• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಹಾಕಿಕೊಂಡಿರುವ ಕ್ಯಾಶ್ ಲೆಸ್ ಭಾರತಕ್ಕೆ ಇನ್ನೊಂದು ಹೆಜ್ಜೆ!

TNN Correspondent Posted On July 29, 2017
0


0
Shares
  • Share On Facebook
  • Tweet It

ಭಾರತೀಯ ರಿಸರ್ವ್ ಬ್ಯಾಂಕ್ ಮುಂದಿನ ತಿಂಗಳ ಅಂತ್ಯದಿಂದ ಹೊಸ 200 ರೂಪಾಯಿ ನೋಟನ್ನು ಚಲಾವಣೆಗೆ ತರಲು ಸಂಪೂರ್ಣ ಸಿದ್ಧತೆ ನಡೆಸಿದೆ. ಈ ಮೂಲಕ ಬರುವ ದಿನಗಳಲ್ಲಿ ನೀವು 200 ರೂಪಾಯಿ ನೋಟನ್ನು ನಿಮ್ಮ ವ್ಯವಹಾರದಲ್ಲಿ ಬಳಸಬಹುದು. ಅಷ್ಟಕ್ಕೂ 200 ರೂಪಾಯಿ ನೋಟ್ ಜಾರಿಗೆ ತರುವ ಉದ್ದೇಶ ಏನು? ಸಿಂಪಲ್, ಬ್ಯಾಂಕುಗಳಲ್ಲಿ ಕೊರತೆ ಇರುವ ನೋಟುಗಳನ್ನು ಪೂರೈಸುವ ಅನಿವಾರ್ಯ ಒತ್ತಡ ಆರ್. ಬಿ.ಐ ಮೇಲಿದೆ. ಇದರೊಂದಿಗೆ ಆರ್. ಬಿ.ಐ 2000 ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣವನ್ನು ಈ ವರ್ಷದ ಆದಿಯಲ್ಲಿಯೇ ನಿಲ್ಲಿಸಿದೆ.

2000 ನೋಟು ಮುದ್ರಣ ನಿಲ್ಲಿಸಿ 200 ರೂಪಾಯಿ ಪ್ರಿಂಟ್ ಮಾಡುವ ಉದ್ದೇಶ ಏನು? ಭ್ರಷ್ಟ್ರಾಚಾರಕ್ಕೆ ಅಂಕಿತ ಹಾಕುವುದು. ಅದು ಹೇಗೆ? ಭವಿಷ್ಯದ ಭಾರತದಲ್ಲಿ ಹೆಚ್ಚೆಚ್ಚು ಆರ್ಥಿಕ ಸಂವಹನಗಳು ಕ್ರೆಡಿಟ್ ಕಾರ್ಡ್ ಮೂಲಕವೇ ಆಗಬೇಕು ಎನ್ನುವುದು ಕೇಂದ್ರ ಸರಕಾರದ ತೀರ್ಮಾನ. ಅದಕ್ಕಾಗಿ ದೊಡ್ಡ ದೊಡ್ಡ ಮುಖಬೆಲೆಯ ನೋಟುಗಳನ್ನು ಮುಖ್ಯ ವಾಹಿನಿಯಿಂದ ನಿಧಾನವಾಗಿ ಹಿಂದಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಶುರು ಮಾಡುವುದು ಕೇಂದ್ರ ಸರಕಾರದ ಚಿಂತನೆ. ಆದರೆ ಏಕಾಏಕಿ ನಾಳೆಯಿಂದ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಹಿಂದಕ್ಕೆ ಪಡೆದು 200 ರೂಪಾಯಿ ಅಥವಾ 100 ರೂಪಾಯಿ ಮುಖಬೆಲೆಯ ನೋಟುಗಳನ್ನು ತೆಗೆದುಕೊಳ್ಳಿ ಎಂದು ಘೋಷಿಸಿದರೆ ಮತ್ತೊಮ್ಮೆ ಜನರಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಬಹುದು ಮತ್ತು ಇದನ್ನೇ ಪ್ರತಿಪಕ್ಷಗಳು ಕೇಂದ್ರದ ವಿರುದ್ಧ ರಣಾಸ್ತ್ರವನ್ನಾಗಿ ಬಳಸಬಹುದು ಎಂದು ಕೇಂದ್ರದ ಬಿಜೆಪಿ ನಾಯಕರಿಗೆ ಗೊತ್ತಿದೆ. ಅದಕ್ಕೆ ಅವರು ಈ ಬಾರಿ ಹೆಜ್ಜೆ ಹೆಜ್ಜೆಯಾಗಿ 2000 ಮತ್ತು 500 ರೂಪಾಯಿ ನೋಟುಗಳನ್ನು ಹಿಂದಕ್ಕೆ ಪಡೆದುಕೊಳ್ಳುತ್ತಾರೆ. ಅದಕ್ಕೆ 200 ರೂಪಾಯಿ ನೋಟು ಪ್ರಾರಂಭಿಕ ಹೆಜ್ಜೆ. ಒಂದೆರಡು ವರ್ಷದ ನಂತರ 200 ರೂಪಾಯಿ ನೋಟುಗಳು ಕೂಡ ಹಿಂದಕ್ಕೆ ಸರಿದು ಕೊನೆಗೆ ಕೇವಲ ನೂರು ರೂಪಾಯಿ ಮಾತ್ರ ಉಳಿಯಲಿದೆ. ಅದು ಕೂಡ ಒಂದೆರಡು ವರ್ಷ ಅಷ್ಟೇ. ಅಂತಿಮವಾಗಿ 50 ರೂಪಾಯಿ ನೋಟನ್ನು ಮಾತ್ರ ಉಳಿಸಿಕೊಂಡು ಉಳಿದ ಎಲ್ಲ ವ್ಯವಹಾರಗಳು ಕ್ಯಾಶ್ ಲೆಸ್ ಆಗಿ ನಡೆಯಬೇಕು ಎಂದು ಆರ್ಥಿಕ ಪಂಡಿತರು ಹೇಳಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಅನುಷ್ಟಾನಕ್ಕೆ ತರಲು ಸಿದ್ಧತೆ ನಡೆಸಿದ್ದಾರೆ.

