• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ…!!!!!!

TNN Correspondent Posted On November 3, 2018
0


0
Shares
  • Share On Facebook
  • Tweet It

ದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ, ಜನರ ಭಾವನೆಗಳನ್ನು ಅರಿಯುವ ನಿಟ್ಟಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಮೀಕ್ಷೆಯೊಂದನ್ನು ನಡೆಸಲಾಗಿದ್ದು, ಅದರಲ್ಲಿ ತಕ್ಷಣಕ್ಕೆ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿದೆ. ಇದೇ ವೇಳೆ ಪ್ರತ್ಯೇಕವಾಗಿ ರಾಜ್ಯವಾರು ಸಮೀಕ್ಷೆಯನ್ನೂ ನಡೆಸಲಾಗಿದ್ದು, ಅದರನ್ವಯ ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡು ಕಣಕ್ಕಿಳಿದರೆ ಅವುಗಳಿಗೆ 16 ಸ್ಥಾನ ಲಭ್ಯವಾಗಲಿದೆ. ಬಿಜೆಪಿ ಕೇವಲ 12 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ ಎಂದು ಹೇಳಿದೆ.

ಖಾಸಗಿ ಸುದ್ದಿ ವಾಹಿನಿ ನಡೆಸಿದ ಸಮೀಕ್ಷೆ ಯಲ್ಲಿ ಈ ಮಾಹಿತಿ ಸಿಕ್ಕಿದೆ.

ಮೈತ್ರಿ ಸರ್ಕಸ್‌: ಕಳೆದ ಲೋಸಸಭಾ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್‌ 9 ಮತ್ತು ಜೆಡಿಎಸ್‌ 2 ಸ್ಥಾನ ಗೆದ್ದುಕೊಂಡಿದ್ದವು. ಬಿಜೆಪಿ 17 ಸ್ಥಾನ ಗೆದ್ದಿತ್ತು. ಈ ಬಾರಿಯೂ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದಲ್ಲಿ, ಕಾಂಗ್ರೆಸ್‌ 7 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ. ಆದರೆ ಜೆಡಿಎಸ್‌ 1 ಸ್ಥಾನ ಹೆಚ್ಚು ಗೆಲ್ಲುವ ಮೂಲಕ ತನ್ನ ಬಲವನ್ನು 3ಕ್ಕೆ ಏರಿಸಿಕೊಳ್ಳಲಿದೆ. ಮತ್ತೊಂದೆಡೆ ಬಿಜೆಪಿ ಕಳೆದ ಬಾರಿಗಿಂತ 1 ಸ್ಥಾನ ಹೆಚ್ಚು ಗೆಲ್ಲುವ ಮೂಲಕ ತನ್ನ ಬಲವನ್ನು 18ಕ್ಕೆ ಹೆಚ್ಚಿಸಿಕೊಳ್ಳಲಿದೆ. ಕಾಂಗ್ರೆಸ್‌ ಶೇ.37.6ರಷ್ಟು, ಬಿಜೆಪಿ ಶೇ.44.3ರಷ್ಟು, ಜೆಡಿಎಸ್‌ ಶೇ.12.4 ರಷ್ಟುಮತ್ತು ಇತರರು ಶೇ.5.7ರಷ್ಟುಮತ ಪಡೆಯಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಮೈತ್ರಿಗೆ ಬಲ:

ಒಂದು ವೇಳೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಒಂದಾಗಿ ಸ್ಪರ್ಧಿಸಿದಲ್ಲಿ ಅವುಗಳಿಗೆ 16 ಸ್ಥಾನ ಲಭ್ಯವಾಗಲಿದೆ. ಅಂದರೆ ಪ್ರತ್ಯೇಕವಾಗಿ ಸ್ಪರ್ಧಿಸಿದರೆ ಸಿಗಬಹುದಾದ 6 ಸ್ಥಾನ ಹೆಚ್ಚು ಸಿಗಲಿದೆ. ಇದೇ ವೇಳೆ ಬಿಜೆಪಿ ಕೇವಲ 12 ಸ್ಥಾನಕ್ಕೆ ತೃಪ್ತಿಪಟ್ಟುಬೇಕಾಗಿ ಬರಲಿದೆ. ಇದು ಕಳೆದ ಬಾರಿ ಗೆದ್ದಿದ್ದಕ್ಕಿಂತ 5 ಸ್ಥಾನ ಕಡಿಮೆ ಎಂದು ಸಮೀಕ್ಷೆ ಹೇಳಿದೆ.

ಮೈತ್ರಿ ಆಗದಿದ್ದಲ್ಲಿ

ಒಟ್ಟು ಸ್ಥಾನ 28

ಪಕ್ಷ 2014 ಈಗ

ಬಿಜೆಪಿ 17 18

ಕಾಂಗ್ರೆಸ್‌ 09 07

ಜೆಡಿಎಸ್‌ 02 03

ಮೈತ್ರಿ ಆದರೆ

ಪಕ್ಷ 2014 ಈಗ

ಬಿಜೆಪಿ 17 12

ಕಾಂಗ್ರೆಸ್‌+ ಜೆಡಿಎಸ್‌ 11 16

ಕೈ-ದಳ ದೋಸ್ತಿಯಿಂದ ಬಿಜೆಪಿಗೆ ಸಂಕಷ್ಟ!

ರಾಜ್ಯದಲ್ಲಿ ಮೈತ್ರಿ ಆದರೆ ಕಾಂಗ್ರೆಸ್‌-ಜೆಡಿಎಸ್‌ಗೆ 16, ಬಿಜೆಪಿಗೆ 12 ಸೀಟು

ಪ್ರತ್ಯೇಕವಾಗಿ ಸ್ಪರ್ಧಿಸಿದರೆ ಬಿಜೆಪಿ 18, ಕಾಂಗ್ರೆಸ್‌ 7, ಜೆಡಿಎಸ್‌ 3

ಕೇಂದ್ರದಲ್ಲಿ ಮತ್ತೆ ಎನ್‌ಡಿಎ ಸರ್ಕಾರ?

ಲೋಕಸಭಾ ಸ್ಥಾನ: 543 ಬಹುಮತಕ್ಕೆ: 272

ಮೈತ್ರಿಕೂಟ ರಿಪಬ್ಲಿಕ್‌ ಎಬಿಪಿ 2014

ಎನ್‌ಡಿಎ 261 300 336

ಯುಪಿಎ 119 116 60

ಇತರೆ 163 127 147

0
Shares
  • Share On Facebook
  • Tweet It


#PMMODI


Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
You may also like
ಮತ್ತೆ ಮೇಲಕ್ಕೇರಿದ ಮೋದಿ ಸರ್ಕಾರ….!!! ಹೇಗೆ..?
November 1, 2018
ಮುಂದಿನ ಲೋಕಸಭೆಯಲ್ಲಿ ಎಂಎಸ್ ಧೋನಿ , ಗಂಭೀರ್ ಬಿ.ಜೆ.ಪಿ ಯಿಂದ ಸ್ಪರ್ಧೆ…!!!
October 23, 2018
ಮೋದಿ ಸರ್ಕಾರದಿಂದ ಯುವಕರಿಗೆ ಗುಡ್ ನ್ಯೂಸ್…!!!
October 23, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search