮ ಸೇರಿದಂತೆ 10 ಮಾನದಂಡಗಳಲ್ಲಿ ಯಾವ್ಯಾವ ದೇಶಗಳು ಎಂಥ ವಾತಾವರಣ ಹೊಂದಿದೆ ಎಂಬುದನ್ನು ಪರಿಗಣಿಸಿ ವಿಶ್ವಬ್ಯಾಂಕ್‌ ಪ್ರತಿ ವರ್ಷ ವರದಿ ಬಿಡುಗಡೆ ಮಾಡುತ್ತದೆ. ಉದ್ಯಮ ಆರಂಭ, ನಿರ್ಮಾಣ ಗುತ್ತಿಗೆ, ವಿದ್ಯುತ್‌ ಸಂಪರ್ಕ, ಸಾಲ, ತೆರಿಗೆ ಪಾವತಿ, ಗಡಿಯಾಚೆಗಿನ ವ್ಯಾಪಾರ, ಒಪ್ಪಂದ ಜಾರಿ, ದಿವಾಳಿ ಪ್ರಕ್ರಿಯೆ ನಿರ್ವಹಣೆ ಸೇರಿದಂತೆ 10 ಅಂಶಗಳನ್ನು ವರದಿ ತಯಾರಿಕೆಗೆ ಪರಿಗಣಿಸಲಾಗುತ್ತದೆ. ಭಾರತ ಈ 10ರ ಪೈಕಿ 6 ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಸಾಧಿಸಿದೆ. ಏಕೀಕೃತ ತೆರಿಗೆ ಪಾವತಿಗೆ ಜಿಎಸ್‌ಟಿ ಜಾರಿ, ದಿವಾಳಿ ತಡೆ ಪ್ರಕ್ರಿಯೆಯಲ್ಲಿ ಸುಧಾರಣೆ ಮೊದಲಾದ ಕ್ರಮಗಳಿಂದಾಗಿ ಭಾರತ ಈ ವರ್ಷ 23 ಸ್ಥಾನ ಏರಿಕೆ ಕಾಣುವ ಮೂಲಕ 77ನೇ ಸ್ಥಾನ ತಲುಪಿದೆ ಎಂದು ವರದಿ ಹೇಳಿದೆ.

ಕಳೆದ ವರ್ಷ ಕೂಡಾ ಭಾರತ 31 ಸ್ಥಾನಗಳ ಭಾರೀ ಏರಿಕೆ ದಾಖಲಿಸುವ ಮೂಲಕ 131ನೇ ಸ್ಥಾನದಿಂದ 100ನೇ ಸ್ಥಾನಕ್ಕೆ ಏರಿತ್ತು. ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಈ ಪಟ್ಟಿಯಲ್ಲಿ ಭಾರತ 65 ಸ್ಥಾನಗಳಷ್ಟುಭಾರೀ ಏರಿಕೆ ಕಂಡಿದೆ.

ಟಾಪ್‌ 5: ನ್ಯೂಜಿಲೆಂಡ್‌, ಸಿಂಗಾಪುರ, ಡೆನ್ಮಾಕ್‌, ಹಾಂಕಾಂಗ್‌ ಮತ್ತು ದಕ್ಷಿಣ ಕೊರಿಯಾ ಟಾಪ್‌ 5 ಸ್ಥಾನದಲ್ಲಿವೆ. ಅಮೆರಿಕ 8, ಚೀನಾ 46, ಪಾಕಿಸ್ತಾನ 136ನೇ ಸ್ಥಾನದಲ್ಲಿದೆ.

ವಿಶ್ವಬ್ಯಾಂಕ್‌ ಮೆಚ್ಚುಗೆ: 2 ವರ್ಷದಲ್ಲಿ 50ಕ್ಕೂ ಹೆಚ್ಚು ಸ್ಥಾನಗಳ ಏರಿಕೆ ಕಂಡಿರುವ ಭಾರತದ ಸಾಧನೆಯನ್ನು ವಿಶ್ವಸಂಸ್ಥೆ ಪ್ರಶಂಸಿಸಿದೆ. ಜೊತೆಗೆ ಸುಧಾರಣಾ ಪ್ರಕ್ರಿಯೆಯಲ್ಲಿ ಅತ್ಯಂತ ಗಣನೀಯ ಸಾಧನೆ ಮಾಡಿದ ಟಾಪ್‌ 10 ದೇಶಗಳ ಪೈಕಿ ಭಾರತ ಕೂಡಾ ಒಂದು ಮೆಚ್ಚುಗೆ ವ್ಯಕ್ತಪಡಿಸಿದೆ.

0
Shares
  • Share On Facebook
  • Tweet It


#PMMODI


Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
You may also like
ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ…!!!!!!
November 3, 2018
ಮುಂದಿನ ಲೋಕಸಭೆಯಲ್ಲಿ ಎಂಎಸ್ ಧೋನಿ , ಗಂಭೀರ್ ಬಿ.ಜೆ.ಪಿ ಯಿಂದ ಸ್ಪರ್ಧೆ…!!!
October 23, 2018
ಮೋದಿ ಸರ್ಕಾರದಿಂದ ಯುವಕರಿಗೆ ಗುಡ್ ನ್ಯೂಸ್…!!!
October 23, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 3
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search