• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಕ್ರಮ ಮರಳುಗಾರಿಕೆಗೆ ಸಚಿವರ ಬೆಂಬಲ.!

Tulunadu News Posted On November 17, 2018
0


0
Shares
  • Share On Facebook
  • Tweet It

ಮಂಗಳೂರು-ಅಕ್ರಮ ಮರಳುಗಾರಿಕೆ ವೇಳೆ ದಾಳಿ ನಡೆಸಿ ಪೊಲೀಸರು ವಶಕ್ಕೆ ಪಡೆದ ಲಾರಿಗಳನ್ನು ಅದರ ಮಾಲಕರಿಗೆ ವಾಪಾಸ್ ಕೊಡಿಸುವ ಸಂಬಂಧ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿರುವುದಾಗಿ ದ‌.ಕ ಜಿಲ್ಲಾ ಉಸ್ತುವಾರಿ ಸಚಿವ ಯು‌.ಟಿ.ಖಾದರ್ ಮಾಹಿತಿ ನೀಡಿದ್ದಾರೆ. ಆದ್ರೆ ಖಾದರ್ ಸಾಹೇಬರ ಈ ನಡೆ ಎಷ್ಟರ ಮಟ್ಟಿಗೆ ಸರಿ ಎಂಬ ಮಾತು ಕೇಳಿ ಬಂದಿದ್ದು, ಖಾದರ್ ಮರಳು ದಂಧೆಕೋರರ ಬೆಂಬಲಕ್ಕೆ ನಿಂತ್ರಾ ಎನ್ನುವ ಆರೋಪ ಕೇಳಿ ಬಂದಿದೆ. ಇಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಖಾದರ್, ಮರಳು ದಂಧೆಗೆ ಪೊಲೀಸರು ಮತ್ತು ಅಧಿಕಾರಿಗಳು ದಾಳಿ ನಡೆಸಿ ಅಲ್ಲಿನ ವಸ್ತುಗಳನ್ನು ವಶಕ್ಕೆ ಪಡೆಯುತ್ತಾರೆ.‌ ಇವುಗಳಲ್ಲಿ ಅನೇಕ ಲಾರಿಗಳಿದ್ದು, ಜಿಲ್ಲೆಯ ಪೊಲೀಸ್ ಠಾಣೆಗಳ ಮುಂಭಾಗ ಸಾಲಾಗಿ ನಿಂತಿದೆ. ಇದರಿಂದ ಲಾರಿಗಳಿಗೆ ತುಕ್ಕು ಹಿಡಿದಿದ್ದು, ಸುಖಾಸುಮ್ನನೆ ಹಾಳಾಗುತ್ತಿದೆ. ಹೀಗಾಗಿ ಆ ಲಾರಿಗಳನ್ನು ಮಾಲೀಕರಿಗೆ ಬಿಡಿಸಿ ಕೊಡಲು ಜಿಲ್ಲಾಧಿಕಾರಿ ಜೊತೆ ಚರ್ಚಿಸಿದ್ದೇನೆ. ಒಂದು ಸಭೆ ಕರೆದು ಲಾರಿಗಳನ್ನು ರಿಲೀಸ್ ಮಾಡೋ ಬಗ್ಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದರು. ಆದ್ರೆ ಖಾದರ್ ಸಾಹೇಬರ ಈ ನಡೆ ಎಷ್ಟರ ಮಟ್ಟಿಗೆ ಸರಿ ಎನ್ನುವ ಮಾತು ಕೇಳಿ ಬಂದಿದೆ. ಇನ್ನು ಇದೇ ವೇಳೆ ಪತ್ರಕರ್ತರು ಖಾದರ್ ಅವರ ನಡೆಯ ಬಗ್ಗೆ ಪ್ರಶ್ನೆ ಮಾಡಿದ್ರು. ಅಕ್ರಮಕ್ಕೆ ಬೆಂಬಲ ಸರಿಯಾ ಅಂತ ಕೇಳಿದ್ರು. ಈ ವೇಳೆ ಸಮಜಾಯಿಷಿ ನೀಡಿದ ಸಚಿವ ಖಾದರ್, ನೀವು ಹೇಳೋದು ಸರಿ. ಹೀಗಾಗಿ ನಾನು ಕೂಡ ಹೆಚ್ಚು ಮಾತನಾಡಲ್ಲ. ಆದ್ರೆ ಮಾನವೀಯತೆ ದೃಷ್ಟಿಯಿಂದ ಡಿಸಿಯವರಿಗೆ ಹೇಳಿದೆ ಅಷ್ಟೇ. ಅನೇಕರು ಸಾಲ ಮಾಡಿ ಲಾರಿ ಖರೀದಿಸಿರುತ್ತಾರೆ. ಆದ್ರೆ ಈ ರೀತಿ ಆದಾಗ ಮನೆ ನೋಡಿಕೊಳ್ಳೋದು ಕಷ್ಟ. ಹೀಗಾಗಿ ಇದನ್ನು ಮಾನವೀಯತೆ ‌ದೃಷ್ಟಿಯಿಂದ ಕಾನೂನು ವ್ಯಾಪ್ತಿಯಲ್ಲಿ ಸರಿ ಪಡಿಸಲು ಹೇಳಿದ್ದೇನೆ ಎಂದರು. ಅದರೆ ಈ ರೀತಿ ಅಕ್ರಮ ಲಾರಿಗಳ ಪರ ಸಚಿವರೇ ಬ್ಯಾಟ್ ಬೀಸಿರೋದು ಸರಿಯಲ್ಲ ಎಂಬ ಮಾತುಗಳು ಕೇಳಿ ಬಂದಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search