ಈಗಾಗಲೇ 15 ಲಕ್ಷ ಕೋಟಿ ರುಪಾಯಿಗಳನ್ನು ಹಿಂದಕ್ಕೆ ಪಡೆದುಕೊಂಡು ನಂತರ ಈಗ 14.5 ಲಕ್ಷ ಕೋಟಿ ರೂಪಾಯಿಗಳನ್ನು ಮತ್ತೆ ಮುಖ್ಯ ವಾಹಿನಿಯಲ್ಲಿ ಸೇರುವಂತೆ ನೋಡಿಕೊಂಡಿರುವ ಆರ್. ಬಿ.ಐ ಗೆ ಈ ಹೊಸ ಐನೂರು ಮತ್ತು 2000 ರೂಪಾಯಿ ನೋಟನ್ನು ಕೂಡ ಕಳ್ಳನೋಟನ್ನಾಗಿ ಮಾಡಲು ಕೆಲವರು ಸಂಚು ಹೂಡಿದ್ದು ಗಮನಕ್ಕೆ ಬಂದಿದೆ. ಅದರಿಂದ ತಪ್ಪಿಸಿಕೊಳ್ಳಲು ಈ ಬಾರಿ 200 ರೂಪಾಯಿ ನೋಟಿಗೆ ಹೆಚ್ಚುವರಿ ಜಾಗ್ರತೆ ತೆಗೆದುಕೊಂಡು ಪ್ರಿಂಟ್ ಮಾಡುವ ಪ್ರಕ್ರಿಯೆಗಳು ನಡೆದಿವೆ. ಭ್ರಷ್ಟಾಚಾರವನ್ನು ನಿಲ್ಲಿಸಲು ಕಡಿಮೆ ಡಿನೋಮಿನೇಶನ್ ನೋಟುಗಳು ಜಾರಿಗೆ ಬರುವುದು ಅಗತ್ಯ ಯಾಕೆ? ಚುನಾವಣೆಯ ಸಂದರ್ಭದಲ್ಲಿ ದೊಡ್ಡ ಮುಖಬೆಲೆಯ ನೋಟುಗಳಿದ್ರೆ ಹಂಚುವುದು ಸುಲಭ. ಅದೇ ಕಡಿಮೆ ಮೌಲ್ಯದ ನೋಟಿದ್ದರೆ ಸಿಕ್ಕಿಬೀಳುವುದು ಸುಲಭ. ಹಾಗೆ ಅಧಿಕಾರಿಗಳಿಗೆ ಲಂಚ ಕೊಡುವಾಗಲು ಎಲ್ಲಾ ಕಡೆ ಕಡಿಮೆ ಮುಖಬೆಲೆಯ ನೋಟುಗಳು ಇದ್ದರೆ ಅದರಿಂದ ಲಂಚಾವತಾರಕ್ಕೆ ಅಂಕುಶ ಬೀಳಲಿದೆ. ಮೋದಿ ಹಾಕಿಕೊಂಡಿರುವ ಮುಂದಿನ ಏಳೆಂಟು ವರ್ಷದ ಯೋಜನೆಯಲ್ಲಿ ಕಪ್ಪು ಹಣವುಳ್ಳವರು ಕಂಬಳಿ ಹೊದ್ದು ಮಲಗುವುದು ಲೇಸು.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search