• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಕ್ರಮ ಮರಳುಗಾರಿಕೆಗೆ ಸಚಿವರ ಬೆಂಬಲ.!

Tulunadu News Posted On November 17, 2018


  • Share On Facebook
  • Tweet It

ಮಂಗಳೂರು-ಅಕ್ರಮ ಮರಳುಗಾರಿಕೆ ವೇಳೆ ದಾಳಿ ನಡೆಸಿ ಪೊಲೀಸರು ವಶಕ್ಕೆ ಪಡೆದ ಲಾರಿಗಳನ್ನು ಅದರ ಮಾಲಕರಿಗೆ ವಾಪಾಸ್ ಕೊಡಿಸುವ ಸಂಬಂಧ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿರುವುದಾಗಿ ದ‌.ಕ ಜಿಲ್ಲಾ ಉಸ್ತುವಾರಿ ಸಚಿವ ಯು‌.ಟಿ.ಖಾದರ್ ಮಾಹಿತಿ ನೀಡಿದ್ದಾರೆ. ಆದ್ರೆ ಖಾದರ್ ಸಾಹೇಬರ ಈ ನಡೆ ಎಷ್ಟರ ಮಟ್ಟಿಗೆ ಸರಿ ಎಂಬ ಮಾತು ಕೇಳಿ ಬಂದಿದ್ದು, ಖಾದರ್ ಮರಳು ದಂಧೆಕೋರರ ಬೆಂಬಲಕ್ಕೆ ನಿಂತ್ರಾ ಎನ್ನುವ ಆರೋಪ ಕೇಳಿ ಬಂದಿದೆ. ಇಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಖಾದರ್, ಮರಳು ದಂಧೆಗೆ ಪೊಲೀಸರು ಮತ್ತು ಅಧಿಕಾರಿಗಳು ದಾಳಿ ನಡೆಸಿ ಅಲ್ಲಿನ ವಸ್ತುಗಳನ್ನು ವಶಕ್ಕೆ ಪಡೆಯುತ್ತಾರೆ.‌ ಇವುಗಳಲ್ಲಿ ಅನೇಕ ಲಾರಿಗಳಿದ್ದು, ಜಿಲ್ಲೆಯ ಪೊಲೀಸ್ ಠಾಣೆಗಳ ಮುಂಭಾಗ ಸಾಲಾಗಿ ನಿಂತಿದೆ. ಇದರಿಂದ ಲಾರಿಗಳಿಗೆ ತುಕ್ಕು ಹಿಡಿದಿದ್ದು, ಸುಖಾಸುಮ್ನನೆ ಹಾಳಾಗುತ್ತಿದೆ. ಹೀಗಾಗಿ ಆ ಲಾರಿಗಳನ್ನು ಮಾಲೀಕರಿಗೆ ಬಿಡಿಸಿ ಕೊಡಲು ಜಿಲ್ಲಾಧಿಕಾರಿ ಜೊತೆ ಚರ್ಚಿಸಿದ್ದೇನೆ. ಒಂದು ಸಭೆ ಕರೆದು ಲಾರಿಗಳನ್ನು ರಿಲೀಸ್ ಮಾಡೋ ಬಗ್ಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದರು. ಆದ್ರೆ ಖಾದರ್ ಸಾಹೇಬರ ಈ ನಡೆ ಎಷ್ಟರ ಮಟ್ಟಿಗೆ ಸರಿ ಎನ್ನುವ ಮಾತು ಕೇಳಿ ಬಂದಿದೆ. ಇನ್ನು ಇದೇ ವೇಳೆ ಪತ್ರಕರ್ತರು ಖಾದರ್ ಅವರ ನಡೆಯ ಬಗ್ಗೆ ಪ್ರಶ್ನೆ ಮಾಡಿದ್ರು. ಅಕ್ರಮಕ್ಕೆ ಬೆಂಬಲ ಸರಿಯಾ ಅಂತ ಕೇಳಿದ್ರು. ಈ ವೇಳೆ ಸಮಜಾಯಿಷಿ ನೀಡಿದ ಸಚಿವ ಖಾದರ್, ನೀವು ಹೇಳೋದು ಸರಿ. ಹೀಗಾಗಿ ನಾನು ಕೂಡ ಹೆಚ್ಚು ಮಾತನಾಡಲ್ಲ. ಆದ್ರೆ ಮಾನವೀಯತೆ ದೃಷ್ಟಿಯಿಂದ ಡಿಸಿಯವರಿಗೆ ಹೇಳಿದೆ ಅಷ್ಟೇ. ಅನೇಕರು ಸಾಲ ಮಾಡಿ ಲಾರಿ ಖರೀದಿಸಿರುತ್ತಾರೆ. ಆದ್ರೆ ಈ ರೀತಿ ಆದಾಗ ಮನೆ ನೋಡಿಕೊಳ್ಳೋದು ಕಷ್ಟ. ಹೀಗಾಗಿ ಇದನ್ನು ಮಾನವೀಯತೆ ‌ದೃಷ್ಟಿಯಿಂದ ಕಾನೂನು ವ್ಯಾಪ್ತಿಯಲ್ಲಿ ಸರಿ ಪಡಿಸಲು ಹೇಳಿದ್ದೇನೆ ಎಂದರು. ಅದರೆ ಈ ರೀತಿ ಅಕ್ರಮ ಲಾರಿಗಳ ಪರ ಸಚಿವರೇ ಬ್ಯಾಟ್ ಬೀಸಿರೋದು ಸರಿಯಲ್ಲ ಎಂಬ ಮಾತುಗಳು ಕೇಳಿ ಬಂದಿದೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
Tulunadu News May 19, 2025
ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
Tulunadu News May 19, 2025
Leave A Reply

  • Recent Posts

    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
  • Popular Posts

    • 1
      ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • 2
      ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • 3
      ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • 4
      RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • 5
      ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search