• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಕ್ರಮ ಮರಳುಗಾರಿಕೆಗೆ ಸಚಿವರ ಬೆಂಬಲ.!

Tulunadu News Posted On November 17, 2018
0


0
Shares
  • Share On Facebook
  • Tweet It

ಮಂಗಳೂರು-ಅಕ್ರಮ ಮರಳುಗಾರಿಕೆ ವೇಳೆ ದಾಳಿ ನಡೆಸಿ ಪೊಲೀಸರು ವಶಕ್ಕೆ ಪಡೆದ ಲಾರಿಗಳನ್ನು ಅದರ ಮಾಲಕರಿಗೆ ವಾಪಾಸ್ ಕೊಡಿಸುವ ಸಂಬಂಧ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿರುವುದಾಗಿ ದ‌.ಕ ಜಿಲ್ಲಾ ಉಸ್ತುವಾರಿ ಸಚಿವ ಯು‌.ಟಿ.ಖಾದರ್ ಮಾಹಿತಿ ನೀಡಿದ್ದಾರೆ. ಆದ್ರೆ ಖಾದರ್ ಸಾಹೇಬರ ಈ ನಡೆ ಎಷ್ಟರ ಮಟ್ಟಿಗೆ ಸರಿ ಎಂಬ ಮಾತು ಕೇಳಿ ಬಂದಿದ್ದು, ಖಾದರ್ ಮರಳು ದಂಧೆಕೋರರ ಬೆಂಬಲಕ್ಕೆ ನಿಂತ್ರಾ ಎನ್ನುವ ಆರೋಪ ಕೇಳಿ ಬಂದಿದೆ. ಇಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಖಾದರ್, ಮರಳು ದಂಧೆಗೆ ಪೊಲೀಸರು ಮತ್ತು ಅಧಿಕಾರಿಗಳು ದಾಳಿ ನಡೆಸಿ ಅಲ್ಲಿನ ವಸ್ತುಗಳನ್ನು ವಶಕ್ಕೆ ಪಡೆಯುತ್ತಾರೆ.‌ ಇವುಗಳಲ್ಲಿ ಅನೇಕ ಲಾರಿಗಳಿದ್ದು, ಜಿಲ್ಲೆಯ ಪೊಲೀಸ್ ಠಾಣೆಗಳ ಮುಂಭಾಗ ಸಾಲಾಗಿ ನಿಂತಿದೆ. ಇದರಿಂದ ಲಾರಿಗಳಿಗೆ ತುಕ್ಕು ಹಿಡಿದಿದ್ದು, ಸುಖಾಸುಮ್ನನೆ ಹಾಳಾಗುತ್ತಿದೆ. ಹೀಗಾಗಿ ಆ ಲಾರಿಗಳನ್ನು ಮಾಲೀಕರಿಗೆ ಬಿಡಿಸಿ ಕೊಡಲು ಜಿಲ್ಲಾಧಿಕಾರಿ ಜೊತೆ ಚರ್ಚಿಸಿದ್ದೇನೆ. ಒಂದು ಸಭೆ ಕರೆದು ಲಾರಿಗಳನ್ನು ರಿಲೀಸ್ ಮಾಡೋ ಬಗ್ಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದರು. ಆದ್ರೆ ಖಾದರ್ ಸಾಹೇಬರ ಈ ನಡೆ ಎಷ್ಟರ ಮಟ್ಟಿಗೆ ಸರಿ ಎನ್ನುವ ಮಾತು ಕೇಳಿ ಬಂದಿದೆ. ಇನ್ನು ಇದೇ ವೇಳೆ ಪತ್ರಕರ್ತರು ಖಾದರ್ ಅವರ ನಡೆಯ ಬಗ್ಗೆ ಪ್ರಶ್ನೆ ಮಾಡಿದ್ರು. ಅಕ್ರಮಕ್ಕೆ ಬೆಂಬಲ ಸರಿಯಾ ಅಂತ ಕೇಳಿದ್ರು. ಈ ವೇಳೆ ಸಮಜಾಯಿಷಿ ನೀಡಿದ ಸಚಿವ ಖಾದರ್, ನೀವು ಹೇಳೋದು ಸರಿ. ಹೀಗಾಗಿ ನಾನು ಕೂಡ ಹೆಚ್ಚು ಮಾತನಾಡಲ್ಲ. ಆದ್ರೆ ಮಾನವೀಯತೆ ದೃಷ್ಟಿಯಿಂದ ಡಿಸಿಯವರಿಗೆ ಹೇಳಿದೆ ಅಷ್ಟೇ. ಅನೇಕರು ಸಾಲ ಮಾಡಿ ಲಾರಿ ಖರೀದಿಸಿರುತ್ತಾರೆ. ಆದ್ರೆ ಈ ರೀತಿ ಆದಾಗ ಮನೆ ನೋಡಿಕೊಳ್ಳೋದು ಕಷ್ಟ. ಹೀಗಾಗಿ ಇದನ್ನು ಮಾನವೀಯತೆ ‌ದೃಷ್ಟಿಯಿಂದ ಕಾನೂನು ವ್ಯಾಪ್ತಿಯಲ್ಲಿ ಸರಿ ಪಡಿಸಲು ಹೇಳಿದ್ದೇನೆ ಎಂದರು. ಅದರೆ ಈ ರೀತಿ ಅಕ್ರಮ ಲಾರಿಗಳ ಪರ ಸಚಿವರೇ ಬ್ಯಾಟ್ ಬೀಸಿರೋದು ಸರಿಯಲ್ಲ ಎಂಬ ಮಾತುಗಳು ಕೇಳಿ ಬಂದಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search